ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕಲಾ ವಿಷಯ ಕಡೆಗಣನೆ


Team Udayavani, Jun 17, 2019, 3:00 AM IST

rashtrya

ಮೈಸೂರು: ಬಂಡವಾಳಶಾಹಿ ಹಾಗೂ ಖಾಸಗೀಕರಣಕ್ಕೆ ಹೆಚ್ಚು ಉದಾರತೆಯನ್ನು ರಾಷ್ಟ್ರೀಯ ಶಿಕ್ಷಣ ನೀತಿ ಕರಡಿನಲ್ಲಿ ಸೇರಿಸಲಾಗಿದೆ ಎಂದು ಶಿಕ್ಷಣ ಚಿಂತಕ ಬಿ.ಶ್ರೀಪಾದ ಭಟ್‌ ಹೇಳಿದರು.

ನಗರದ ಕಲಾಮಂದಿರದ ಮನೆಯಂಗಳದಲ್ಲಿ ಭಾನುವಾರ ಅಖೀಲ ಭಾರತ ಪ್ರಜಾ ವೇದಿಕೆ, ಫ್ರೈಡೇ ಪೋರಂ, ಮೈಸೂರು ನಾಗರಿಕ ಹಕ್ಕುಗಳಿಗಾಗಿ ಜನರ ಒಕ್ಕೂಟ (ಪಿಯುಸಿಎಲ್‌) ಹಮ್ಮಿಕೊಂಡಿದ್ದ ರಾಷ್ಟ್ರೀಯ ಶಿಕ್ಷಣ ನೀತಿ 2019 (ಕರಡು) ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವೃತ್ತಿಪರ ಕೋರ್ಸ್‌ಗಳಿಗೆ ಬೇಡಿಕೆ: ಬಂಡವಾಳಶಾಹಿ ಹಾಗೂ ಖಾಸಗೀಕರಣಕ್ಕೆ ಹೆಚ್ಚು ಉದಾರತೆಯನ್ನು ರಾಷ್ಟ್ರೀಯ ಶಿಕ್ಷಣ ನೀತಿ ಕರಡಿನಲ್ಲಿ ಸೇರಿಸಲಾಗಿದೆ. ಆದರೆ, ಸಾರ್ವಜನಿಕ ಸಬಲೀಕರಣದ ಹಿನ್ನೆಲೆಯಲ್ಲಿ ಕರಡು ರಚನೆಗೊಂಡಿಲ್ಲ.

ವೃತ್ತಿಪರ ಕೋರ್ಸ್‌ಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಮಾನವಿಕ ವಿಷಯಗಳನ್ನು ಓದುವವರ ಸಂಖ್ಯೆಯೇ ಕಡಿಮೆಯಾಗಿದೆ. 21ನೇ ಶತಮಾನ ತಂತ್ರಜ್ಞಾನದ ವಿಷಯಗಳನ್ನು ಪೋಷಿಸುತ್ತಿದೆ. ಕಲಾ ವಿಷಯಗಳನ್ನು ಕಡೆಗಣಿಸುತ್ತಿದೆ. ಹಾಗಾಗಿ ಈ ಕರಡು ಯಾವುದೇ ಗೈಡ್‌ ಇಲ್ಲದೆ ಮಂಡಿಸಿರುವ ಸಾಧಾರಣ ಪ್ರಬಂಧದಂತಿದೆ ಎಂದರು.

ವಿಸ್ತೃತ ಚರ್ಚೆ ನಡೆಯಬೇಕಿದೆ: ಕಡ್ಡಾಯ ಶಿಕ್ಷಣದ ಅಡಿ ರಾಜ್ಯ ಸರ್ಕಾರ ಒದಗಿಸಿರುವ ಆರ್‌ಟಿಇ ಕಾಯ್ದೆಯನ್ನು ಕರಡಿನಲ್ಲಿ ಕೈ ಬಿಡಲಾಗಿದೆ. ಅಲ್ಲದೆ, ಹೀಗಿರುವ 10 ಮತ್ತು 12ನೇ ತರಗತಿಯ ಪಬ್ಲಿಕ್‌ ಪರೀಕ್ಷೆಯನ್ನು 5 ಮತ್ತು 8ನೇ ತರಗತಿಗೆ ಸೇರಿಸುವ ಪ್ರಸ್ತಾವನೆಯೂ ಇದೆ.

ಹೀಗೆ ಮಾಡಿದರೆ ಶಿಕ್ಷಣದಿಂದ ಮಕ್ಕಳನ್ನು ಮೊಟಕುಗೊಳಿಸಿದಂತೆ ಆಗುತ್ತದೆ. ತ್ರಿಭಾಷಾ ನೀತಿ ಸೂತ್ರ ಕೂಡ ಕರಡಿನಲ್ಲಿ ಇದೆ. ತೀವ್ರ ವಿವಾದ ಸೃಷ್ಟಿಸಿದ ಈ ಅಂಶವನ್ನು ಕೇಂದ್ರ ಇದೀಗ ತೆಗೆದು ಹಾಕಿದೆ. ಆದರೂ ಇದರ ಬಗ್ಗೆ ವಿಸ್ತೃತ ಚರ್ಚೆ ನಡೆಯಬೇಕಿದೆ ಎಂದು ಹೇಳಿದರು.

ಕರಡಿನಲ್ಲಿ ತಿಳಿಸಿರುವ ಎಷ್ಟೋ ವಿಚಾರವನ್ನು ಹೇಗೆ ಕಾರ್ಯರೂಪಕ್ಕೆ ತರಬೇಕೆಂಬ ಗೊಂದಲವಿದೆ. 5ನೇ ತರಗತಿಯವರೆಗೆ ಮಕ್ಕಳು ಬರೆಯುವ ಅಭ್ಯಾಸ ಮಾಡುವಂತಿಲ್ಲ. ಬರೀ ಆಟದಿಂದ ಪಾಠ ಎಂಬ ವಿವರಣೆ ಇದೆ.

ಆದರೆ, ಇದನ್ನು ಶಿಕ್ಷಕರು ಹೇಗೆ ಅನುಷ್ಠಾನಕ್ಕೆ ತರಬೇಕೆಂಬ ವಿವರಣೆ ಇಲ್ಲ. ಆಶಯ ಮತ್ತು ಶಿಫಾರಸಿಗೂ ಬಹಳ ವ್ಯತ್ಯಾಸ ಇದೆ. ಯೋಜನೆ ಹೇಗೆ ಜಾರಿಗೆ ಬರಬೇಕೆಂಬ ಟಿಪ್ಪಣಿ ಇಲ್ಲ ಎಂದರು.

ಉನ್ನತ ಶಿಕ್ಷಣದಲ್ಲಿ ಸ್ಪಷ್ಟ ಗುರಿ: ಹಾಸನ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರೊ.ಎಂ.ಶಂಕರ್‌ ಮಾತನಾಡಿ, ಉನ್ನತ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಸ್ಪಷ್ಟ ಗುರಿಯನ್ನು ಕಾಯ್ದೆ ಹೊಂದಿದೆ. ಪರಿಪೂರ್ಣ ಮನುಷ್ಯನಾಗಿ ವಿದ್ಯಾರ್ಥಿ ಹೊರ ಬರಬೇಕೆಂಬ ಆಶಯವನ್ನು ಕಾಯ್ದೆಯಲ್ಲಿ ಇರಿಸಲಾಗಿದೆ. ಹಾಗಾಗಿ ಇದೊಂದು ಆಶಾದಾಯಕ ಕರಡು.

ಕೆಲವೊಂದು ವಿಷಯಗಳು ಪದೇ ಪದೇ ರಿಪೀಟ್‌ ಆಗಿವೆ. ಇದನ್ನು ಸಂಕ್ಷಿಪ್ತವಾಗಿ ಹೇಳಬಹುದಿತ್ತು. 2035ರೊಳಗೆ ಉನ್ನತ ಶಿಕ್ಷಣದಲ್ಲಿ ಭಾರತವು ಶೇ.50ರಷ್ಟು ಸಾಧನೆಯನ್ನು ಮಾಡಬೇಕೆಂಬ ಗುರಿಯನ್ನು ಕರಡು ಹೊಂದಿದೆ. ದೇಶದಲ್ಲಿ ಬೃಹತ್‌ ಕೈಗಾರಿಕಾ ಸಂಸ್ಥೆಗಳು ಹುಟ್ಟುವಂತೆ ಬೃಹತ್‌ ಶಿಕ್ಷಣ ಸಂಸ್ಥೆಗಳು ಅಸ್ತಿತ್ವಕ್ಕೆ ಬರಬೇಕೆಂಬ ಆಶಯವನ್ನು ಕರಡು ವ್ಯಕ್ತಪಡಿಸುತ್ತದೆ ಎಂದು ತಿಳಿಸಿದರು.

ಪರ-ವಿರೋಧ ಚರ್ಚೆ: ರಾಷ್ಟ್ರೀಯ ಶಿಕ್ಷಣ ನೀತಿ-2019ರ ಕರಡು ಮಾರ್ಗದರ್ಶಕರೇ ಇಲ್ಲದೇ ರೂಪಿಸುವ ಪ್ರಬಂಧವಾಗಿದೆ ಎಂಬ ಕೂಗಿನ ನಡುವೆಯೇ ಇದು ವಿದ್ಯಾರ್ಥಿ ಕೇಂದ್ರಿತ ಹೊಸ ಶಿಕ್ಷಣ ನೀತಿ. 21ನೇ ಶತಮಾನಕ್ಕೆ ಅನುಗುಣವಾಗಿ ಸ್ಪರ್ಧಾತ್ಮಕವಾಗಿ ಕೂಡಿದೆ ಎಂಬ ಅಭಿಪ್ರಾಯಗಳು ಕೇಳಿ ಬಂದವು. ಜೊತೆಗೆ ಪರ-ವಿರೋಧ ಚರ್ಚೆಯೂ ಏರ್ಪಟ್ಟವು.

ಡಾ.ವಿ.ಲಕ್ಷ್ಮೀನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ಕ್ರಿಯಾ ಸಮಿತಿ ಪ್ರಧಾನ ಕಾರ್ಯದರ್ಶಿ ಸ.ರ.ಸುದರ್ಶನ, ವೆಂಕಟರಾಜು ಹಾಜರಿದ್ದರು.

ಸಂಶೋಧನೆ, ಬೋಧನೆ ಹಾಗೂ ಕಾಲೇಜು ಎಂಬ ಮೂರು ಅಂಶಗಳಿಗೆ ಆದ್ಯತೆ ನೀಡಲಾಗಿದೆ. ಜಿಲ್ಲೆಗೊಂದು ಉನ್ನತ ಶಿಕ್ಷಣ ಸಂಸ್ಥೆ ಬರಬೇಕೆಂಬ ಸದಾಶಯವನ್ನೂ ಕರಡು ಬಿತ್ತರಿಸುತ್ತದೆ. ಏಕ ಕೋರ್ಸ್‌ ನೀಡುವ ಪದ್ಧತಿ ನಿಲ್ಲಬೇಕೆಂಬ ಅಂಶವನ್ನೂ ಕಾಯ್ದೆ ಹೇಳುತ್ತದೆ.
-ಪ್ರೊ.ಎಂ.ಶಂಕರ್‌, ಸ್ನಾತಕೋತ್ತರ ಕೇಂದ್ರದ ನಿರ್ದೇಶಕ, ಹಾಸನ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.