ಯೋಗ ತಾಲೀಮಿನಲ್ಲಿ 4 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ


Team Udayavani, Jun 17, 2019, 3:00 AM IST

yaoga-tal

ಮೈಸೂರು: ಜೂನ್‌ 21ರಂದು ನಡೆಯಲಿರುವ ಐದನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಭಾನುವಾರ ಮುಂಜಾನೆ ಸಾವಿರಾರು ಮಂದಿ ಪೂರ್ವಭ್ಯಾಸ ನಡೆಸಿದರು.

ಪ್ರತಿ ವರ್ಷದಂತೆ ಈ ಸಲವೂ ಮೈಸೂರು ರೇಸ್‌ ಕೋರ್ಸ್‌ನಲ್ಲಿ ಯೋಗ ತಾಲೀಮು ನಡೆಯಿತು. ಕಾರ್ಯಕ್ರಮಕ್ಕೆ ಮೇಯರ್‌ ಪುಷ್ಪಲತಾ ಜಗನ್ನಾಥ್‌ ದೀಪ ಬೆಳಗಿ ಚಾಲನೆ ನೀಡಿದರೆ, ಸಚಿವರಾದ ಜಿ.ಟಿ. ದೇವೇಗೌಡ, ಸಾ.ರಾ. ಮಹೇಶ್‌, ಶಾಸಕ ಎಸ್‌.ಎ. ರಾಮದಾಸ್‌ ಸಾಥ್‌ ನೀಡಿದರು.

ಹಳದಿ, ಬಿಳಿ ವಸ್ತ್ರ ವಿತರಣೆ: ಬೆಳಗ್ಗೆಯೇ ಯೋಗ ಮ್ಯಾಟ್‌, ಜಮಾಖಾನಗಳ ಸಮೇತ ಸ್ಥಳಕ್ಕೆ ಆಗಮಿಸಿದ್ದ ಸುಮಾರು 4 ಸಾವಿರಕ್ಕೂ ಹೆಚ್ಚು ಮಂದಿ ಯೋಗಪಟುಗಳು ಯೋಗಾಭ್ಯಾಸದಲ್ಲಿ ತೊಡಗಿದರು. ಈ ಸಂದರ್ಭ ಅಂತಾರಾಷ್ಟ್ರೀಯ ಯೋಗಪಟು ಕು. ಖುಷಿ ಯೋಗಾಭ್ಯಾಸವನ್ನು ಹೇಳಿಕೊಟ್ಟರು. ಇತರೆ ಯೋಗ ಗುರುಗಳು ಕೈಜೋಡಿಸಿ ಯೋಗಪಟುಗಳನ್ನ ಹುರಿದುಂಬಿಸಿದರು. ಬಂದವರಿಗೆ ಹಳದಿ ಮತ್ತು ಬಿಳಿ ವಸ್ತ್ರವನ್ನು ನೀಡಲಾಯಿತು.

ಯೋಗ ಗುರುಗಳ ಮಾರ್ಗದರ್ಶನ: ಯೋಗಪಟುಗಳು ಸೂರ್ಯ ನಮಸ್ಕಾರ, ತ್ರಿಕೋನಾಸನ, ಪಾರ್ಶ್ವಕೋನಾಸನ, ಪೂರ್ವೋತ್ತಾನಾಸನ, ಪಶ್ಚಿಮೋತ್ತಾನಾಸನ, ಶಲಭಾಸನ, ಭುಜಂಗಾಸನ, ಮಕರಾಸನ, ಮೌನಾಸನ, ಶವಾಸನ ಸೇರಿದಂತೆ ಮತ್ತಿರ ಆಸನಗಳನ್ನು ಯೋಗ ಗುರುಗಳ ಮಾರ್ಗದರ್ಶನದಲ್ಲಿ ಪ್ರದರ್ಶಿಸಿದರು. ಯೋಗ ಗುರುಗಳ ಮಾರ್ಗದರ್ಶನ ಪಾಲಿಸಲು ಧ್ವನಿವರ್ಧಕದ ಅಳವಡಿಸಲಾಗಿತ್ತು.

ಈ ವೇಳೆ ಪಾಲಿಕೆ ಆಯುಕ್ತೆ ಶಿಲ್ಪಾನಾಗ್‌, ಯೋಗ ಗುರು ಶ್ರೀಹರಿ, ರವೀಂದ್ರಸ್ವಾಮಿ, ಬಿ.ಎಸ್‌. ಪ್ರಶಾಂತ್‌, ಡಿ. ರವಿಕುಮಾರ್‌ ಸೇರಿದಂತೆ ಯೋಗಾಸಕ್ತರು, ವಿದ್ಯಾರ್ಥಿಗಳು, ಯೋಗಬಂಧುಗಳು, ಸಾರ್ವಜನಿಕರು, ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳ ನೌಕರರು ಪಾಲ್ಗೊಂಡಿದ್ದರು.

ರಾಜೀನಾಮೆ ಅಂಗೀಕಾರದ ನಂತರ ರಾಜ್ಯಾಧ್ಯಕ್ಷರ ಬದಲಾವಣೆ: ಎಚ್‌. ವಿಶ್ವನಾಥ್‌ ಅವರ ರಾಜೀನಾಮೆ ಅಂಗೀಕಾರವಾದ ಮೇಲೆ ಜೆಡಿಎಸ್‌ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಚರ್ಚಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವ ಜೆಡಿಎಸ್‌ ಘಟಕಕ್ಕೆ ನಿಖಿಲ್‌ ಕುಮಾರಸ್ವಾಮಿ ಹೆಸರು ಕೇಳಿ ಬಂದಿದೆಯೇ ಹೊರತು, ರಾಜ್ಯಾಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಅವರ ಹೆಸರು ಇಲ್ಲ. ಈಗ ವಿಶ್ವನಾಥ್‌ ಅವರು ನೀಡಿರುವ ರಾಜೀನಾಮೆಯೇ ಅಂಗೀಕರವಾಗಿಲ್ಲ.

ಅದು ಅಂಗೀಕಾರಗೊಂಡ ಮೇಲೆ ಬದಲಾವಣೆ ಕುರಿತು ಚರ್ಚಿಸಲಾಗುವುದು. ಅಲ್ಲಿಯವರೆಗೂ ಬದಲಾವಣೆ ಕುರಿತು ಮಾತೇ ಇಲ್ಲ. ಯುವ ಘಟಕಕ್ಕೆ ನಿಖಿಲ್‌ ಹೆಸರು ಪ್ರಸ್ತಾಪವಾಗಿರುವುದರಿಂದ ಈ ಕುರಿತು ಚರ್ಚಿಸಬೇಕಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.