ಸರಕಾರಿ ಆಸ್ಪತ್ರೆ ಹೊರಗುತ್ತಿಗೆ ಡಿ ಗ್ರೂಪ್‌ ನೌಕರರ ಸಂಕಷ್ಟ

ನಾಲ್ಕು ತಿಂಗಳಿಂದ ವೇತನವಿಲ್ಲ; ಕೆಲಸಕ್ಕೆ ಗೈರು

Team Udayavani, Jun 22, 2019, 5:00 AM IST

Udayavani Kannada Newspaper

ಸುಳ್ಯ: ರಾಜ್ಯಾದ್ಯಂತ ತಾಲೂಕು ಸರಕಾರಿ ಆಸ್ಪತ್ರೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಡಿ ಗ್ರೂಪ್‌ ಸಿಬಂದಿಗೆ ನಾಲ್ಕು ತಿಂಗಳಿನಿಂದ ವೇತನ ಲಭಿಸಿಲ್ಲ. ಇದರಿಂದ ಹೆಚ್ಚಿನ ಸಿಬಂದಿ ಕೆಲಸಕ್ಕೆ ಗೈರುಹಾಜರಾಗುತ್ತಿದ್ದು, ಆಸ್ಪತ್ರೆಯ ಸ್ವಚ್ಛತೆ ಸೇರಿದಂತೆ ಹಲವು ಕೆಲಸಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದೆ.

ಮಳೆಗಾಲ ಆರಂಭದ ಸಂದರ್ಭ ಸಾಂಕ್ರಾಮಿಕ ರೋಗ ಹರಡುವ ಭೀತಿ ಇರುವ ಹೊತ್ತಲ್ಲೇ ಸಿಬಂದಿ ಕೊರತೆಯಿಂದ ದಿನನಿತ್ಯದ ಚಟುವಟಿಕೆಗಳಿಗೆ ಪರದಾಡುವಂತಾಗಿದೆ.

ಉಭಯ ಜಿಲ್ಲೆಯಲ್ಲಿ 330 ನೌಕರರು!
ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ದ.ಕ. ಜಿಲ್ಲೆಯಲ್ಲಿ 176 ಮತ್ತು ಉಡುಪಿ ಜಿಲ್ಲೆಯಲ್ಲಿ 154 ಹೊರಗುತ್ತಿಗೆ ಸಿಬಂದಿ ಇದ್ದಾರೆ. ಇವರು ಸ್ವಚ್ಛತೆ, ಅಡುಗೆ ಸಹಾಯಕ ಕೆಲಸಗಳನ್ನು ನಿರ್ವಹಿಸುತ್ತಾರೆ. ಇವರಲ್ಲಿ ಶೇ. 90ಕ್ಕೂ ಅಧಿಕ ಮಂದಿಗೆ ವೇತನ ಬಂದಿಲ್ಲ.

ಜೀವನ ನಿರ್ವಹಣೆ ಕಷ್ಟ!
ವೇತನ ಸಿಗದ ಕಾರಣ ಸುಳ್ಯ ಆಸ್ಪತ್ರೆಯಲ್ಲಿ 15 ಸಿಬಂದಿ ಕೆಲಸಕ್ಕೆ ಹಾಜರಾಗುತ್ತಿಲ್ಲ; ಬರುತ್ತಿರುವವರು ಮೂವರು ಮಾತ್ರ. ನಾಲ್ವರು ಉದ್ಯೋಗವನ್ನೇ ತೊರೆದಿದ್ದಾರೆ. ಕುಟುಂಬ ನಿರ್ವಹಣೆ, ಮಕ್ಕಳ ವಿದ್ಯಾಭ್ಯಾಸದ ಖರ್ಚಿಗೆ ಬೇರೆ ದಾರಿ ಕಾಣದೆ ಪರ್ಯಾಯ ಉದ್ಯೋಗ ಹುಡುಕುವ ಸ್ಥಿತಿ ಇವರದು. ವೇತನ ಪಾವತಿ ಮಾಡದ ಕಾರಣ ಕೆಲಸಕ್ಕೆ ಬನ್ನಿ ಎಂದು ಒತ್ತಡ ಹೇರಲಾಗದ ಸ್ಥಿತಿಯಲ್ಲಿ ಇಲಾಖೆಯಿದೆ.

ಬಿಡುಗಡೆ ಹಂತದಲ್ಲಿದೆ
ನಾಲ್ಕು ತಿಂಗಳ ಬಾಕಿ ಪೈಕಿ ಎರಡು ತಿಂಗಳ ವೇತನ ಪಾವತಿ ಪ್ರಕ್ರಿಯೆ ಅಂತಿಮಗೊಂಡಿದೆ. ಟ್ರೆಜರಿಯಿಂದ ಬಿಡುಗಡೆ ಬಾಕಿ ಇದೆ. ಉಳಿದ ಎರಡು ತಿಂಗಳ ವೇತನ ಬಿಡುಗಡೆ ಆಗಬೇಕಿದೆ. ಕೆಲವು ಸಿಬಂದಿಯಷ್ಟೇ ಕರ್ತವ್ಯಕ್ಕೆ ಬರುತ್ತಿದ್ದು, ಹೆಚ್ಚಿನವರು ಗೈರಾಗಿದ್ದಾರೆ.
– ಡಾ| ಭಾನುಮತಿ ಮುಖ್ಯ ವೈದ್ಯಾಧಿಕಾರಿ, ತಾ| ಸ.ಆಸ್ಪತ್ರೆ, ಸುಳ್ಯ

ರಾಜ್ಯಮಟ್ಟದ ಪ್ರಕ್ರಿಯೆ
ಹೊರಗುತ್ತಿಗೆ ಸಿಬಂದಿಗೆ ವೇತನ ಆಗದೆ ಇರುವುದು ನಿಜ. ಅದು ರಾಜ್ಯಮಟ್ಟದ ಪ್ರಕ್ರಿಯೆ. ಸರಕಾರದ ಖಜಾನೆಯಿಂದ ಸಿಬಂದಿ ಬ್ಯಾಂಕ್‌ ಖಾತೆಗೆ ನೇರ ಪಾವತಿ ಆಗುತ್ತದೆ.
– ಡಾ| ಸುಬ್ರಹ್ಮಣ್ಯ, ತಾಲೂಕು ಆರೋಗ್ಯಾಧಿಕಾರಿ, ಸುಳ್ಯ

ಶೀಘ್ರ ಪಾವತಿ ನಿರೀಕ್ಷೆ
ಕೆಲವರಿಗೆ ವೇತನ ಸಿಕ್ಕಿಲ್ಲ. ರಾಜ್ಯ ವಲಯದಿಂದ ಬಿಡುಗಡೆ ಆಗಬೇಕಿದೆ. ಈ ಬಗ್ಗೆ ಪತ್ರ ಕಳುಹಿಸಲಾಗಿದೆ. ಅನುದಾನ ಬಿಡುಗಡೆಗೊಳ್ಳುವ ಸಾಧ್ಯತೆ ಇದ್ದು, ಶೀಘ್ರ ವೇತನ ಪಾವತಿ ಆಗುವ ನಿರೀಕ್ಷೆ ಇದೆ.- ರಾಮಕೃಷ್ಣ ರಾವ್‌ ಡಿಎಚ್ಒ, ದ.ಕ. ಜಿಲ್ಲೆ

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.