ಚರಂಡಿ ನಿರ್ಮಿಸಿ ಸಮಸ್ಯೆ ಬಗೆಹರಿಸಿದ ಗ್ರಾ.ಪಂ.ಗಳು
Team Udayavani, Jun 5, 2019, 4:50 AM IST
ಸೇಡಿಯಾಪು: ಕೋಡಿಂಬಾಡಿ ಮತ್ತು ಬನ್ನೂರು ಗ್ರಾ.ಪಂ. ವ್ಯಾಪ್ತಿಗೆ ಬರುವ ಅನಿಲಕೋಡಿ ರಸ್ತೆಯ ಸೇಡಿಯಾಪು ಸಮೀಪ ರಸ್ತೆಯಲ್ಲಿ ನೀರು ಹರಿಯುವ ಹಿನ್ನೆಲೆಯಲ್ಲಿ ಸ್ಥಳೀಯರು ನಡೆಸಿದ ಪ್ರತಿಭಟನೆಯ ಬೆನ್ನಲ್ಲೇ ಶುಕ್ರವಾರ ಎರಡೂ ಗ್ರಾ.ಪಂ.ಗಳ ವತಿಯಿಂದ ರಸ್ತೆಯ ಇಕ್ಕೆಲಗಳಲ್ಲಿ ಜೆಸಿಬಿ ಮೂಲಕ ಚರಂಡಿಗಳ ನಿರ್ಮಾಣ ಮತ್ತು ಅಕ್ರಮ ರಚನೆಗಳ ತೆರವು ಕಾರ್ಯ ನಡೆಸಲಾಯಿತು.
ಮಳೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಪ್ರಥಮ ಮಳೆಗೆ ಈ ರಸ್ತೆ ಕೆಸರು ಗದ್ದೆಯಂತಾಗಿತ್ತು. ಸಾರ್ವಜನಿಕರು ಆಡಳಿತ ವ್ಯವಸ್ಥೆಯ ವಿರುದ್ಧ ಪ್ರತಿಭಟನೆ ನಡೆಸಿ ಕೆಲ ಹೊತ್ತು ರಸ್ತೆ ತಡೆ ಮಾಡಿದ್ದರು. ಶುಕ್ರವಾರ ಎರಡೂ ಗ್ರಾ. ಪಂ.ಗಳ ವತಿಯಿಂದ ಚರಂಡಿ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಲಾಯಿತು. ರಸ್ತೆಯ ಎರಡೂ ಬದಿಗಳಲ್ಲಿ ಚರಂಡಿ ನಿರ್ಮಿಸಿ ನೀರು ಹರಿದುಹೋಗಲು ಅಡ್ಡಿಯಾಗುವ ಅಕ್ರಮ ರಚನೆಗಳನ್ನು ತೆರವುಗೊಳಿಸಲು ಉಭಯ ಗ್ರಾ.ಪಂ. ಆಡಳಿತ ನಿರ್ಧರಿಸಿದೆ.
ಗುರುವಾರ ಪ್ರತಿಭಟನೆ ನಡೆಸಿದ್ದ ಸ್ಥಳೀಯರು ಸಮಸ್ಯೆಗೆ ಪರಿಹಾರ ಕಾಣಿಸದಿದ್ದಲ್ಲಿ ಶನಿವಾರ ರಸ್ತೆ ಬಂದ್ ಪ್ರತಿಭಟನೆ ಮಾಡುವುದಾಗಿ ತಿಳಿಸಿದ್ದರು. ಆದರೆ ಶುಕ್ರವಾರ ಸಂಬಂಧಪಟ್ಟ ಸ್ಥಳೀಯಾಡಳಿತಗಳು ಪರಿಹಾರ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.