ಲಾಭದಲ್ಲಿ ವಿಮುಲ್ಗೆ 2ನೇ ಸ್ಥಾನ

•ಕಳೆದ ಆರ್ಥಿಕ ವರ್ಷದಲ್ಲಿ 250 ಕೋಟಿ ವಹಿವಾಟು•2.92 ಕೋಟಿ ರೂ. ನಿವ್ವಳ ಲಾಭ

Team Udayavani, Jun 11, 2019, 10:01 AM IST

vp-tdy-1..

ವಿಜಯಪುರ: ವಿಜಯಪುರ-ಬಾಗಲಕೋಟೆ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಕಚೇರಿ.

ವಿಜಯಪುರ : ಭೀಕರ ಬರದ ಮಧ್ಯೆಯೂ ವಿಜಯಪುರ-ಬಾಗಲಕೋಟೆ ಹಾಲು ಉತ್ಪಾದಕರ ಸಂಘದ ಒಕ್ಕೂಟ 2018-19ನೇ ಆರ್ಥಿಕ ವರ್ಷದಲ್ಲಿ ಇತರೆ ಜಿಲ್ಲೆಗಳಿಗಿಂತ ಹೆಚ್ಚು ಲಾಭದಲ್ಲಿದ್ದು, ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ. 250.62 ಕೋಟಿ ರೂ. ವಹಿವಾಟು ನಡೆಸಿರುವ ವಿಮುಲ್, 27.07 ಕೋಟಿ ರೂ. ಲಾಭ ಹಾಗೂ 2.92 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ ಎಂದು ವಿಮುಲ್ ಒಕ್ಕೂಟದ ನಿರ್ದೇಶಕ ಶ್ರೀಶೈಲಗೌಡ ಪಾಟೀಲ ಮಾಹಿತಿ ನೀಡಿದರು.

ನಗರದ ಹೊರವಲಯದ ಭೂತನಾಳ ಬಳಿ ಇರುವ ವಿಜಯಪುರ-ಬಾಗಲಕೋಟೆ ಹಾಲು ಉತ್ಪಾದಕರ ಸಂಘದ ಒಕ್ಕೂಟ (ಕೆಎಂಎಫ್) ಆಡಳಿತ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಹಿಂದಿನ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಶೇ.14.5 ಹೆಚ್ಚು ವಹಿವಾಟು ಹೆಚ್ಚಾಗಿದೆ. ಬರದ ಹಿನ್ನೆಲೆಯಲ್ಲಿ ಅವಳಿ ಜಿಲ್ಲೆಯಲ್ಲಿ ಹಾಲು ಉತ್ಪಾದನೆಯಲ್ಲಿ ದಾಖಲೆ ಮಾಡಿದ್ದು, ಐಎಸ್‌ಒ 22000 ಗುಣಮಟ್ಟದ ಪ್ರಮಾಣಪತ್ರ ಹೊಂದಿದೆ. ಏಪ್ರಿಲ್ನಿಂದಲೇ ಹಾಲು ಉತ್ಪಾದಕರ ಖಾತೆಗೆ ಸರ್ಕಾರದಿಂದ ನೇರವಾಗಿ ಅವರ ಖಾತೆಗೆ ಹಣ ಜಮೆಯಾಗುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಹಾಲು ಖರೀದಿ ದರದಲ್ಲಿ 1ರೂ. ಹೆಚ್ಚಿಸಲಾಗಿದೆ. ಜಿಲ್ಲೆಯಲ್ಲಿ ಭೀಕರ ಬರ ಆವರಿಸಿರುವ ಕಾರಣ ಆವಳಿ ಜಿಲ್ಲೆಗಳ ಹಾಲು ಉತ್ಪಾದಕರನ್ನು ಆರ್ಥಿಕ ಸಬಲೀಕರಣ ಮಾಡುವುದಕ್ಕಾಗಿ 3ಕೋಟಿ ರೂ. ನೆರವು ನೀಡಲಾಗಿದೆ. ಪ್ರತಿ 50 ಕೆ.ಜಿ ಚೀಲ ಪಶು ಆಹಾರಕ್ಕೆ 100ರೂ. ರಿಯಾಯಿತಿ ನೀಡಲಾಗಿದೆ ಎಂದು ವಿವರಿಸಿದರು.

ಒಕ್ಕೂಟದ ವ್ಯಾಪ್ತಿಯಲ್ಲಿ 459 ಹಾಲು ಉತ್ಪಾದನೆ ಸಂಘಗಳಿದ್ದು, ಒಟ್ಟು 67,153 ಸದಸ್ಯರು ನಿತ್ಯವೂ ಹಾಲು ಪೂರೈಸುತ್ತಿದ್ದಾರೆ. 824 ಹಾಲು ವಿತರಕರಿದ್ದು, 16ಕ್ಷೀರ ಮಳಿಗೆ ಹೊಂದಿದೆ. 68 ನಂದಿನಿ ಪ್ರಾಂಚೈಸಿ ಹೊಂದಿದ್ದು, ಮಹಾರಾಷ್ಟ್ರದ ಸೋಲಾಪುರ, ಅಕ್ಕಲಕೋಟ, ಉಸ್ಮಾನಾಬಾದ್‌ ಹಾಗೂ ತೆಲಂಗಾಣದ ಹೈದ್ರಾಬಾದ್‌ ಮಾರುಕಟ್ಟೆಗೆ ಪ್ರತಿ ದಿನ 10 ಸಾವಿರ ಲೀ. ಹಾಲು ಮಾರಾಟ ಮಾಡಲಾಗುತ್ತಿದೆ ಎಂದು ವಿವರಿಸಿದರು.

ಸದ್ಯ ನಮ್ಮ ಒಕ್ಕೂಟದ ವ್ಯಾಪ್ತಿಯಲ್ಲಿ ನಿತ್ಯವೂ 1.75ಲಕ್ಷ ಲೀಟರ್‌ ಹಾಲು ಉತ್ಪಾದಿಸುತ್ತಿದ್ದು, ಭವಿಷ್ಯದ 5 ವರ್ಷಗಳಲ್ಲಿ ವಿಮುಲ್ 3 ಲಕ್ಷ ಲೀಟರ್‌ ಹಾಲು ಉತ್ಪಾದನೆ ಗುರಿ ಹಾಕಿಕೊಳ್ಳಲಾಗಿದೆ. ನಿತ್ಯ 64.7 ಸಾವಿರ ಲೀಟರ್‌ ಹಾಲು ಮಾರಾಟ ಮಾಡಲಾಗುತ್ತಿದೆ. 65 ಸಾವಿರ ಲೀಟರ್‌ ಬಲ್ಕ್ ಹಾಲು ಮಾರಾಟವಾಗುತ್ತಿದೆ. ಕ್ಷೀರಭಾಗ್ಯ ಯೋಜನೆಯಡಿ 65 ಸಾವಿರ ಲೀಟರ್‌ ಹಾಲು ನೀಡಲಾಗುತ್ತಿದೆ ಎಂದರು.

ಇದಲ್ಲದೇ ಪ್ರತಿ ತಿಂಗಳು 8 ಮೆಟ್ರಿಕ್‌ ಟನ್‌ ತುಪ್ಪ ಮಾರಾಟ ಮಾಡಲಾಗುತ್ತಿದೆ. 11ಮೆಟ್ರಿಕ್‌ ಟನ್‌ ನಂದಿನಿ ಉತ್ಪನ್ನಗಳಾದ ಪೇಡಾ, ಮಸಾಲಾ ಮಜ್ಜಿಗೆ, ಲಸ್ಸಿ, ಬೆಣ್ಣೆ, ಸುವಾಸಿತ ಹಾಲು, ಜಾಮೂನ್‌ ಮಿಕ್ಸ್‌, ಜಾಮೂನ್‌, ರಸಗುಲ್ಲಾ, ಪನ್ನೀರ್‌, ಧಾರವಾಡ ಪೇಡಾ, ಬೆಳಗಾವಿ ಕುಂದಾ, ಐಸ್‌ಕ್ರೀಂ, ಹಾಲಿನ ಪುಡಿ ಹಾಗೂ ಇತರ ಸಿಹಿ ಸೇರಿದಂತೆ 3 ಸಾವಿರ ಲೀ. ಹಾಲಿನಿಂದ ವಿವಿಧ ಉತ್ಪನ್ನಗಳ ತಯಾರಿಸಲಾಗುತ್ತದೆ. 8,091 ಕೆಜಿ ಮೊಸರು ಉತ್ಪಾದನೆಯೂ ಇದೆ ಎಂದರು.

ಬಾಗಲಕೋಟೆ ಜಿಲ್ಲೆಯಲ್ಲಿ 1ಲಕ್ಷ ಲೀಟರ್‌ ಸಾಮರ್ಥ್ಯದ 22 ಕೋಟಿ ರೂ. ವೆಚ್ಚದಲ್ಲಿ ಡೇರಿ ನಿರ್ಮಾಣ ಯೋಜನೆ ರೂಪಿಸಲಾಗಿದ್ದು, 9.30 ಕೋಟಿ ರೂ. ವೆಚ್ಚದಲ್ಲಿ ಸಿವಿಲ್ ಕಾಮಗಾರಿ, ಮೆಕ್ಯಾನಿಕಲ್ ಮತ್ತು ಇಲೆಕ್ಟ್ರಿಕಲ್ ಕಾಮಗಾರಿ, 40 ಲಕ್ಷ ರೂ. ವೆಚ್ಚದಲ್ಲಿ ಪ್ಯಾಂಕಿಂಗ್‌ ಯಂತ್ರ ಅಳವಡಿಕೆ ಮಾಡಲು ಯೋಜಿಸಲಾಗಿದೆ. ಇದಲ್ಲದೇ ಜಮಖಂಡಿಯಲ್ಲಿ 10 ಮೆಟ್ರಿಕ್‌ ಟನ್‌ ಸಾಮರ್ಥ್ಯದ 25 ಕೋಟಿ ರೂ. ವೆಚ್ಚದಲ್ಲಿ ಹಾಲಿನ ಪುಡಿ ತಯಾರಿಕೆ ಘಟಕ ಸ್ಥಾಪನೆ, ವಿಜಯಪುರ ಡೇರಿಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ರೆಫ್ರಿಜಿರೇಷನ್‌ ವ್ಯವಸ್ಥೆ ಬಲವರ್ಧನೆ ಮತ್ತು ಕೋಲ್ಡ್ ರೂಂ, 5 ಸಾವಿರ ಲೀ. ಸಾಮರ್ಥ್ಯದ ಐಸ್‌ಕ್ರಿಂ ತಯಾರಿಕೆ ಘಟಕ, ಪರಿಸರ ಸಂರಕ್ಷಣೆಗಾಗಿ 500 ಔಷಧೀಯ ಹಾಗೂ ಇತರ ಸಸಿಗಳನ್ನು ನೆಡುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.

ಸಂಘದ ನಿರ್ದೇಶಕರಾದ ಸಂಗಣ್ಣ ಹಂಡಿ, ಅಶ್ವಿ‌ನಿ ಹಳ್ಳೂರ, ಮಹಾದೇವಪ್ಪ ಹನಗಂಡಿ, ಸಿದ್ದಪ್ಪ ಕಡಪಟ್ಟಿ, ಸಂಜಯ ತಳೇವಾಡ, ಸಂಘದ ವ್ಯವಸ್ಥಾಪಕ ನಿರ್ದೇಶಕ ಡಿ.ಅಶೋಕ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.