ಬದುಕಲು ಅವಕಾಶ ಕೊಡಿ

•ಅಂಗಲಾಚಿದ ಹೆದ್ದಾರಿಯಂಚಿನ ನಿವಾಸಿಗರು•ಶೀಘ್ರ ಸೂರು ಒದಗಿಸಲು ಒತ್ತಾಯ

Team Udayavani, Jun 12, 2019, 11:58 AM IST

uk-tdy-2..

ಅಂಕೋಲಾ: ಅಜ್ಜಿಕಟ್ಟಾದಲ್ಲಿ ಚತುಷ್ಪಥ ಹೆದ್ದಾರಿ ಕಾಮಗಾರಿಯಿಂದ ಅಪಾಯದ ಅಂಚಿಗೆ ನಿಂತಿರುವ ಮನೆಗಳು.

ಅಂಕೋಲಾ: ಮಳೆ ಬಂದು ಕೆರೆ ಹಳ್ಳ ಬಾವಿಗಳನ್ನು ತುಂಬಿಸಿ ನೀರಿನ ದಾಹ ನಿಗಿಸು ಎಂದು ಜನರು ಮಳೆಗೆ ಪ್ರಾರ್ಥಿಸಿದರೆ ಇತ್ತ ಮಳೆಯೆ ಬಾರದೇ ಇರಲಿ ಎಂದು ಕೆಲವು ಕುಟುಂಬ ಪ್ರಾರ್ಥಿಸುತ್ತ ತಮ್ಮ ಜೀವವನ್ನು ಅಂಗೈಯಲ್ಲಿ ಹಿಡಿದುಕೊಂಡು ಜೀವನ ನಡೆಸುತ್ತಿದ್ದ ಮನ ಕಲುಕುವ ಘಟನೆಗೆ ಚತುಷ್ಪಥ ಹೆದ್ದಾರಿ ಕಾಮಗಾರಿ ಗುತ್ತಿಗೆ ಪಡೆದ ಐಆರ್‌ಬಿ ಕಂಪನಿ ಎಡೆಮಾಡಿಕೊಟ್ಟಿದೆ.

ಚತುಷ್ಪಥ ಹೆದ್ದಾರಿ ಕಾಮಗಾರಿ ಆರಂಭವಾದ ದಿನದಿಂದಲೇ ಐಆರ್‌ಬಿ ಕಂಪನಿಯ ಅದ್ವಾನಗಳ ಸರಮಾಲೆಯೆ ಹೊತ್ತು ಬಂದಿದೆ. ತಮ್ಮ ಅವೈಜ್ಞಾನಿಕ ಕಾಮಗಾರಿಗಳಿಂದ ಒಂದಿಲ್ಲೊಂದು ಅವಘಡ ಸೃಷ್ಠಿಸುತ್ತಿದೆ. ಹಾಗೆಯೇ ಪಟ್ಟಣದ ಅಜ್ಜಿಕಟ್ಟಾದ ರಾಷ್ಟ್ರೀಯ ಹೆದ್ದಾರಿ 66ರ ಅಂಚಿನ ಹೆದ್ದಾರಿ ಅಗಲಿಕರಣ ಸಂದರ್ಭದಲ್ಲಿ ಎದುರಾದ ಗುಡ್ಡವನ್ನು ಕಟಿಂಗ್‌ ಮಾಡಲು ಆರಂಭಿಸಿದರು. ಈ ಗುಡ್ಡದಲ್ಲಿ ಕಳೆದ 40-50 ವರ್ಷಗಳಿಂದ ನಾಲ್ಕೈದು ಕುಟುಂಬಗಳು ಅತಿಕ್ರಮಣ ಮಾಡಿಕೊಂಡು ತಮ್ಮ ಜೀವನ ಕಟ್ಟಿಕೊಂಡಿದ್ದಾರೆ. ಅಲ್ಲಿರುವವರ ಕುಟುಂಬಕ್ಕೆ ಯಾವುದೇ ಬದಲಿ ವ್ಯವಸ್ಥೆ ನೀಡದೆ ಗುಡ್ಡ ಕತ್ತಿರಿಸಿರುವುದರಿಂದ ಇರುವ ಮನೆಯು ಸಹ ಅಪಾಯದ ಅಂಚಿಗೆ ಬಂದು ನಿಂತಿದೆ.

ಈ ಪ್ರದೇಶದಲ್ಲಿ ಜೋರಾಗಿ ಮಳೆ ಬಿದ್ದರೆ ಸಾಕು ಗುಡ್ಡ ಕುಸಿವ ಆತಂಕವಿದೆ. ಕಾರವಾರ ಮಾಜಾಳಿಯಿಂದ ಕುಂದಾಪುರ ತನಕ ಕೈಗೊಂಡ‌ ಚತುಷ್ಪಥ ಹೆದ್ದಾರಿ ಕಾಮಗಾರಿಯಿಂದ ಇವರು ನೆಲೆ ಕಳೆದುಕೊಂಡು, ಗುಡ್ಡದಂಚಿನಲ್ಲಿ ತಲೆ ಮೇಲೆ ತೂಗುಗತ್ತಿ ಇಟ್ಟುಕೊಂಡು ವಾಸಿಸುತ್ತಿದ್ದಾರೆ.

ಪ್ರಾಣಕ್ಕೆ ಬೆಲೆ ಇಲ್ಲ: ಕಳೆದ ವರ್ಷ ಕುಮಟಾದ ತಂಡ್ರಕುಳಿಯಲ್ಲಿ ನಡೆದ ಭೂಕುಸಿತ ಪರಿಣಾಮ ಆದ ಅವಘಡ ಇನ್ನೂ ಜನರ ಕಣ್ಣ ಮುಂದಿದೆ. ಇಂತಹ ಸಂದರ್ಭದಲ್ಲಿ ರಾಹೆ ಪ್ರಾಧಿಕಾರ ಮಾತ್ರ ಇವರಿಗೆ ಯಾವುದೇ ಪುನರ್ವಸತಿ ಕಲ್ಪಿಸದೇ, ಚೆಲ್ಲಾಟವಾಡುತ್ತಿದೆ.

ಮನೆಯೆ ಇಲ್ಲ: ಅತಿ ಬಡ ಕುಟುಂಬದವರಾದ ಇವರು ವಾಸಿಸಲು ಸರಿಯಾದ ಸೂರಿಲ್ಲದೆ ಪರದಾಡುವ ಪರಿಸ್ಥಿತಿ ಉದ್ಭವವಾಗಿದೆ. ಯಾವಾಗ ಏನು ಅನಾಹುತವಾಗುತ್ತದೆಯೋ ಎಂಬ ಆತಂಕದಲ್ಲಿ ಇಲ್ಲಿಯ ಕುಟುಂಬಗಳಿವೆ. ಅತಿಕ್ರಮಣ ಜಾಗವಾಗಿರುವುದರಿಂದ ಹೆದ್ದಾರಿ ಪ್ರಾಧಿಕಾರ ಸ್ವಾಧೀನಪಡಿಸಿಕೊಂಡ ಜಾಗೆಗೆ ಯಾವುದೇ ಪರಿಹಾರ ನೀಡಿಲ್ಲ. ಮನೆಯ ಅಂಚಿನವರೆಗೆ ಗುಡ್ಡ ಕೊರೆಯಲಾಗಿದೆ. ಜೋರಾದ ಮಳೆಯ ರಭಸಕ್ಕೆ ಗುಡ್ಡ ಕುಸಿದು ಅವಘಡ ಸಂಭವಿಸುವ ಪೂರ್ವದಲ್ಲಿ ಇಲ್ಲಿನ ಬಡ ಕುಟುಂಬಗಳಿಗೆ ಜಿಲ್ಲಾಡಳಿತ ಸೂರಿನ ವ್ಯವಸ್ಥೆ ಕಲ್ಪಿಸಬೇಕಾಗಿದೆ.

•ಅರುಣ ಶೆಟ್ಟಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.