ಸಿದ್ಧ ಶೌಚಾಲಯ ಬಳಕೆ ಯಾವಾಗ?

29ನೇ ವಾರ್ಡ್‌ನ ಸಿದ್ಧ ಶೌಚಾಲಯಗಳು ಹಳೆ ಸಾಮಾನು ಇಡುವ ಸ್ಥಳವಾಗಿ ಪರಿವರ್ತನೆ

Team Udayavani, Jun 15, 2019, 12:12 PM IST

15-June-16

ಚಳ್ಳಕೆರೆ: ನಗರದ 29ನೇ ವಾರ್ಡ್‌ ವ್ಯಾಪ್ತಿಯ ನಾಗರೀಕರು ಶೌಚಾಲಯ ಸಿದ್ಧಪಡಿಸುವಂತೆ ನಗರಸಭೆ ಸದಸ್ಯರಿಗೆ ಮನವಿ ಮಾಡುತ್ತಿರುವುದು.

ಚಳ್ಳಕೆರೆ: ಸರಕಾರ ಬಯಲು ಶೌಚ ಮುಕ್ತಕ್ಕೆ ಇತಿಶ್ರೀ ಹಾಡಲು ಸಾಕಷ್ಟು ಯತ್ನಿಸುತ್ತಿದೆ. ಇದಕ್ಕಾಗಿ ಕೋಟ್ಯಂತರ ರೂ. ಅನುದಾನ ವೆಚ್ಚ ಮಾಡಿ ಯೋಜನೆ ರೂಪಿಸಿದೆ. ಆದರೆ ನಗರದ ವಾರ್ಡ್‌ ಒಂದರಲ್ಲಿ ಮನೆ ಮುಂದೆ ಶೌಚಾಲಯವಿದ್ದರೂ ಜನ ಮಾತ್ರ ಅದನ್ನು ಬಳಸುವಂತಿಲ್ಲ.

ಹೌದು. ನಗರದ 29ನೇ ವಾರ್ಡ್‌ನಲ್ಲಿ ಹಲವಾರು ದಶಕಗಳಿಂದ ಸಾರ್ವಜನಿಕರು ಬಯಲು ಶೌಚವನ್ನೇ ನೆಚ್ಚಿದ್ದು, ಸಿದ್ಧಪಡಿಸಿದ ಶೌಚಾಲಯಗಳು ಮನೆ ಮುಂದೆ ಇದ್ದರೂ ಬಳಸುವಂತಿಲ್ಲ. ಇದರಿಂದ ರೋಗಗಳು ಹರಡುವ ಸಂಭವ ಹೆಚ್ಚಿದೆ. ಪ್ರತಿಯೊಂದು ಮನೆಯೂ ಶೌಚಾಲಯ ಹೊಂದಬೇಕೆಂಬ ಯೋಜನೆ ಕೇಂದ್ರ ಸರ್ಕಾರ ರೂಪಿಸಿದ್ದು, ರಾಜ್ಯ ಸರ್ಕಾರ ಇದನ್ನು ಅನುಷ್ಠಾನಕ್ಕೆ ತರಲು ಅನುದಾನ ಮಂಜೂರು ಮಾಡುತ್ತಿದೆ. ಆದರೆ, ಸುವವ್ಯಸ್ಥಿತವಾಗಿ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಆಡಳಿತ ವಿಭಾಗ ವಿಫಲಾಗುತ್ತಿದೆ.

ನಗರದ 29ನೇ ವಾರ್ಡ್‌ನಲ್ಲಿ ಕಳೆದ ಒಂದು ವರ್ಷದಿಂದ ಸಿದ್ಧಪಡಿಸಿದ ಶೌಚಾಲಯವನ್ನು ವಾರ್ಡ್‌ನ ಪ್ರತಿ ಮನೆಗಳ ಮುಂದೆ ಇಟ್ಟಿದ್ದರೂ ಅದನ್ನು ಉಪಯೋಗಿಸಲು ಅವಕಾಶ ನೀಡಿಲ್ಲ. ಶೌಚಾಲಯ ಬಳಕೆಗೆ ಹಲವು ಸಮಸ್ಯೆ ಎದುರಾಗಿದ್ದು ಇದನ್ನು ಅಧಿಕಾರಿಗಳು ಪರಿಹರಿಸಬೇಕಿದೆ. ಪ್ರತಿನಿತ್ಯವೂ ಶೌಚಾಲಯದ ಸಮಸ್ಯೆ ಎದುರಿಸುತ್ತಿದ್ದೇವೆ ಎಂದು ಮನವಿ ಮಾಡಿದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ವಾರ್ಡ್‌ನ ನಿವಾಸಿಗಳು ದೂರುತ್ತಾರೆ.

ಈ ಭಾಗದಲ್ಲಿ ಕಳೆದ ಒಂದು ವರ್ಷಗಳಿಂದ ಶೌಚಾಲಯ ರೂಂಗಳನ್ನು ಇಟ್ಟಿದ್ದಾರೆ. ಆದರೆ ಅವುಗಳನ್ನು ಸಂಪೂರ್ಣ ಸಿದ್ಧಪಡಿಸಿಲ್ಲ. ಸಿದ್ಧಪಡಿಸುವಂತೆ ನಗರಸಭೆ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಈ ಬಗ್ಗೆ ವಾರ್ಡ್‌ ನ ಜನರೂ ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದಾರೆ. ಈ ಬಗ್ಗೆ ಯಾವ ಅಧಿಕಾರಿಗಳು ತಲೆಕೆಡಿಸಿಕೊಳ್ಳದೇ ಉಢಾಪೆ ಉತ್ತರ ನೀಡುತ್ತಾರೆ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೌಚಾಲಯ ನಿರ್ಮಾಣ ಜವಾಬ್ದಾರಿಯನ್ನು ಖಾಸಗಿ ಕಂಪನಿಯವರಿಗೆ ನೀಡಿದ್ದು, ಅವರನ್ನು ವಿಚಾರಿಸಿದರೆ ನಮಗೆ ಹಣ ಬಂದಿಲ್ಲ ನಾವೇನು ಮಾಡಲಿ ಎಂದು ಜಾರಿಕೊಳ್ಳುತ್ತಿದ್ದಾರೆ. ಜನರ ಸಮಸ್ಯೆಗೆ ಸ್ಪಂದಿಸಬೇಕಾದ ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಜನಸಾಮಾನ್ಯರು ತೊಂದರೆ ಅನುಭವಿಸುಂತಾಗಿದೆ.

ಶೌಚಾಲಯದ ನೀಡಿ ಎಂದು ಜನ ಅರ್ಜಿ ಹಾಕಿದ್ದರು. ಆದರೆ ಶೌಚಾಲಯವನ್ನು ನಗರಸಭೆಯಿಂದಲೇ ನಿರ್ಮಿಸಿಕೊಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದರು. ನಂತರ ಸಿದ್ಧ ಶೌಚ ರೂಂಗಳನ್ನು ತಂದಿಟ್ಟು ಒಂದೆರಡು ವರ್ಷಗಳೇ ಕಳೆದಿವೆ. ಆದರೆ, ಅದನ್ನು ಪೂರ್ಣವಾಗಿ ಸಿದ್ಧಪಡಿಸುವ ಗೋಜಿಗೆ ಹೋಗಿಲ್ಲ ಎನ್ನುತ್ತಾರೆ ನಿವಾಸಿಗಳು.

ಬಯಲು ಶೌಚ ಬೇಡ ಎಂದು ಎಲ್ಲರೂ ಹೇಳ್ತುತಾರೆ. ಆದರೆ, ಜನರಿಗೆ ಯಾವುದೇ ಸೌಲಭ್ಯ ನೀಡುತ್ತಿಲ್ಲ ಎಂದು ವಾರ್ಡ್‌ನ ಸಮೀರಾಭಾನು, ಮುನಿರಾಬೇಗಂ, ಭಾರತಮ್ಮ, ತಾಜ್‌, ಈರಮ್ಮ, ಷಂಷಾದಭಾನು, ಮೆಹಬೂಬ್‌ ಇತರರು ಆರೋಪಿಸಿದ್ದಾರೆ.

ಚುನಾವಣೆ ಹಾಗೂ ಇನ್ನಿತರ ಕೆಲಸ ಕಾರ್ಯಗಳ ನಡುವೆ ವಾರ್ಡ್‌ ನಲ್ಲಿನ ಶೌಚಾಲಯಗಳನ್ನು ಸಿದ್ಧಪಡಿಸಲು ಸಾಧ್ಯವಾಗಿರಲಿಲ್ಲ. ಈಗ ಚುನಾವಣೆ ಮುಗಿದಿದ್ದು, ಪೌರಾಯುಕ್ತರು ಸಹ ಆಗಮಿಸಿದ್ದು ಮುಂದಿನ ದಿನಗಳಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ಎಲ್ಲರಿಗೂ ಶೌಚಾಲಯ ಒದಗಿಸಲಾಗುವುದು.
ಎಚ್. ಪ್ರಶಾಂತ್‌ಕುಮಾರ್‌,
29ನೇ ವಾರ್ಡ್‌ ಸದಸ್ಯ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.