ಗ್ರಾಮದ ಅಭಿವೃದ್ಧಿಯಲ್ಲಿ ಜನರ ಸಹಕಾರ ಅಗತ್ಯ: ಅಂಗಾರ


Team Udayavani, Jun 22, 2019, 5:00 AM IST

15

ಕಡಬ: ಗ್ರಾಮೀಣ ರಸ್ತೆಗಳು ಸುಸ್ಥಿತಿಯಲ್ಲಿದ್ದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳು ಸೇರಿದಂತೆ ಅಭಿವೃದ್ಧಿಯಾಗಬೇಕಾದರೆ ಜನರ ಸಹಕಾರವೂ ಅಗತ್ಯ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌. ಅಂಗಾರ ಅವರು ನುಡಿದರು.

ಅವರು 35 ಲಕ್ಷ ರೂ. ಅನುದಾನದಲ್ಲಿ ಅಭಿವೃದ್ಧಿಗೊಂಡ ಎಡಮಂಗಲ -ಶ್ರೀ ಕ್ಷೇತ್ರ ಕೆಮ್ಮಲೆ ಹೇಮಳ ಕಾಂಕ್ರೀಟ್ ರಸ್ತೆ ಉದ್ಘಾಟನೆಯನ್ನು ಉದ್ಘಾಟಿಸಿದ ಬಳಿಕ ಹೇಮಳ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಜರಗಿದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುವ ಸಂದರ್ಭದಲ್ಲಿ ಸ್ಥಳೀಯ ಜನರು ಕಾಮಗಾರಿಗಳ ಗುಣಮಟ್ಟದ ಕುರಿತು ಕಾಳಜಿ ವಹಿಸಬೇಕು. ಕಳಪೆ ಕಾಮಗಾರಿಗಳು ನಡೆದು ಸರಕಾರದ ಅನುದಾನ ಪೋಲಾಗದಂತೆ ಜಾಗ್ರತೆ ವಹಿಸಿ ಗ್ರಾಮದ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು ಎಂದು ಹೇಳಿದರು.

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸೇತುವೆಗಳು, ಗ್ರಾಮೀಣ ರಸ್ತೆಗಳೂ ಸೇರಿದಂತೆ ಪ್ರಮುಖ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿಪಡಿಸಲು ವಿಶೇಷ ಅನುದಾನಗಳನ್ನು ನೀಡಲಾಗಿದೆ. ಈಗಾಗಲೇ ಹಲವು ಸೇತುವೆಗಳು ಹಾಗೂ ರಸ್ತೆಗಳ ಕಾಮಗಾರಿಗಳು ಮುಗಿದಿದ್ದು, ಉಳಿದ ಕಾಮಗಾರಿಗಳು ಶೀಘ್ರ ಆರಂಭಗೊಳ್ಳಲಿದೆ ಎಂದರು.

ಬೆಳ್ಳಾರೆ ಜಿ.ಪಂ.ಕ್ಷೇತ್ರದ ಸದಸ್ಯ ಎಸ್‌.ಎನ್‌. ಮನ್ಮಥ ಅವರು ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭಹಾರೈಸಿದರು. ಬಿಜೆಪಿ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ವೆಂಕಟ್ ವಳಲಂಬೆ, ತಾ.ಪಂ. ಸದಸ್ಯೆ ಶುಭದಾ ಎಸ್‌. ರೈ, ಎಣ್ಮೂರು ಗ್ರಾ.ಪಂ. ಅಧ್ಯಕ್ಷೆ ಜಾನಕಿ ಎಸ್‌., ಉಪಾಧ್ಯಕ್ಷ ಕರುಣಾಕರ ಹುದೇರಿ, ಸದಸ್ಯರಾದ

ರಘನಾಥ ರೈ, ಕುಸುಮಾವತಿ ಕೊಡ್ಜೆ, ಸುಳ್ಯ ಎಪಿಎಂಸಿ ಉಪಾಧ್ಯಕ್ಷ ಸಂತೋಷ್‌ ಜಾಕೆ, ಬಿಜೆಪಿ ಬೆಳ್ಳಾರೆ ಶಕ್ತಿ ಕೇಂದ್ರದ ಕಾರ್ಯದರ್ಶಿ ಚಂದ್ರಶೇಖರ್‌ ಪನ್ನೆ, ಶ್ರೀ ಕ್ಷೇತ್ರ ಕೆಮ್ಮಲೆ ದೇವಸ್ಥಾನದ ಟ್ರಸ್ಟ್‌ ಅಧ್ಯಕ್ಷ ನಾರಾಯಣ ಕೊಡ್ಜೆ , ಜೀಣೊìೕದ್ಧಾರ ಸಮಿತಿಯ ಅಧ್ಯಕ್ಷ ಹೊನ್ನಪ್ಪ ಐಪಳ, ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಜಯಾನಂದ ಕೆ. ಮುಂತಾದ ಪ್ರಮುಖರು ಉಪಸ್ಥಿತರಿದ್ದರು. ಶ್ರೀ ಕ್ಷೇತ್ರ ಕೆಮ್ಮಲೆ ಹಾಗೂ ಊರವರ ಪರವಾಗಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಅನುದಾನ ಒದಗಿಸಿದ ಶಾಸಕ ಎಸ್‌. ಅಂಗಾರ ಅವರನ್ನು ಕೆಮ್ಮಲೆ ದೇವಸ್ಥಾನದ ಜೀಣೊìೕದ್ಧಾರ ಸಮಿತಿಯ ಅಧ್ಯಕ್ಷ ಹೊನ್ನಪ್ಪ ಐಪಳ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಜಯಾನಂದ ಕೆ. ಸಮ್ಮಾನಿಸಿದರು.

ಎನಾರ್ದನ ಎ. ಹೇಮಳ ಸ್ವಾಗತಿಸಿ, ಬಾಲಕೃಷ್ಣ ಕೆ. ಹೇಮಳ ಪ್ರಸ್ತಾವನೆಗೈದರು. ಹರ್ಷಿತ್‌ ಹೇಮಳ ನಿರೂಪಿಸಿ, ಗೋಪಾಲಕೃಷ್ಣ ಕೆ. ವಂದಿಸಿದರು.

ಟಾಪ್ ನ್ಯೂಸ್

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.