ಸಾವಯವ ಕೃಷಿಯಲ್ಲಿ ತಂತ್ರಜ್ಞಾನ ಬಳಸಿ

ಮಿಶ್ರ ಬೇಸಾಯ ಪದ್ಧತಿ ರೂಢಿಸಿಕೊಳ್ಳಿ•ಕೂರಿಗೆ ಭತ್ತ ನಾಟಿ ಮಾಡಿ: ಶಿವನಗೌಡ

Team Udayavani, Jun 16, 2019, 4:20 PM IST

16-June-37

ಕುರುಗೋಡು: ಗೇಣಿಕೆಹಾಳದಲ್ಲಿ ನಡೆದ ಕೃಷಿ ಅಭಿಯಾನ ಆಂದೋಲನ ಕಾರ್ಯಕ್ರಮದಲ್ಲಿ ಶಾಸಕ ಜೆ.ಎನ್‌. ಗಣೇಶ ಮಾತನಾಡಿದರು.

ಕುರುಗೋಡು: ದೇಶದಲ್ಲಿ ಸಾವಯವ ಕೃಷಿಯನ್ನು ಉತ್ತಮಗೊಳಿಸಲು ಆಧುನಿಕ ತಂತ್ರಜ್ಞಾನದ ಬಳಕೆ ಅವಶ್ಯಕತೆ ಇದೆ ಎಂದು ಸಹಾಯಕ ಕೃಷಿ ನಿರ್ದೇಶಕ ಹುಸೇನ್‌ ಸಾಬ್‌ ಹೇಳಿದರು.

ಸಮೀಪದ ಗೇಣಿಕೆಹಾಳ ಗ್ರಾಮದಲ್ಲಿ ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ 2019-20ನೇ ಸಾಲಿನ ಕೃಷಿ ಅಭಿಯಾನ ಆಂದೊಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇವತ್ತಿನ ದಿನಗಳಲ್ಲಿ ಕೃಷಿ ಪದ್ಧತಿ ಸುಧಾರಿಸುವ ಪ್ರಯತ್ನವನ್ನು ಕೃಷಿ ಇಲಾಖೆಗಳು ನಾನಾ ಯೋಜನೆ ರೂಪಿಸುತ್ತಿವೆ. ಸುಸ್ಥಿರ ಕೃಷಿಯಿಂದ ಮಾತ್ರ ನಿಜವಾದ ಸಾಮಾಜಿಕ ಅಭಿವೃದ್ಧಿ ಸಾಧ್ಯ. ಇಂದು ನಾವು ಕೃಷಿ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಮಿಶ್ರ ಬೇಸಾಯ ಪದ್ಧತಿಯಿಂದ ಪ್ರತಿಯೊಬ್ಬ ರೈತ ಮುಂದೆ ಬರಲು ಸಾಧ್ಯ. ಕೃಷಿಯಲ್ಲಿ ಸಾವಯವ ಗೊಬ್ಬರವನ್ನು ಉಪಯೋಗಿಸಿ ಉತ್ತಮ ಬೆಳೆ ತೆಗೆದರೆ ಆರೋಗ್ಯದಿಂದ ಬದುಕಬಹುದು ಎಂದು ತಿಳಿಸಿದರು.

ನಂತರ ಜಿಲ್ಲಾ ಕೃಷಿ ಉಪ ನಿರ್ದೇಶಕ ಶಿವನಗೌಡ ಪಾಟೀಲ ಮಾತನಾಡಿ, ಪ್ರತಿಯೊಬ್ಬ ರೈತರು ನೀರಿನಿಂದ ಭತ್ತ ಬೆಳೆಯಲು ಮುಂದಾಗದೆ ಕೂರಿಗೆ ಭತ್ತ ನಾಟಿ ಮಾಡಲು ಮುಂದಾಗಬೇಕು. ನೀರಿನಿಂದ ಭತ್ತ ನಾಟಿ ಮಾಡಿದರೆ ಭತ್ತ ಕಟಾವಿಗೆ ಬರುವತನಕ ಅತೀ ಹೆಚ್ಚು ನೀರು ಸಂಗ್ರಹ ಮಾಡಬೇಕು. ಜತೆಗೆ ಹೆಚ್ಚು ಔಷಧ, ರಸಗೊಬ್ಬರ ಸಿಂಪರಿಸಬೇಕು ಎಂದರು.

ಶಾಸಕ ಜೆ.ಎನ್‌. ಗಣೇಶ ಕೃಷಿ ಪದ್ಧತಿ ಬಗ್ಗೆ ಮಾತನಾಡುವ ಸಂದರ್ಭದಲ್ಲಿ ವಿದ್ಯುತ್‌ ಕೈಕೊಟ್ಟು ಗೊಂದಲ ಸೃಷ್ಟಿಸಿತು. ನಂತರ ಜನರೇಟರ್‌ ಶುರು ಮಾಡಿ ಶಾಸಕರ ಭಾಷಣ ಪ್ರಾರಂಭವಾಯಿತು. ತರಬೇತಿ ಸಂಯೋಜಕ ರವಿ ಶಂಕರ ಮಾತನಾಡಿದರು. ಕೃಷಿ ಅಭಿಯಾನ ಅಂದೊಲನಕ್ಕೆ ಬರುವ ಸುತ್ತಮುತ್ತ ಗ್ರಾಮದ ರೈತರಿಗೆ ಸಬ್ಸಿಡಿ ದರದಲ್ಲಿ ದೊರೆಯುವ ಕೃಷಿ ಚಟುವಟಿಕೆಯ ಯಂತ್ರೋಪಕರಣಗಳು ಹಾಗೂ ಗನ್‌ ಪಂಪ್‌ಗ್ಳು, ಅಯಿಲ್ ಪಂಪ್‌ಗ್ಳು, ಟಿಲ್ಲರ್‌, ಕುಂಟೆ ಇತರೆ ವಸ್ತುಗಳನ್ನು ಪ್ರದರ್ಶಿಸಲಾಯಿತು.

ಜಿಪಂ ಸದಸ್ಯೆ ಬನಶಂಕರಿ ವೀರೇಂದ್ರರೆಡ್ಡಿ. ಗ್ರಾಪಂ ಅಧ್ಯಕ್ಷ ಶಾಂತನಗೌಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೆ.ಬಂಗಿಮಲ್ಲಯ್ಯ. ಕುರುಗೋಡು ಕೃಷಿ ಅಧಿಕಾರಿ ದೇವರಾಜ, ಮುಖಂಡರಾದ ಶರಣಗೌಡ, ನಾಯಕರ ಕರೆಪ್ಪ, ದೊಡ್ಡಬಸಪ್ಪ, ವಾಲ್ಮಿಕಿ ದೊಡ್ಡಬಸಪ್ಪ, ಉಮಾಪತಿ ಗೌಡ, ವೀರೇಶ, ಧರ್ಮವೀರೇಗೌಡ, ಎಸ್‌.ಬಸವನಗೌಡ ಸೇರಿ ಸುತ್ತಮುತ್ತ ಗ್ರಾಮದ ಮುಖಂಡರು, ರೈತರು ಇದ್ದರು.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.