![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jun 12, 2019, 3:03 AM IST
ಬೆಂಗಳೂರು: ರಾಜ್ಯ ಸರ್ಕಾರ ಜಿಂದಾಲ್ ಕಂಪನಿಗೆ 3,667 ಎಕರೆ ಭೂಮಿಯನ್ನು ಅಗ್ಗದ ದರಕ್ಕೆ ಮಾರಾಟ ಮಾಡುವ ಬದಲು ಗುತ್ತಿಗೆ ಆಧಾರದಲ್ಲಿ ಭೂಮಿ ನೀಡಲಿ ಎಂದು ಸಮಾಜ ಪರಿವರ್ತನಾ ಸಮುದಾಯದ ಸ್ಥಾಪಕ ಎಸ್.ಆರ್ ಹಿರೇಮಠ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಂಪನಿಗಳಿಗೆ ಭೂಮಿ ನೀಡುವುದರಿಂದ ಅವು ದಿವಾಳಿ ಸ್ಥಿತಿ ತಲುಪಿದಾಗ ಭೂಮಿಯನ್ನು ಕಂಪನಿಯ ಮಾಲೀಕರು ಮಾರಾಟ ಮಾಡುತ್ತಾರೆ. ಇದರಿಂದ ಸರ್ಕಾರಕ್ಕೂ ನಷ್ಟ ಉಂಟಾಗಲಿದೆ ಎಂದರು.
ಅಕ್ರಮ ಗಣಿಗಾರಿಕೆಯ ಬಗ್ಗೆ ಲೋಕಾಯುಕ್ತ ನೀಡಿದ ವರದಿಯಲ್ಲಿ ಜಿಂದಾಲ್ ಕಂಪನಿಯ ಹೆಸರೂ ಇದೆ. ಸರ್ಕಾರಿ ಸ್ವಾಮ್ಯದ ಮಿನರಲ್ ಕಂಪನಿಗೆ ಜಿಂದಾಲ್ ಕಂಪನಿ ಹಣ ಬಾಕಿ ಉಳಿಸಿಕೊಂಡಿದೆ. ಒಂದು ವೇಳೆ ಒಪ್ಪಂದ ಪ್ರಕಾರ ಜಮೀನನ್ನು ನೀಡಲೇಬೇಕಾದ ಪರಿಸ್ಥಿತಿ ನಿರ್ಮಾಣವಾದರೆ ಗುತ್ತಿಗೆ ಆಧಾರದಲ್ಲಿ ಮಾತ್ರ ನೀಡಬೇಕು ಎಂದು ಒತ್ತಾಯಿಸಿದರು.
You seem to have an Ad Blocker on.
To continue reading, please turn it off or whitelist Udayavani.