ಕೊನೆಗೂ ಗೆದ್ದ ವೈದ್ಯರು
ಬೇಡಿಕೆ ಈಡೇರಿಸಲು ಒಪ್ಪಿದ್ದಕ್ಕೆ ಮುಷ್ಕರ ವಾಪಸ್
Team Udayavani, Jun 18, 2019, 5:09 AM IST
ಕೋಲ್ಕತ್ತಾ: ಸಹೋದ್ಯೋಗಿಗಳ ಮೇಲಿನ ಹಲ್ಲೆ ಖಂಡಿಸಿ ಕಳೆದ ಒಂದು ವಾರದಿಂದ ಪಶ್ಚಿಮ ಬಂಗಾಳದಲ್ಲಿ ವೈದ್ಯರು ನಡೆಸುತ್ತಿದ್ದ ಮುಷ್ಕರಕ್ಕೆ ಕೊನೆಗೂ ಜಯ ಸಿಕ್ಕಿದೆ. ವೈದ್ಯರ ಪಟ್ಟು ಹಾಗೂ ಬೇಡಿಕೆಗಳಿಗೆ ಮಣಿದಿರುವ ಸಿಎಂ ಮಮತಾ ಬ್ಯಾನರ್ಜಿ, ಎಲ್ಲ ಬೇಡಿಕೆಗಳನ್ನೂ ಈಡೇರಿಸುವ ಭರವಸೆ ನೀಡಿದ್ದಾರೆ.
ಸೋಮವಾರ ಒಂದೂವರೆ ಗಂಟೆ ಕಾಲ ನಡೆದ ಮಾತುಕತೆ ಯಶಸ್ವಿಯಾಗಿದ್ದು, ಮುಷ್ಕರ ಕೈಬಿಡುವುದಾಗಿ ವೈದ್ಯರು ಘೋಷಿಸಿದ್ದಾರೆ. ಜತೆಗೆ, ಸಿಎಂ ಮಮತಾ ಅವರು ಎನ್ಆರ್ಎಸ್ ಆಸ್ಪತ್ರೆಗೆ ತೆರಳಿ, ಹಲ್ಲೆಗೊಳಗಾದ ವೈದ್ಯರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಇಂದು ವಿಚಾರಣೆ: ದೇಶಾದ್ಯಂದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಸುರಕ್ಷತೆ ಮತ್ತು ಭದ್ರತೆಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿ ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಪರಿಗಣಿಸಿದ್ದು, ಮಂಗಳವಾರ ವಿಚಾರಣೆ ನಡೆಸುವುದಾಗಿ ಹೇಳಿದೆ. ಇದೇ ವೇಳೆ, ಆರೋಗ್ಯ ಕೇಂದ್ರಗಳಲ್ಲಿನ ವೈದ್ಯರ ಸುರಕ್ಷತೆಗೆ ಸಂಬಂಧಿಸಿ ಕಾನೂನು ತರುವ ಕುರಿತು ಸದ್ಯದಲ್ಲೇ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಕೇಂದ್ರ ಸಚಿವ ಹರ್ಷವರ್ಧನ್ ಸೋಮವಾರ ತಿಳಿಸಿದ್ದಾರೆ.
ಮತ್ತೂಬ್ಬ ವೈದ್ಯನ ಮೇಲೆ ಹಲ್ಲೆ: ವೈದ್ಯರ ಮೇಲಿನ ಹಲ್ಲೆ ಖಂಡಿಸಿ ದೇಶವ್ಯಾಪಿ ಪ್ರತಿಭಟನೆ ನಡೆದ ನಡುವೆಯೇ ದಿಲ್ಲಿಯ ಏಮ್ಸ್ನಲ್ಲಿ ಕಿರಿಯ ವೈದ್ಯರೊಬ್ಬರ ಮೇಲೆ ಹಲ್ಲೆ ನಡೆದಿದೆ. ತಾವು ಕರೆತಂದ ರೋಗಿಯನ್ನು ಪರೀಕ್ಷಿಸುವ ಬದಲು ತುರ್ತು ಅಗತ್ಯವಿದ್ದ ಮತ್ತೂಬ್ಬ ರೋಗಿಯನ್ನು ಪರೀಕ್ಷಿಸಿದ್ದಕ್ಕೆ ವೈದ್ಯರ ಮೇಲೆ ರೋಗಿಯ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಒಪ್ಪಲಾದ ಅಂಶಗಳು
ಎಲ್ಲ ಆಸ್ಪತ್ರೆಗಳಲ್ಲಿ ನೋಡಲ್ ಅಧಿಕಾರಿ ನೇಮಕ, ಆಸ್ಪತ್ರೆಗಳಲ್ಲಿ ಮಡಚಲು ಆಗುವಂಥ ಗೇಟ್
ರೋಗಿಗಳ ಕಡೆಯವರ ಜೊತೆ ಸಂವಹನ ನಡೆಸಲು 3 ಪಾಳಿಗಳಲ್ಲಿ ಕಾರ್ಯನಿರ್ವಹಿಸುವ ಸಾರ್ವಜನಿಕ ಸಂಪರ್ಕಾಧಿಕಾರಿ ನೇಮಕ
ಹಲ್ಲೆಕೋರರ ವಿರುದ್ಧ ಐಪಿಸಿ ಅಡಿ ಕ್ರಮ, ಆಸ್ಪತ್ರೆಗಳಿಗೆ ರೋಗಿಗಳ ಜತೆ ಬರುವ ಸಂಬಂಧಿಕರ ಸಂಖ್ಯೆಗೆ ನಿರ್ಬಂಧ
ಸೂಚನಾ ಫಲಕಗಳು ಮತ್ತು ಸಿಸಿಟಿವಿ ಕ್ಯಾಮೆರಾ ಅಳವಡಿಕೆ
ವೈದ್ಯಕೀಯ ಸೇವಾ ರಕ್ಷಣೆ ಕಾಯ್ದೆಯ ಶೀಘ್ರ ಅನುಷ್ಠಾನ
ಪ್ರತಿ ಆಸ್ಪತ್ರೆಯಲ್ಲೂ ರೋಗಿ ಕಲ್ಯಾಣ ಸಮಿತಿಯಲ್ಲಿ ವಿದ್ಯಾರ್ಥಿ ಹಾಗೂ ಪೊಲೀಸ್ ಪ್ರತಿನಿಧಿ ಇರಲೇಬೇಕು
ವೈದ್ಯಕೀಯ ಹಿಂಸಾಚಾರದ ಸಂದರ್ಭ ದಲ್ಲಿ ತುರ್ತು ಪೊಲೀಸ್ ದೂರವಾಣಿ ಸಂಖ್ಯೆ ಮತ್ತು ಇಮೇಲ್ ಐಡಿ
ವೈದ್ಯರ ಮೇಲಿನ ಹಲ್ಲೆಯನ್ನು ಖಂಡಿಸಿ ಪ್ರಕಟಣೆ ಹೊರಡಿಸಬೇಕು
ಪೊಲೀಸರ ನಿರ್ಲಕ್ಷ್ಯದ ಕುರಿತು ತನಿಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.