ಭಾರತ-ಪಾಕ್‌ ಮ್ಯಾಚ್‌: ರಾಹುಲ್‌ ಜತೆ ತುಳು ಮಾತು!


Team Udayavani, Jun 18, 2019, 5:46 AM IST

1706MLR32

ಭಾರತ-ಪಾಕ್‌ ಕ್ರಿಕೆಟ್‌ ಪಂದ್ಯ ವೀಕ್ಷಿಸಿದ ಮಂಗಳೂರಿನ ರೋಹನ್‌ ಶೆಟ್ಟಿ ಮತ್ತು ಸುಶಾಂತ್‌.

ಮಂಗಳೂರು: ಭಾರತ- ಪಾಕಿಸ್ಥಾನ ನಡುವಿನ ವಿಶ್ವಕಪ್‌ ಪಂದ್ಯದ ವೇಳೆ ಮ್ಯಾಂಚೆಸ್ಟರ್‌ ಸ್ಟೇಡಿಯಂನಲ್ಲಿ ತುಳು ಸಂಭಾಷಣೆ ಕೇಳಿಬಂದಿದೆ!

ಪಂದ್ಯ ನೋಡಲು ಬಂದ ಮಂಗ ಳೂರಿನ ಇಬ್ಬರು ಗ್ಯಾಲರಿಯಲ್ಲಿ ಕೂತು ರಾಹುಲ್‌ ಅವರನ್ನು ಉಲ್ಲೇ ಖೀಸಿ ತುಳುವಿನಲ್ಲೇ ಮಾತನಾಡಿ ಸಂಭ್ರಮಿಸುತ್ತಿದ್ದರು. ಇದರ ವೀಡಿಯೊ ವೈರಲ್‌ ಆಗಿದೆ.

ಮಲೇಶ್ಯದಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿರುವ ಮಂಗಳೂರಿನ ಕದ್ರಿಯ ರೋಹನ್‌ ಶೆಟ್ಟಿ ಮತ್ತು ಉರ್ವಾದ ಸುಶಾಂತ್‌ ಅವರು ಕ್ರಿಕೆಟ್‌ ವೀಕ್ಷಣೆಗೆ ಮ್ಯಾಂಚೆಸ್ಟರ್‌ಗೆ ತೆರಳಿದ್ದರು. ಡೀಪ್‌ ಸ್ಕೆ Ìàರ್‌ಲೆಗ್‌ ಸ್ಟಾಂಡ್‌ನ‌ಲ್ಲಿ ಕ್ರಿಕೆಟ್‌ ವೀಕ್ಷಿಸುವಾಗ ಅಲ್ಲೇ ಕೂಗಳತೆ ದೂರದಲ್ಲಿ ರಾಹುಲ್‌ ಅವರು ಕ್ಷೇತ್ರರಕ್ಷಣೆ ಮಾಡುತ್ತಿದ್ದರು. ರಾಹುಲ್‌ ಕೂಡ ಮಂಗಳೂರಿನವರಾದ್ದರಿಂದ ಅವರನ್ನು ಉಲ್ಲೇಖೀಸಿ ತುಳು ಭಾಷೆಯಲ್ಲಿ ಮಾತನಾಡಿದ್ದಾರೆ.

ರೋಹನ್‌ ಶೆಟ್ಟಿ ಅವರು “ಉದಯವಾಣಿ’ ಜೊತೆ ಮಾತನಾಡಿ, “ನಾನು ಮತ್ತು ನನ್ನ ಸ್ನೇಹಿತ ವಿಶ್ವಕಪ್‌ ಕ್ರಿಕೆಟ್‌ನ ಭಾರತ ತಂಡವಾಡಿದ ಕಳೆದ ಮೂರು ಪಂದ್ಯಕ್ಕೂ ಆಗಮಿಸಿದ್ದೆವು. ಪಾಕ್‌ ವಿರುದ್ಧದ ಪಂದ್ಯಕ್ಕೆ ಕೆಲವು ತಿಂಗಳ ಹಿಂದೆಯೇ ಟಿಕೆಟ್‌ ಬುಕ್‌ ಮಾಡಿದ್ದೆವು. ರಾಹುಲ್‌ ಅವರು ನಾವು ಕುಳಿತ ಗ್ಯಾಲರಿ ಪಕ್ಕದಲ್ಲಿಯೇ ಕ್ಷೇತ್ರರಕ್ಷಣೆಯಲ್ಲಿದ್ದರು. ಹೀಗಾಗಿ ತುಳು ಭಾಷೆಯಲ್ಲೇ ಮಾತನಾಡಿದೆವು’ ಎಂದರು.
ರಾಹುಲ್‌ ಅವರ ಬಾಲ್ಯದ ಕ್ರಿಕೆಟ್‌ ಕೋಚ್‌ ಜಯರಾಜ್‌ ಅವರು “ಉದಯವಾಣಿ’ಗೆ ಪ್ರತಿಕ್ರಿಯಿಸಿ, “ರಾಹುಲ್‌ಗೆ ಬಾಲ್ಯದಲ್ಲಿಯೇ ಕ್ರಿಕೆಟ್‌ ಎಂದರೆ ಆಸಕ್ತಿ. ನೆಹರೂ ಮೈದಾನದಲ್ಲಿ ಕ್ರಿಕೆಟ್‌ ಕಲಿಯುವ ವೇಳೆ ತನ್ನ ಸಹಪಾಠಿಗಳೊಂದಿಗೆ ತುಳು ಭಾಷೆಯಲ್ಲೇ ಹಾಸ್ಯ ಚಟಾಕಿ ಹಾರಿಸುತ್ತಿದ್ದರು’ ಎಂದು ನೆನಪಿಸಿದರು.

ಎಂಕ್ಲೆಗ್‌ ಸೆಂಚುರಿ ಬೋಡು…
“ರಾಹುಲ್‌ ಎಂಚ ಉಲ್ಲರ್‌ .. ರಾಹುಲ್‌ ಎಂಕ್ಲೆಗ್‌ ಸೆಂಚುರಿ ಬೋಡು .. ಎಂಕ್‌É ಕುಡ್ಲಡ್‌ª ಬೈದ’ (ರಾಹುಲ್‌ ಹೇಗಿದ್ದೀರಿ, ರಾಹುಲ್‌ ನಮಗೆ ನಿಮ್ಮ ಶತಕ ನೋಡಬೇಕು .. ನಾವು ಮಂಗಳೂರಿನಿಂದ ಬಂದಿದ್ದೇವೆ) ಎಂದು ರೋಹನ್‌ ಶೆಟ್ಟಿ ಅವರು ರಾಹುಲ್‌ ಅವರಿಗೆ ಕೇಳುವಂತೆ ಹೇಳಿದ್ದಾರೆ. ಸುಶಾಂತ್‌ ಅವರು ವೀಡಿಯೊ ಮಾಡಿದ್ದಾರೆ. ಇವರ ಮಾತು ಕೇಳಿದ ರಾಹುಲ್‌ ಇವರತ್ತ ಕೈ ಬೀಸಿದ್ದಾರೆ.

“ರಾಹುಲ್‌ ತುಳು ಭಾಷೆಯನ್ನು ಸರಾಗವಾಗಿ ಮಾತನಾಡುತ್ತಾನೆ. ಅವನಿಗೆ ಮಂಗಳೂರು ಮೂಲದ ಅನೇಕ ಸ್ನೇಹಿತರಿದ್ದಾರೆ. ಅವರ ಜತೆ ಬೆರೆತು ತುಳು ಭಾಷೆಯಲ್ಲೇ ಮಾತನಾಡುತ್ತಾನೆ. ಮಂಗಳೂರಿಗ ಎಂಬ ಹೆಮ್ಮೆ ಅವನಿಗಿದೆ’
– ರಾಜೇಶ್ವರಿ, ಕೆ.ಎಲ್‌.
ರಾಹುಲ್‌ ಅವರ ತಾಯಿ

-ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.