ತಹಶೀಲ್ದಾರ್‌, ಎಸಿ ಉಪಸ್ಥಿತಿಗೆ ಆಗ್ರಹಿಸಿ ಬಹಿಷ್ಕಾರ


Team Udayavani, Jun 22, 2019, 5:00 AM IST

12

ಪುತ್ತೂರು: ತಹಶೀಲ್ದಾರ್‌ ಅಥವಾ ಸಹಾಯಕ ಕಮಿಷನರ್‌ ಅನುಪಸ್ಥಿತಿ ಯಲ್ಲಿ ಎಸ್ಸಿ, ಎಸ್ಟಿ ಕುಂದುಕೊರತೆ ಪರಿಶೀಲನ ಸಭೆ ನಡೆಸುವುದಕ್ಕೆ ವಿರೋಧ ವ್ಯಕ್ತಪಡಿಸಿದ ದಲಿತ ಸಂಘಟನೆಗಳ ಮುಖಂಡರು ಸಭೆಯನ್ನು ಬಹಿಷ್ಕರಿಸಿ ಹೊರ ನಡೆದ ಘಟನೆ ಶುಕ್ರವಾರ ನಡೆದಿದೆ.

ಪುತ್ತೂರು ತಾ.ಪಂ. ಸಭಾಂಗಣದಲ್ಲಿ ಶುಕ್ರವಾರ ಎಸ್ಸಿ, ಎಸ್ಟಿ ಕುಂದುಕೊರತೆ ಪರಿಶೀಲನ ಸಭೆಯನ್ನು ಆಯೋಜಿಸ ಲಾಗಿತ್ತು. ಸಭೆಯ ಅಧ್ಯಕ್ಷತೆ ವಹಿಸಬೇಕಾದ ತಹಶೀಲ್ದಾರ್‌ ಅವರು ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಎಸಿಬಿಯವರಿಂದ ಬಂಧಿಸ ಲ್ಪಟ್ಟಿರುವುದರಿಂದ ಅವರ ಪರವಾಗಿ ಉಪತಹಶೀಲ್ದಾರ್‌, ತಾಲೂಕು ಪಂಚಾಯತ್‌ ಇಒ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಸಭೆ ನಡೆಸಲು ಬಂದಿದ್ದರು. ಇದಕ್ಕೆ ಸಂಘಟನೆಯ ಮುಖಂಡರು ವಿರೋಧ ವ್ಯಕ್ತಪಡಿಸಿದರು.

ಆರು ತಿಂಗಳು ಕಳೆದಿದೆ
ಸಭೆಗೆ ತಹಶೀಲ್ದಾರ್‌ ಅಥವಾ ಸಹಾ ಯಕ ಕಮಿಷನರ್‌ ಬರಬೇಕು. ಇಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ವಿಚಾರಗಳೇ ಹೆಚ್ಚು ಚರ್ಚಿಸಲ್ಪಡುತ್ತವೆ. ಜನವರಿಯಲ್ಲಿ ಸಭೆ ನಡೆದ ಬಳಿಕ ಸಭೆ ನಡೆಯದೆ ಆರು ತಿಂಗಳು ಕಳೆದಿದೆ. ದಲಿತರ ಸಮಸ್ಯೆಗಳ ಚರ್ಚೆಗೆ ಅವಕಾಶ ನೀಡದೆ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಹೀಗಾದರೆ ಅಭಿವೃದ್ಧಿ ಸಾಧ್ಯವಾಗುವುದಾದರೂ ಹೇಗೆ?

ತಹಶೀಲ್ದಾರ್‌ ಅಥವಾ ಸಹಾಯಕ ಕಮಿಷನರ್‌ ಅನುಪಸ್ಥಿತಿಯಲ್ಲಿ ಸಭೆ ನಡೆಸಲು ಬಿಡುವುದಿಲ್ಲ ಎಂದು ಮುಖಂಡ ರಾದ ಗಿರಿಧರ ನಾಯ್ಕ, ಬಾಲಚಂದ್ರ ಸೊರಕೆ, ಸೇಸಪ್ಪ ನೆಕ್ಕಿಲ ಮೊದಲಾದವರು ಎಚ್ಚರಿಸಿದರು.

ಕೆಲಸಗಳು ಆಗುತ್ತಿಲ್ಲ
ಗಿರಿಧರ್‌ ಮಾತನಾಡಿ, ನಾನು ಸುಳ್ಯದ ಸಭೆಗೂ ಹೋಗುತ್ತೇನೆ. ಅಲ್ಲಿನ ತಹಶೀಲ್ದಾರ್‌ ಉತ್ತಮ ಸ್ಪಂದನೆ ನೀಡು ತ್ತಾರೆ. ಆದರೆ ಪುತ್ತೂರಿನಲ್ಲಿ ದಲಿತರಿಗೆ ಸಂಬಂಧಿಸಿದ ಮೂಲ ಸೌಕರ್ಯಗಳನ್ನೇ ಮಾಡಿಕೊಡುತ್ತಿಲ್ಲ. ತಾಲೂಕು ಆಫೀಸ್‌ಗೆ ತೆರಳಿದರೆ ಯಾವುದೇ ಕೆಲಸಗಳು ಆಗುತ್ತಿಲ್ಲ. ಸಹಾಯಕ ಕಮಿಷನರ್‌ ಆದರೂ ಬರಬೇಕು. ನಮಗೆ ಸಮಸ್ಯೆಗಳನ್ನು ಹೇಳಿಕೊಳ್ಳಲು ಇದೆ ಎಂದವರು ಹೇಳಿದರು.

ಸಭೆ ಬರ್ಖಾಸ್ತು
ಅನಂತರ ತಾ.ಪಂ. ಧಿಕಾರಿ ಜಗದೀಶ್‌ ಎಸ್‌. ಮಾತನಾಡಿ, ಈ ಸಭೆಯ ಅಧ್ಯಕ್ಷರು ತಹಶೀಲ್ದಾರ್‌ ಅವರೇ ಆಗಿರುತ್ತಾರೆ. ಸಭೆ ಇಂದು ಬೇಡ ಎಂದಾದರೆ ಮುಂದಿನ ದಿನವನ್ನು ನಿಗದಿ ಮಾಡೋಣ ಎಂದು ಹೇಳಿದರು. ಬಳಿಕ ಸಭೆಯನ್ನು ಬರ್ಖಾಸ್ತುಗೊಳಿಸಲಾಯಿತು. ಮುಂದಿನ ಸಭೆಯ ದಿನಾಂಕವನ್ನು ತಿಳಿಸುವುದಾಗಿ ಇಒ ಹೇಳಿದರು.

ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜಗದೀಶ್‌ ಎಸ್‌., ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಗಾಯತ್ರಿ ಸಿ.ಎಚ್., ಉಪ ತಹಶೀಲ್ದಾರ್‌ ರಾಮಣ್ಣ ನಾಯ್ಕ ಉಪಸ್ಥಿತರಿದ್ದರು. ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.