ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ಪೈ ಇಂಟರ್‌ನ್ಯಾಷನಲ್‌ ಮಳಿಗೆ


Team Udayavani, Jun 9, 2019, 3:04 AM IST

pai

ಬೆಂಗಳೂರು: ಪೈ ಇಂಟರ್‌ನ್ಯಾಷನಲ್‌ ಸಂಸ್ಥೆಯ 200ನೇ ವಾಣಿಜ್ಯ ಮಳಿಗೆ “ಪೈ ಇಂಟರ್‌ನ್ಯಾಷನಲ್‌ ಎಲೆಕ್ಟ್ರಾನಿಕ್ಸ್‌ ಮಲ್ಟಿ ಬ್ರಾಂಡ್‌ ಸ್ಟೋರ್‌ ಮತ್ತು ಫ‌ರ್ನಿಚರ್’ ಎಲೆಕ್ಟ್ರಾನಿಕ್‌ ಸಿಟಿ ಮೊದಲನೇ ಹಂತದ ನೀಲಾದ್ರಿ ನಗರ ಮುಖ್ಯ ರಸ್ತೆಯಲ್ಲಿ ಶನಿವಾರ ಉದ್ಘಾಟನೆಗೊಂಡಿತು.

ಮಲ್ಟಿಬ್ರಾಂಡ್‌ ಮತ್ತು ಫ‌ರ್ನಿಚರ್ ಉತ್ಪನ್ನಗಳು ಒಂದೇ ಕಡೆ ಮಾರಾಟಕ್ಕೆ ಲಭ್ಯವಿರುವ ಪೈ ಇಂಟರ್‌ನ್ಯಾಷನಲ್‌ ಮಳಿಗೆ ಇದಾಗಿದೆ. ನಾಲ್ಕು ಮಹಡಿಯ ಏಕ ಕಟ್ಟಡದಲ್ಲಿ ಈ ಮಳಿಗೆ ಇದ್ದು, ಮೊದಲೆರಡು ಮಹಡಿಯಲ್ಲಿ ಮೊಬೈಲ್‌ ಸೇರಿದಂತೆ ಎಲೆಕ್ಟ್ರಾನಿಕ್‌ ಉತ್ಪನ್ನಗಳನ್ನು, ಉಳಿದ ಎರಡು ಮಹಡಿಯಲ್ಲಿ ಅತ್ಯಾಕರ್ಷಕ ವಿನೂತನ ಮಾದರಿಯ ದೇಶಿ-ವಿದೇಶಿ ಪೀಠೊಪಕರಣಗಳು ಮಾರಾಟ ಮಾಡಲಾಗುತ್ತಿದೆ.

ಈ ನೂತನ ಮಳಿಗೆಯನ್ನು ನಗರ ಪೊಲೀಸ್‌ ಆಯುಕ್ತ ಟಿ.ಸುನೀಲ್‌ ಕುಮಾರ್‌ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಗ್ರಾಹಕರೊಂದಿಗೆ ನಿಷ್ಠೆ, ಶ್ರದ್ಧೆ, ಉತ್ತಮ ಗುಣಮಟ್ಟದ ಉತ್ಪನ್ನಗಳ ಮಾರಾಟವೇ ಪೈ ಇಂಟರ್‌ನ್ಯಾಷನಲ್‌ ಅವರ ಮುಖ್ಯ ಉದ್ದೇಶವಾಗಿದ್ದು, ಸಂಸ್ಥೆ ಸುಮಾರು ವರ್ಷಗಳಿಂದ ಅದನ್ನು ಪಾಲಿಸಿಕೊಂಡು ಬರುತ್ತಿದೆ. ಇದು ಇತರೆ ವಾಣಿಜ್ಯ ಮಳಿಗೆಗಳಿಗೂ ಮಾದರಿಯಾಗಬೇಕು. ಪೈ ಸಂಸ್ಥೆ ನಿರ್ದೇಶಕರು ಲಾಭಕ್ಕಿಂತ ಕಾರ್ಮಿಕರು, ಗ್ರಾಹಕರ ಹಿತ ಮುಖ್ಯ ಎನ್ನುತ್ತಾರೆ ಎಂದು ಶ್ಲಾಘಿಸಿದರು.

ಪೈ ಇಂಟರ್‌ನ್ಯಾಷನಲ್‌ ಸಂಸ್ಥೆಯ ಅವರ 200ನೇ ಮಳಿಗೆ ಉದ್ಘಾಟಿಸಿದ್ದು ಖುಷಿ ವಿಚಾರ. ಮುಂದಿನ ದಿನಗಳಲ್ಲಿ ಮಳಿಗೆ ಸಂಖ್ಯೆ ಹೆಚ್ಚಾಗಿ ಗ್ರಾಹಕರಿಗೆ ನಂಬಿಕಸ್ಥ ವ್ಯಾಪಾರ ವಹಿವಾಟು ಹಾಗೂ ಸಾಕಷ್ಟು ಯುವ ಜನತೆಗೆ ಉದ್ಯೋಗ ಲಭಿಸುವಂತಾಗಲಿ ಎಂದು ಆಶಿಸಿದರು.

ಪೈ ಇಂಟರ್‌ ನ್ಯಾಷನಲ್‌ ಎಲೆಕ್ಟ್ರಾನಿಕ್‌ ಲಿಮಿಟೆಡ್‌ನ‌ ವ್ಯವಸ್ಥಾಪಕ ನಿರ್ದೇಶಕ ರಾಜ್‌ಕುಮಾರ್‌ ಪೈ ಮಾತನಾಡಿ, 2000ನೇ ಇಸವಿಯಲ್ಲಿ ಬೆಂಗಳೂರಿನ ಇಂದಿರಾನಗರದಲ್ಲಿ ಪೈ ಮೊದಲ ಮಳಿಗೆ ಆರಂಭವಾಯಿತು. ಕಳೆದ 18 ವರ್ಷಗಳಲ್ಲಿ ಸಂಸ್ಥೆ ಕರ್ನಾಟಕ, ತೆಲಂಗಾಣ, ಆಂದ್ರಪ್ರದೇಶಗಳಲ್ಲಿ ವಿಸ್ತರಿಸಿದ್ದು, ಇಂದು 200ನೇ ಮಳಿಗೆ ಆರಂಭಿಸಲು ಹೆಮ್ಮೆ ಎನಿಸುತ್ತಿದೆ.

ಸಂಸ್ಥೆಗೆ ಗ್ರಾಹಕರ ಹಿತವೇ ಮುಖ್ಯವಾಗಿದ್ದು, ಹೀಗಾಗಿಯೇ ನೂರಕ್ಕೆ ನೂರು ಗುಣಮಟ್ಟದ ಉತ್ಪನ್ನಗಳಿಗೆ ನಾವು ಆದ್ಯತೆ ನೀಡುತ್ತಿದ್ದೇವೆ. ಸಂಸ್ಥೆ 2018 – 19ನೇ ಸಾಲಿನಲ್ಲಿ 1,400 ಕೋಟಿ ರೂ. ವಹಿವಾಟು ನಡೆಸಿದ್ದು, ಪ್ರಸ್ತಕ ಸಾಲಿನಲ್ಲಿ ವಹಿವಾಟನ್ನು 2,500 ಕೋಟಿ ರೂ.ಗೆ ಹೆಚ್ಚಿಸುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದರು.

ಗ್ರಾಹಕರಿಗಾಗಿ ಎಲೆಕ್ಟ್ರಾನಿಕ್‌ ಸರ್ವೀಸ್‌: ಇಂದು ಕೆಲ ಎಲೆಕ್ಟ್ರಾನಿಕ್‌ ಕಂಪನಿಗಳು ಸರ್ವೀಸ್‌ ಹೆಸರಿನಲ್ಲಿ ಗ್ರಾಹಕರಿಂದ ಸಾಕಷ್ಟು ಹಣ ಪಡೆಯುತ್ತಿದ್ದು, ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಪ್ರಸಕ್ತ ವರ್ಷದಲ್ಲಿಯೇ ನಮ್ಮ ಸಂಸ್ಥೆಯ ವತಿಯಿಂದ ಸರ್ವಿಸ್‌ ವಿಭಾಗ ಆರಂಭಿಸಲಾಗುವುದು. ಜತೆಗೆ ಒಂದು ಸಹಾಯವಾಣಿ ಆರಂಭಿಸಿ ಕರೆ ಮಾಡಿದ ಕೂಡಲೇ ಗ್ರಾಹಕರಿಗೆ ಶೀಘ್ರದಲ್ಲೆ ಸೇವೆ ಸಿಗಲಿದೆ ಎಂದು ರಾಜ್‌ಕುಮಾರ್‌ ಪೈ ತಿಳಿಸಿದರು.

ಮಾನ್ಸೂನ್‌ ಸೂಪರ್‌ ಸೇಲ್‌: ಸದ್ಯ ಪೈ ಇಂಟರ್‌ನ್ಯಾಷನಲ್‌ ಮಳಿಗೆಗಳಲ್ಲಿ ಮಾನ್ಸೂನ್‌ ಸೂಪರ್‌ ಸೇಲ್‌ ನಡೆಯುತ್ತಿದ್ದು, ಗ್ರಾಹಕರಿಗಾಗಿಯೇ 4 ಕೋಟಿ. ರೂ ಬಹುಮಾನ ಇಡಲಾಗಿದೆ. ಮುಂದಿನ ಮೂರು ತಿಂಗಳ ಕಾಲ ಪೈ ಮಳಿಗೆಯಲ್ಲಿ 2000 ರೂ. ಹಾಗೂ ಅದಕ್ಕೂ ಹೆಚ್ಚಿನ ಮೌಲ್ಯದ ಖರೀದಿ ಮಾಡುವ ಗ್ರಾಹಕರಿಗೆ ಬಹುಮಾನದ ಕೂಪನ್‌ ಲಭ್ಯವಾಗಲಿದೆ. ಸೂಪರ್‌ ಸೇಲ್‌ ಮುಗಿದ ಬಳಿಕ ಅಂತಿಮವಾಗಿ ಲಕ್ಕಿ ಡ್ರಾ ನಡೆಸಿ, ಅದೃಷ್ಟಶಾಲಿ ಗ್ರಾಹಕರಿಗೆ 50 ಸಾವಿರ ರೂ. ಮೌಲ್ಯದ ಉತ್ಪನ್ನ ಖರೀದಿ ಅವಕಾಶ ಸೇರಿದಂತೆ ವಿಶೇಷ ಬಹುಮಾನ ನೀಡಲಾಗುತ್ತದೆ ಎಂದು ಪೈ ಇಂಟರ್‌ನ್ಯಾಷನಲ್‌ನ ಹಣಕಾಸು ವಿಭಾಗದ ಮುಖ್ಯಸ್ಥರು ತಿಳಿಸಿದರು.

ಆಕರ್ಷಕ ಪೀಠೊಪಕರಣಗಳು: ಈ ಹೊಸ ಮಳಿಗೆಯಲ್ಲಿ ಉತ್ತಮ ಗುಣಮಟ್ಟದ ಮರಗಳಿಂದ ತಯಾರಿಸಿದ ಡೈನಿಂಗ್‌ ಹಾಗೂ ಕಾಫಿ ಟೇಬಲ್‌, ಕುರ್ಚಿ, ಹಾಸಿಗೆ, ಮಂಚ ಸೇರಿದಂತೆ ವಿವಿಧ ಪೀಠೊಪಕರಣಗಳು ಲಭ್ಯವಿವೆ. ದೇಶಿ, ವಿದೇಶಿ ಹಾಗೂ ಎಲ್ಲಾ ಮಾದರಿಯ ಬ್ರಾಂಡೆಡ್‌ ಪೀಠೊಪಕರಣಗಳು ಇಲ್ಲಿ ದೊರೆಯುತ್ತವೆ. ವಿಶೇಷ ಕುಶನರಿ ಸೋಫಾಗಳು, ಮಲೇಶಿಯನ್‌ ಪೀಠೊಪಕರಣಗಳು ಗ್ರಾಹಕರನ್ನು ಹೆಚ್ಚು ಆಕರ್ಷಿಸುತ್ತಿವೆ. ಈ ಎಲ್ಲಾ ಉತ್ಪನ್ನಗಳನ್ನು ಮಧ್ಯಮ ವರ್ಗದ ಗ್ರಾಹಕರಿಗೆಂದೇ ಪೈ ವಿಶೇಷ ಬೆಲೆಯಲ್ಲಿ ನೀಡುತ್ತಿದೆ.

ವ್ಯಾಪಾರ ವಹಿವಾಟಿನೊಂದಿಗೆ ಸಂಸ್ಥೆಯು ಸಾಮಾಜಿಕ ಕಾರ್ಯಗಳಲ್ಲೂ ತೊಡಗಿಕೊಂಡಿದ್ದು, ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ, ಹಿರಿಯ ಜೀವಿಗಳ ಆಶ್ರಯಕ್ಕಾಗಿ ವಿಶೇಷ ಕಾರ್ಯಕ್ರಮ ನಡೆಸುತ್ತಿದ್ದೇವೆ. ಪರಿಸರ ಸಂರಕ್ಷಣೆ ಉದ್ದೇಶದಿಂದ ನಾಡಿನಾದ್ಯಂತ ಒಂದು ಕೋಟಿ ಸಸಿ ನೆಡುವ ಆಶಯವನ್ನು ಪೈ ಸಂಸ್ಥೆ ಹೊಂದಿದ್ದು, ಮುಂದಿನ ದಿಗಳಲ್ಲಿ ಇದಕ್ಕಾಗಿ ಯೋಜನೆ ರೂಪಿಸಲಿದ್ದೇವೆ.
-ರಾಜ್‌ಕುಮಾರ್‌ ಪೈ, ಪೈ ಇಂಟರ್‌ ನ್ಯಾಷನಲ್‌ ಎಲೆಕ್ಟ್ರಾನಿಕ್‌ ಲಿಮಿಟೆಡ್‌ನ‌ ವ್ಯವಸ್ಥಾಪಕ ನಿರ್ದೇಶಕ

ಟಾಪ್ ನ್ಯೂಸ್

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.