ಗೂಡ್ಸ್ , ಶಾಲಾ ವಾಹನಗಳ ಮೇಲೆ ನಿಗಾ
Team Udayavani, Jun 22, 2019, 10:33 AM IST
ಮಂಗಳೂರು: ಸರಕು (ಗೂಡ್ಸ್) ಸಾಗಾಟ ವಾಹನಗಳಲ್ಲಿ ಕಾರ್ಮಿಕರನ್ನು ಸಾಗಿಸುವುದು ಮತ್ತು ಶಾಲಾ ವಾಹನಗಳಲ್ಲಿ ಮಿತಿಗಿಂತ ಹೆಚ್ಚು ವಿದ್ಯಾರ್ಥಿಗಳನ್ನು ಸಾಗಿಸುವುದರ ಮೇಲೆ ಪೊಲೀಸ್ ಇಲಾಖೆ ನಿಗಾ ಇರಿಸುತ್ತಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಸರಕು ವಾಹನಗಳಲ್ಲಿ ಜನರನ್ನು ಸಾಗಿಸಿದ 280 ಪ್ರಕರಣಗಳನ್ನು ಮತ್ತು ಶಾಲಾ ವಾಹನಗಳಲ್ಲಿ ಮಿತಿ ಮೀರಿ ವಿದ್ಯಾರ್ಥಿಗಳನ್ನು ಸಾಗಿಸಿದ 60 ಪ್ರಕರಣಗಳನ್ನು ಒಂದು ತಿಂಗಳಲ್ಲಿ ಪತ್ತೆ ಹಚ್ಚಿ ಕೇಸು ದಾಖಲಿಸಲಾಗಿದೆ ಎಂದರು.
ವಾಹನಗಳಿಗೆ ಟ್ಯಾಂಕ್
ಮೀನು ಸಾಗಾಟ ವಾಹನಗಳು ರಸ್ತೆಯುದ್ದಕ್ಕೂ ನೀರು ಚೆಲ್ಲುತ್ತ ಸಾಗುವ ಕುರಿತು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಎಲ್ಲ ವಾಹನಗಳಿಗೆ ತ್ಯಾಜ್ಯ ನೀರು ಸಂಗ್ರಹಕ್ಕೆ ಟ್ಯಾಂಕ್ ಅಳವಡಿ ಸುವಂತೆ ಸೂಚಿಸಿದೆ. ಯಾಂತ್ರಿಕ ಮೀನುಗಾರಿಕೆ ನಿಷೇಧದ ಅವಧಿ ಮುಗಿಯುವು ದರೊಳಗೆ ಎಲ್ಲ ವಾಹನಗಳಲ್ಲೂ ಕಡ್ಡಾಯವಾಗಿ ಟ್ಯಾಂಕ್ ಅಳವಡಿಸಿರಬೇಕು ಎಂದು ಪೊಲೀಸ್ ಆಯುಕ್ತರು ತಿಳಿಸಿದರು.
ಘಾತಕ ಶಕ್ತಿ ನಿಗ್ರಹ
ಸಮಾಜ ಘಾತಕರಿಂದ ಜನಸಾಮಾನ್ಯರಿಗೆ ತೊಂದರೆ ತಪ್ಪಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಬಾರ್ಗಳಿಗೆ ದಿಢೀರ್ ದಾಳಿ, ತಪಾಸಣೆ ಇನ್ನಷ್ಟು ಕಟ್ಟುನಿಟ್ಟಾಗಿ ಮುಂದುವರಿಯಲಿದೆ ಎಂದರು.
ಇದರಿಂದ ಸಭ್ಯ ಮದ್ಯ ಪಾನಿಗಳ ಹಕ್ಕನ್ನು ಕಸಿದಂತಾಗುವುದಿಲ್ಲವೇ ಎಂಬ ಸುದ್ದಿಗಾರರೊಬ್ಬರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾರದ್ದೇ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಇರಾದೆ ಇಲಾಖೆಯದ್ದಲ್ಲ. ಸಮಾಜ ಘಾತಕ ಶಕ್ತಿಗಳನ್ನು ಮಟ್ಟ ಹಾಕುವ ಉದ್ದೇಶದಿಂದ ಮಾತ್ರವೇ ದಾಳಿ ನಡೆಸಲಾಗುತ್ತಿದೆ ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Mangaluru: ಮುಮ್ತಾಜ್ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.