ಡಾಂಬರ್‌ ಕಾಣದ ಪುರಸಭೆ ವ್ಯಾಪ್ತಿಯ ರಸ್ತೆಗಳು

ಡಾಂಬರ್‌ ಕಾಣದ ಪುರಸಭೆ ವ್ಯಾಪ್ತಿಯ ರಸ್ತೆಗಳು

Team Udayavani, Jun 12, 2019, 2:39 PM IST

tk-tdy-3…

ಚಿಕ್ಕನಾಯಕನಹಳ್ಳಿ ಪುರಸಭೆ ವಾರ್ಡ್‌ಗಳಲ್ಲಿ ಟಾರ್‌ ಕಾಣದೇ ಗುಂಡಿ ಬಿದ್ದಿರುವ ರಸ್ತೆಗಳು.

ಚಿಕ್ಕನಾಯಕನಹಳ್ಳಿ: ಪುರಸಭೆ ವ್ಯಾಪ್ತಿಯ 23 ವಾರ್ಡ್‌ ಗಳಲ್ಲಿ ಬರುವ ಬಹುತೇಕ ರಸ್ತೆಗಳು ಡಾಂಬರ್‌ ಕಾಣದೇ ವರ್ಷಗಳೇ ಕಳೆದಿದ್ದು, ರಸ್ತೆ ತುಂಬ ಗುಂಡಿಗಳ ಕಾರುಬಾರು ಜಾಸ್ತಿಯಾಗಿದೆ.

ವರ್ಷಗಳಿಂದ ಗುಂಡಿ ಬಿದ್ದಿರುವ ರಸ್ತೆಗಳಿಂದ ಸ್ಥಳೀಯರು ತೊಂದರೆ ಪಡುತ್ತಿದ್ದರೂ, ಜನಪ್ರತಿ ನಿಧಿಗಳು ಹಾಗೂ ಅಧಿಕಾರಿಗಳು ತಮಗೇನೂ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿದ್ದಾರೆ. ಹೆಸರಿಗಷ್ಟೇ ಚಿಕ್ಕನಾಯಕನಹಳ್ಳಿ ಪಟ್ಟಣ ಎಂಬಂತಾಗಿದೆ.

ಚಿಕ್ಕನಾಯಕನಹಳ್ಳಿ ತಾಲೂಕು ಕೇಂದ್ರವನ್ನು 1929ರಲ್ಲಿ ಪುರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಿದ್ದು, ಸುಮಾರು 88 ವರ್ಷ ಕಳೆದರೂ ಪಟ್ಟಣದಲ್ಲಿ ರಸ್ತೆ ಕಾಮಗಾರಿಗಳೇ ಇನ್ನೂ ಪೂರ್ಣ ವಾಗಿಲ್ಲ. ಅದೇ ಗುಂಡಿ ಬಿದ್ದ ರಸ್ತೆಗಳು, ರಸ್ತೆಗಳ ಮೇಲೆ ಚರಂಡಿ ನೀರು, ಮಳೆ ಬಂದರೆ ಕೆಸರು ಗದ್ದೆಯಾಗುವ ರಸ್ತೆಗಳು, ಪುರಸಭೆ ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಜನ ಪ್ರತಿನಿಧಿಗಳು, ಅಧಿಕಾರಿಗಳು ಗುಣಮಟ್ಟದ ರಸ್ತೆಗಳ ಬಗ್ಗೆ ತಲೆ ಕೆಡಿಸಿಕೊಳ್ಳದೆ ಇರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

35 ಕಿಮೀ ರಸ್ತೆ ಆಗಬೇಕು: 23 ವಾರ್ಡ್‌ಗಳಲ್ಲಿ 75 ಕಿಮೀ ರಸ್ತೆ ಸಂಪರ್ಕ ಹೊಂದಿದ್ದು. ಸುಮಾರು 35 ಕಿಮೀ ರಸ್ತೆಗಳು ಇನ್ನೂ ಡಾಂಬರೀಕರಣವಾಗದೆ ಹಾಳಾಗಿವೆ. ಡಾಂಬರೀಕರಣವಾದ ಇನ್ನೂ ಕೆಲ ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ವಾಹನ ಸವಾರರ ಪ್ರಾಣಕ್ಕೆ ಸಂಚಕಾರ ಎದುರಾಗಿದೆ.

ಅನುದಾನವಿದ್ದರೂ ಅಭಿವೃದ್ಧಿಯಾಗಿಲ್ಲ: ಎಸ್‌ಎಫ್ಸಿ, ನಗರೋತ್ಥಾನ, ಮುಖ್ಯಮಂತ್ರಿಗಳ ಸಣ್ಣ ಪಟ್ಟಣಗಳ ಅಭಿವೃದ್ಧಿ ಹಾಗೂ ಶಾಸಕರ ನಿಧಿ ಹಾಗೂ ಪುರಸಭೆಯಲ್ಲಿನ ಕಂದಾಯ ಸೇರಿದಂತೆ ಕೋಟಿ ಗಟ್ಟಲೇ ಅನುದಾನ ಬರುತ್ತಿದ್ದರೂ ರಸ್ತೆಗಳು ಅಭಿವೃದ್ಧ್ದಿ ಯಾಗಿಲ್ಲ. 1998-99ರ ಸಾಲಿನಲ್ಲಿ ನಿರ್ಮಾಣವಾದ ಮಾರುತಿ ನಗರ , 1978ರಲ್ಲಿ ನಿರ್ಮಾಣವಾದ ಮಹಾಲಕ್ಷ್ಮೀ ಬಡಾವಣೆ, 1993-94ರಲ್ಲಿ ನಿರ್ಮಾಣ ವಾದ ಬನಶಂಕರಿ ಬಡಾವಣೆ, ಹೊಸ ಬಡಾವಣೆಗಳು, 1995 ರಲ್ಲಿ ಪುರಸಭೆಗೆ ಹೊಸದಾಗಿ ಸೇರಿಕೊಂಡಿರುವ ಕೇದಿಗೆಹಳ್ಳಿ ದೆಬ್ಬೆಗಟ್ಟ ವಾರ್ಡ್‌ ಗಳಲ್ಲಿನ ಬಹುತೇಕ ರಸ್ತೆಗಳು ಮಣ್ಣಿನ ರಸ್ತೆಗಳಾಗಿ ಉಳಿದಿವೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.