ಹಾಲಾಡಿ ಪೇಟೆಗೆ ಹೊಸ ವಿನ್ಯಾಸದ ಸರ್ಕಲ್‌

ಗ್ರಾಮ ಪಂಚಾಯತ್‌ ನಿರ್ಣಯಕ್ಕೆ ಕೊನೆಗೂ ಮನ್ನಣೆ ; ಸರ್ಕಲ್‌ ಬೇಡಿಕೆಗೆ ಅಸ್ತು

Team Udayavani, Jun 20, 2019, 5:17 AM IST

1706KDPP1

ಕುಂದಾಪುರ:ಹಾಲಾಡಿ ಪೇಟೆಗೆ ಸರ್ಕಲ್‌ ಬೇಕೇ ಬೇಕು ಎನ್ನುವ ಗ್ರಾಮಸ್ಥರ ಬೇಡಿಕೆ ಹಾಗೂ ಇದರಂತೆ ಗ್ರಾಮಸಭೆಯಲ್ಲಿ ಪಂಚಾಯತ್‌ ಕಳುಹಿಸಿದ ನಿರ್ಣಯಕ್ಕೆ ಲೋಕೋಪಯೋಗಿ ಇಲಾಖೆಯು ಅಸ್ತು ಎಂದಿದ್ದು, ಸರ್ಕಲ್‌ ರಚನೆ ಕುರಿತಂತೆ ಹಳೆಯ ನಕ್ಷೆಯನ್ನು ಪರಿಷ್ಕರಿಸಿ, ಹೊಸದಾಗಿ ನಕ್ಷೆ ತಯಾರಿಸಿ, ಒಪ್ಪಿಗೆಗಾಗಿ ಪಂಚಾಯತ್‌ಗೆ ಕಳುಹಿಸಿದೆ.

ಕಳೆದ ಡಿ. 14ರಂದು ಹಾಲಾಡಿ ಗ್ರಾ.ಪಂ. ಅಧ್ಯಕ್ಷ ಸರ್ವೋತ್ತಮ ಹೆಗ್ಡೆ ಅಧ್ಯಕ್ಷತೆಯಲ್ಲಿ ಹಾಲಾಡಿ ಪೇಟೆಗೆ ಸರ್ಕಲ್‌ ಬೇಕು ಎನ್ನುವ ಕುರಿತು ವಿಶೇಷ ಗ್ರಾಮಸಭೆ ನಡೆದಿತ್ತು. ಸಭೆಯಲ್ಲಿ ಸರ್ಕಲ್‌ ಬೇಡಿಕೆಗೆ ಗ್ರಾಮಸ್ಥರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿ, ಈ ಸಂಬಂಧ ನಿರ್ಣಯ ಮಾಡಿ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಕಳುಹಿಸಲಾಗಿತ್ತು. ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ಈ ನಿರ್ಣಯವನ್ನು ಮುಂದಿಟ್ಟು ಕೊಂಡು, ಮೊದಲು ನಕ್ಷೆ ಸಿದ್ಧಪಡಿಸಿದ್ದ ಬೆಂಗಳೂರಿನ “ಪ್ರಾಮಿ ಕಚೇರಿಗೆ ಮರು ವಿನ್ಯಾಸಕ್ಕೆ ಕಳುಹಿಸಲಾಗಿತ್ತು. ಅದೀಗ ಬಂದಿದೆ.

ಬ್ಲಾಕ್‌ ಸ್ಪಾಟ್‌ ಎನ್ನುವ ಹೆಸರಲ್ಲಿ ಹಾಲಾಡಿ ಪೇಟೆಯಲ್ಲಿ ರಸ್ತೆ ಅಭಿವೃದ್ಧಿಪಡಿಸಲು ಲೋಕೋಪಯೋಗಿ ಇಲಾಖೆಯಿಂದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರ ಮುತುವರ್ಜಿಯಲ್ಲಿ 3.10 ಕೋ. ರೂ. ಮಂಜೂರಾಗಿತ್ತು. ಅದರಂತೆ ಈಗ ವಿರಾಜಪೇಟೆ – ಬೈಂದೂರು ರಾಜ್ಯ ಹೆದ್ದಾರಿ, ಹಾಲಾಡಿ – ಅಮಾಸೆಬೈಲು, ಕೋಟೇಶ್ವರ – ಹಾಲಾಡಿ ಕಡೆಗಳಿಗೆ ತೆರಳುವ ರಸ್ತೆ ಅಗಲೀಕರಣವಾಗಿದೆ. ಆದರೆ ಕೆಲವೆಡೆ ಜಾಗದ ತಕರಾರು ಇರುವುದರಿಂದ ಸರ್ಕಲ್‌ ನಿರ್ಮಾಣ ಬೇಡಿಕೆ ನನೆ ಗುದಿಗೆ ಬಿದ್ದಿತ್ತು. ಇದನ್ನರಿತ ಗ್ರಾಮಸ್ಥರು ಇದಕ್ಕಾಗಿ ಹೋರಾಟ ಸಮಿತಿ ರಚಿಸಿ ಈಡೇರಿಕೆಗೆ ಪ್ರಯತ್ನಿಸಿದ್ದರು.

ಮುಂದೇನು?
ಸರ್ಕಲ್‌ ನಿರ್ಮಾಣಕ್ಕೆ ಹೊಸ ನಕ್ಷೆ ರಚಿಸಲಾಗಿದೆ. ಆದರೆ ಅದಕ್ಕಾಗಿ 2-3 ಕಡೆಗಳಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಆಗಬೇಕಾಗಿದೆ. 2 ಕಡೆ ಪಟ್ಟಾ ಜಾಗವಿದ್ದು, ಅದಕ್ಕೆ ಎಸಿಯವರ ಮೂಲಕ ಒಪ್ಪಿಗೆ ಬೇಕಾಗಿದೆ. ಕೆಲವೆಡೆಗಳಲ್ಲಿ ಅಂಗಡಿ ಕಟ್ಟಿಕೊಂಡಿದ್ದು, ಅವರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿ, ಅಲ್ಲಿಂದ ತೆರವು ಮಾಡುವ ಕೆಲಸ ಪಂಚಾಯತ್‌ನಿಂದ ಆಗಬೇಕಾಗಿದೆ. ಇದೆಲ್ಲ ಆದ ಬಳಿಕ ಹೆಚ್ಚುವರಿ ಅನುದಾನಕ್ಕೆ ಬೆಂಗಳೂರಿನ ಪ್ರಾಮಿÕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಅನಂತರ ಟೆಂಡರ್‌ ಪ್ರಕ್ರಿಯೆ ನಡೆಯುತ್ತದೆ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.

ಸರ್ಕಲ್‌ಗೆ ಎಲ್ಲ ಸಹಕಾರ
ಹಾಲಾಡಿ ಪೇಟೆಯಲ್ಲಿ ಸರ್ಕಲ್‌ ಆಗಬೇಕಾದರೆ ಗ್ರಾ.ಪಂ.ನಿಂದ ಎಲ್ಲ ರೀತಿಯಿಂದಲೂ ಸಹಕಾರ ನೀಡುತ್ತೇವೆ. ಅದಕ್ಕೆ ಪಂಚಾಯತ್‌ ವತಿಯಿಂದ ಏನೆಲ್ಲ ಆಗಬೇಕೋ ಅದನ್ನೆಲ್ಲ ಆದಷ್ಟು ಶೀಘ್ರದಲ್ಲಿ ವ್ಯವಸ್ಥೆ ಮಾಡಿಕೊಡಲಾಗುವುದು. ನಕ್ಷೆ ನಮಗೆ ಅಧಿಕೃತವಾಗಿ ಇನ್ನೂ ಸಿಕ್ಕಿಲ್ಲ. ಆದರೆ ಜನರ ಕೈಗೆ ಸಿಕ್ಕಿದೆ. ಈ ಬಗ್ಗೆ ಮತ್ತೂಮ್ಮೆ ಪರಿಶೀಲಿಸಿ, ಆ ಬಳಿಕ ಜನರ ಅಭಿಪ್ರಾಯದಂತೆ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ.
-ಸರ್ವೋತ್ತಮ ಹೆಗ್ಡೆ, ಅಧ್ಯಕ್ಷರು, ಹಾಲಾಡಿ ಗ್ರಾ.ಪಂ.

ಪಂಚಾಯತ್‌ಗೆ ಕಳುಹಿಸಲಾಗಿದೆ
ಈಗ ಹಳೆ ನಕ್ಷೆಯನ್ನು ಪರಿಷ್ಕೃರಣೆ ಮಾಡಿ ಪ್ರಾಮಿÕಯವರು ಹೊಸ ನಕ್ಷೆ ಕಳುಹಿಸಿದ್ದಾರೆ. ಇದನ್ನೀಗ ಪಂಚಾಯತ್‌ಗೆ ಕಳುಹಿಸಿದ್ದೇವೆ. ಅವರ ಒಪ್ಪಿಗೆ ಸಿಕ್ಕಿ, ಅಲ್ಲಿ ಜಾಗ ಒತ್ತುವರಿ ಇನ್ನಿತರ ಕೆಲ ಅಡೆತಡೆಗಳೆಲ್ಲ ಪರಿಹಾರವಾದರೆ ಮತ್ತೆ ಕಾಮಗಾರಿಗೆ ಹೆಚ್ಚುವರಿ ಅನುದಾನಕ್ಕೆ ಬೇಡಿಕೆ ಸಲ್ಲಿಸಲಾಗುವುದು.
– ದುರ್ಗಾದಾಸ್‌, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌

ಟಾಪ್ ನ್ಯೂಸ್

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

4-chincholi

Chincholi: ಆಕ್ಸಿಜನ್ ಪ್ಲಾಂಟ್ ನಲ್ಲಿ ಅನಿಲ ಸೋರಿಕೆ

1

ಕೆಲಸವಿಲ್ಲದೆ ಮಾನಸಿಕ ಒತ್ತಡ: 33ರ ಹರೆಯದಲ್ಲೇ ನೇಣಿಗೆ ಶರಣಾದ ಖ್ಯಾತ ಕಾರ್ಯಾಕಾರಿ ನಿರ್ಮಾಪಕಿ

2-agumbe

Agumbe: ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ; ಕೊಲೆ ಆರೋಪಿ ಬಂಧನ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue: ಕುಂದಾಪುರದಲ್ಲಿ 6 ತಿಂಗಳಲ್ಲಿ 76 ಮಂದಿಗೆ ಡೆಂಗ್ಯೂ

Dengue: ಕುಂದಾಪುರದಲ್ಲಿ 6 ತಿಂಗಳಲ್ಲಿ 76 ಮಂದಿಗೆ ಡೆಂಗ್ಯೂ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

4-chincholi

Chincholi: ಆಕ್ಸಿಜನ್ ಪ್ಲಾಂಟ್ ನಲ್ಲಿ ಅನಿಲ ಸೋರಿಕೆ

1

ಕೆಲಸವಿಲ್ಲದೆ ಮಾನಸಿಕ ಒತ್ತಡ: 33ರ ಹರೆಯದಲ್ಲೇ ನೇಣಿಗೆ ಶರಣಾದ ಖ್ಯಾತ ಕಾರ್ಯಾಕಾರಿ ನಿರ್ಮಾಪಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.