ಸಿಎಫ್ಟಿಆರ್‌ಐನಲ್ಲಿ ಉದ್ಯಮಿಗಳ ಸಮಾವೇಶ


Team Udayavani, Jun 12, 2019, 3:00 AM IST

cftri

ಮೈಸೂರು: ಆಹಾರೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರತರಾಗಿರುವ ಉದ್ಯಮಗಳು ಹಾಗೂ ಸಂಸ್ಥೆಗಳ ಜೊತೆಗೂಡಿ ತಾನು ಮುಂದೆ ಕೈಗೊಳ್ಳಬೇಕಾದ ಸಂಶೋಧನೆಗಳ ಕುರಿತು ಚಿಂತನ ನಡೆಸಲು ಮೈಸೂರಿನ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯವು (ಸಿಎಫ್ಟಿಆರ್‌ಐ) ಇದೇ ಮೊದಲ ಬಾರಿಗೆ ಒಂದು ದಿನದ ಉದ್ಯಮಿಗಳ ಸಮಾವೇಶ ಆಯೋಜಿಸಿತ್ತು.

ದೆಹಲಿಯ ವೈಜ್ಞಾನಿಕ ಹಾಗೂ ಔದ್ಯಮಿಕ ಸಂಶೋಧನಾ ಮಂಡಳಿಯ ಮಹಾ ನಿರ್ದೇಶಕ ಪ್ರೊ. ಶೇಖರ ಮಾಂಡೆ ಎಲೆಕ್ಟ್ರಾನಿಕ್‌ ಮಾಧ್ಯಮದ ಮೂಲಕ ಸಮಾವೇಶವನ್ನು ಉದ್ಘಾಟಿಸಿದರು. ಸಿಎಸ್‌ಐಆರ್‌-ಈಶಾನ್ಯ ಭಾರತದ ವಿಜ್ಞಾನ ಮತ್ತು ತಂತ್ರಜ್ಞಾನ ಸಂಶೋಧನಾಲಯದ ನಿರ್ದೇಶಕ ಡಾ.ಜಿ. ನರಹರಿ ಶಾಸ್ತ್ರಿಯವರು ಗೌರವ ಅತಿಥಿಗಳಾಗಿ ಭಾಗವಹಿಸಿದ್ದರು.

ಸಮಾವೇಶದಲ್ಲಿ 30 ಆಹಾರ ಉದ್ಯಮ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡು ಉದ್ಯಮಕ್ಕೆ ನೆರವಾಗಬಲ್ಲ ಸಂಶೋಧನೆಗಳ ಬಗ್ಗೆ ತಮ್ಮ ದೃಷ್ಟಿಕೋನವನ್ನು ಮಂಡಿಸಿದರು. ಸಮಾವೇಶದಲ್ಲಿ ಬೃಹತ್‌ ಉದ್ಯಮಗಳಾದ ನೆಸ್ಲೆ ಇಂಡಿಯಾ, ಬ್ಯೂಲರ್‌ ಸಂಸ್ಥೆ, ಮ್ಯಾರಿಕೋ, ಟಾಟಾ ಗ್ಲೋಬಲ್‌ ಬೀವರೇಜಸ್‌ ಅಲ್ಲದೆ ಹೊಸ ಉದ್ಯಮಗಳಾದ ನ್ಯೂಟ್ರಿಪ್ಲಾನೆಟ್, ಸರೇಧ, ಎಕೊrವೇಟ್‌ ಹಾಗೂ ಇತರೆ ಪ್ರತಿನಿಧಿಗಳಿದ್ದರು. ತೈಲ, ಮಾಂಸ ಮತ್ತು ಕುಕ್ಕುಟ ಉದ್ಯಮ, ಪ್ರೋಟಿನ್‌ ಆಹಾರಗಳು, ಮಸಾಲೆ ಹಾಗೂ ಪೇಯಗಳು, ಪ್ಯಾಕೇಜಿಂಗ್‌ ಮತ್ತು ನವೋದ್ಯಮ ಕ್ಷೇತ್ರಗಳಲ್ಲಿನ ಉದ್ಯಮಗಳವರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಚಿಂತನ ಮಂಥನ ಉದ್ಘಾಟಿಸಿದ ಸಿಎಫ್ಟಿಆರ್‌ಐ ನಿರ್ದೇಶಕ ಡಾ.ಕೆಎಸ್‌ಎಂಎಸ್‌ ರಾಘವರಾವ್‌, ಸಂಸ್ಥೆಯ ಸಾಮರ್ಥ್ಯ, ಸಂಸ್ಥೆಯ ಮುಂದಿರುವ ಅವಕಾಶಗಳು, ಸಂಸ್ಥೆಯ ದೋಷಗಳನ್ನು ಕೈಗಾರಿಕಾ ಪ್ರತಿನಿಧಿಗಳ ಮುಂದೆ ವಿಶ್ಲೇಷಿಸಿದರು. ಹೊಸದೊಂದು ಆಹಾರ ಕೈಗಾರಿಕೋದ್ಯಮವನ್ನು ಕಟ್ಟಿ ಬೆಳೆಸುವ ದಿಕ್ಕಿನಲ್ಲಿ ಸಿಎಸ್‌ಐಆರ್‌ ಸಿಎಫ್ಟಿಆರ್‌ಐಯನ್ನು ಕೈಗಾರಿಕೆಯ ಜ್ಞಾನ ಸಹಯೋಗಿಯನ್ನಾಗಿ ಗುರುತಿಸಬೇಕೆಂದು ಉದ್ಯಮಿಗಳನ್ನು ವಿನಂತಿಸಿದರು.

ಸಮಾವೇಶದಲ್ಲಿ ಆಹಾರ ಸಂಸ್ಕರಣೆ ಮತ್ತು ಇಂಜಿನಿಯರಿಂಗ್‌, ಜೈವಿಕ ತಂತ್ರಜ್ಞಾನ, ಆಹಾರೌಷಧಗಳು ಮತ್ತು ಸ್ವಾಸ್ಥ್ಯ, ಸಂಸ್ಕರಿತ ಆಹಾರಗಳು ಹಾಗೂ ಪೇಯಗಳು, ಆಹಾರ ಸರಬರಾಜು ಮತ್ತು ಪ್ಯಾಕೇಜಿಂಗ್‌, ನವೋದ್ಯಮ ಮತ್ತು ಉದ್ಯಮಶೀಲತೆ ಎಂಬ ಐದು ಪ್ರಮುಖ ವಿಷಯಗಳನ್ನು ಕುರಿತು ಚಿಂತಿಸಲಾಯಿತು. ಪ್ರತಿ ಕ್ಷೇತ್ರದ ಬೆಳೆವಣಿಗೆಗೆ ಸಿಎಫ್ಟಿಆರ್‌ಐ ನೀಡಬಹುದಾದ ಜ್ಞಾನ ಹಾಗೂ ತಂತ್ರಜ್ಞಾನಗಳನ್ನು ಪ್ರದರ್ಶಿಸಲಾಯಿತಲ್ಲದೆ, ಉದ್ಯಮಗಳು ಹಾಗೂ ಸಂಸ್ಥೆಗಳು ಜೊತೆಯಾಗಿ ವ್ಯವಹರಿಸಬಹುದಾದ ವಿಷಯಗಳನ್ನು ಪಟ್ಟಿ ಮಾಡಲಾಯಿತು.

ಸಮಾವೇಶದ ಅಂಗವಾಗಿ ನಡೆದ ವಸ್ತು ಪ್ರದರ್ಶನದಲ್ಲಿ ಈ ಐದು ಕ್ಷೇತ್ರಗಳಲ್ಲಿ ಸಿಎಫ್ಟಿಆರ್‌ಐ ಸಿದ್ಧಪಡಿಸಿರುವ ಹೊಸ ಉತ್ಪನ್ನಗಳು ಹಾಗೂ ಯಂತ್ರೋಪಕರಣಗಳನ್ನು ಪ್ರದರ್ಶಿಸಲಾಯಿತು. ಇದಲ್ಲದೆ ವಿವಿಧ ಕೈಗಾರಿಕೆಗಳ ಜೊತೆಗೆ ಸಿಎಸ್‌ಐಆರ್‌-ಸಿಎಫ್ಟಿಆರ್‌ಐ ಮಾಡಿಕೊಂಡ ಹತ್ತು ಒಡಂಬಡಿಕೆಗಳಿಗೆ ಸಹಿ ಹಾಕಿ, ವಿನಿಮಯ ಮಾಡಿಕೊಳ್ಳಲಾಯಿತು.

ಕೈಗಾರಿಕೆಯ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸಂಸ್ಥೆಯ ಜೊತೆಗೆ ಯಾವ್ಯಾವ ಕ್ಷೇತ್ರದಲ್ಲಿ ಸಹಯೋಗ, ಸಹಕಾರ ಹಾಗೂ ಒಡನಾಟ ಮುಂದುವರಿಯಬೇಕೆನ್ನುವ ಬಗ್ಗೆ ಒಂದು ವರದಿಯ ಕರಡನ್ನು ಸಿದ್ಧಪಡಿಸುವುದರೊಂದಿಗೆ ಸಮಾವೇಶವು ಸಮಾರೋಪಗೊಂಡಿತು.

ಟಾಪ್ ನ್ಯೂಸ್

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

4

Karkala: ಈ ರಸ್ತೆಯಲ್ಲಿ ಬಸ್‌ ತಂಗುದಾಣಗಳೇ ಇಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.