ಗುಂಡಿ ಬಿದ್ದು ವರ್ಷವಾದ್ರೂ ದುರಸ್ತಿ ಇಲ್ಲ


Team Udayavani, Jun 9, 2019, 1:12 PM IST

kolar-tdy-1..

ಬಂಗಾರಪೇಟೆ: ಪ್ರತಿ ದಿನ ಸಾವಿರಾರು ವಾಹನಗಳು, ಸಾರ್ವಜನಿಕರು ಹೆಚ್ಚಾಗಿ ಓಡಾಡುವ ರಸ್ತೆಯಲ್ಲಿ ಗುಂಡಿ ಬಿದ್ದು ವರ್ಷ ಕಳೆದರೂ ದುರಸ್ತಿ ಭಾಗ್ಯ ಇಲ್ಲ. ಅನುದಾನ ಬಿಡುಗಡೆಯಾಗಿದ್ದರೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯವಹಿಸಿರುವುದು ಏಕೆ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಕಾಡುತ್ತಿದೆ.

ಪಟ್ಟಣದಿಂದ ಎರಡು ಕಿ.ಮೀ. ದೂರದ ದಿನ್ನಕೊತ್ತೂರು ಗ್ರಾಮದ ಮಧ್ಯೆ ಹಾದುಹೋಗುವ ಕಾಮಸಮುದ್ರ ರಸ್ತೆಯಲ್ಲಿ ಮೊಣಕಾಲುದ್ದ ಗುಂಡಿ ಬಿದ್ದು ವರ್ಷವೇ ಕಳೆದಿದೆ. ನಿತ್ಯ ಈ ರಸ್ತೆಯಲ್ಲೇ ಓಡಾಡುವ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗಳು ಗುಂಡಿಗಳನ್ನು ನೋಡಿಯೂ ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದ್ದಾರೆ.

ಬಂಗಾರಪೇಟೆಯಿಂದ ಕಾಮಸಮುದ್ರ ಹೋಬಳಿಗೆ ಹೋಗಿ ಬರುವ ಈ ಪ್ರಮುಖ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿವೆ. ಬಂಗಾರಪೇಟೆ ದೇಶಿಹಳ್ಳಿಯಿಂದ ಕಾಮಸಮುದ್ರದವರೆಗೂ ಲೋಕೋಪಯೋಗಿ ಇಲಾಖೆಯಿಂದ ಉತ್ತಮ ರಸ್ತೆ ನಿರ್ಮಿಸಲಾಗಿತ್ತು. ಆದರೆ, ಸಮರ್ಪಕ ನಿರ್ವಹಣೆ ಮಾಡದ ಕಾರಣ ದಿನ್ನಕೊತ್ತೂರು ಗ್ರಾಮದ ಬಳಿ ದೊಡ್ಡ ಗುಂಡಿಗಳು ಬಿದ್ದಿದ್ದು, ವಾಹನಗಳ ಸವಾರರು ಜೀವ ಕೈಯಲ್ಲಿಡಿದು ಓಡಾಡಬೇಕಿದೆ.

ರಾತ್ರಿವೇಳೆ ಯಾವುದಾದ್ರೂ ವಾಹನ ವೇಗವಾಗಿ ಬಂದರೆ ಗುಂಡಿಯಲ್ಲಿ ಬಿದ್ದು ಗಾಯಮಾಡಿಕೊಳ್ಳುವುದರಲ್ಲಿ ಸಂಶಯವಿಲ್ಲ. ದಿನ್ನಕೊತ್ತೂರು ಗ್ರಾಮದ ಬಳಿ ಗುಂಡಿಗಳನ್ನು ತಪ್ಪಿಸಲು ಹೋಗಿ ನಾಯಿ, ಕುರಿ ಸೇರಿ ಇತರೆ ಪ್ರಾಣಿಗಳ ಮೇಲೆ ವಾಹನಗಳು ಹರಿದು ಸಾವನ್ನಪ್ಪುವುದು ಸರ್ವೆ ಸಾಮಾನ್ಯವಾಗಿದೆ. ಇದರ ಜೊತೆಗೆ ಮಕ್ಕಳೂ ಅಪಘಾತಕ್ಕೆ ಒಳಗಾಗಿದ್ದು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ ಎನ್ನುವುದು ಸಾರ್ವಜನಿಕರ ಆರೋಪವಾಗಿದೆ.

ವರ್ಷದ ಹಿಂದೆ ಕಾಮಸಮುದ್ರ ರಸ್ತೆಯನ್ನು ಅಭಿವೃದ್ಧಿ ಮಾಡಿದ್ದರೂ ದಿನ್ನಕೊತ್ತೂರು ಗ್ರಾಮದ ಬಳಿ ಕಿರಿದಾದ ಗುಂಡಿ ಬಿದ್ದಿತ್ತು. ಇದರಿಂದ ಎಚ್ಚೆತ್ತುಕೊಳ್ಳದ ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ಗಳು ನಿರ್ಲಕ್ಷ್ಯವಹಿಸಿದ್ದರಿಂದ ಪ್ರಸ್ತುತ ದೊಡ್ಡ ಗುಂಡಿಯಾಗಿ ಹಾಗೂ ರಸ್ತೆಯೂ ಕಿತ್ತುಹೋಗಿ ದೊಡ್ಡ ಪ್ರಮಾಣದಲ್ಲಿ ರಸ್ತೆಯು ದುರಸ್ತಿಗೊಂಡಿದೆ.

● ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.