ಕುಡಿವ ನೀರಿನ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹ


Team Udayavani, Jun 23, 2019, 3:00 AM IST

kudiva

ಗೌರಿಬಿದನೂರು: ಕಳೆದ ಜನವರಿ ತಿಂಗಳಿನಿಂದ ಕುಡಿಯುವ ನೀರು, ದಿನ ಬಳಕೆಯ ನೀರು ಬಿಡುತ್ತಿಲ್ಲ ಎಂದು ಆರೋಪಿಸಿ ಗೌರಿಬಿದನೂರು ನಗರ ವ್ಯಾಪ್ತಿಯ ಸದಾಶಿವ ಮತ್ತು ವಿಘ್ನೇಶ್ವರ ಬಡಾವಣೆಯ ನಿವಾಸಿಗಳು ಶನಿವಾರ ಕೊಳವೆ ಬಾವಿಗಳ ಮುಂದೆ ನಿಂತು ಪ್ರತಿಭಟಿಸಿದರು.

ಇಲ್ಲಿನ ವಾಸಿಗಳಾದ ಸುಮಲತಾ ಮಾತನಾಡಿ, ಕಳೆದ ಆರೇಳು ತಿಂಗಳಿನಿಂದ ಸಮರ್ಪಕವಾಗಿ ನೀರು ಬಿಡುತ್ತಿಲ್ಲ. ನಗರಸಭೆ ಅನೇಕ ಬಾರಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿ ಕನಿಷ್ಟ ಒಂದು ವಾರ ಅಥವಾ 15ದಿನಗಳಿಗೊಮ್ಮೆ ನೀರು ಬಿಡಿ ಎಂದು ಹೇಳಿದ್ದರೂ ತಿಂಗಳಿಗೊಮ್ಮೆಯೂ ಬಿಡಲಿಲ್ಲ. ಈಗಾಗಲೇ 6 ತಿಂಗಳಿನಿಂದ 600 ರಿಂದ 800 ರೂ. ಪಾವತಿಸಿ ಖಾಸಗಿ ಟ್ಯಾಂಕರ್‌ಗಳಿಂದ ನೀರು ಕೊಂಡುಕೊಳ್ಳುತ್ತಿದ್ದೇವೆ ಎಂದರು.

ಇಲ್ಲಸಲ್ಲದ ಸಬೂಬು: ಸದಾಶಿವ ಬಡಾವಣೆಯಲ್ಲಿ 3 ಕೊಳವೆ ಬಾವಿಗಳಿದ್ದು, ಸಮರ್ಪಕವಾಗಿ ನೀರು ಬರುತ್ತಿದೆ. ಆದರೆ ನ‌ಮಗೆ ನೀರು ಬಿಡುತ್ತಿಲ್ಲ. ನಗರಸಭೆ ಸಿಬ್ಬಂದಿಯನ್ನು ಕೇಳಿದರೆ ವಿದ್ಯುತ್‌ ಸಂಪರ್ಕವಿಲ್ಲ, ಪಂಪ್‌ ಅಳವಡಿಸಿಲ್ಲ, ಬೋರ್‌ವೆಲ್‌ ಕೆಟ್ಟಿದೆ. ರಿಪೇರಿ ಆಗಬೇಕಿದೆ ಎಂಬ ಸಬೂಬುಗಳನ್ನು ಹೇಳುತ್ತಿದ್ದಾರೆ. ಬೋರ್‌ವೆಲ್‌ಗ‌ಳಲ್ಲಿ ನೀರು ಬರುತ್ತಿದ್ದರೂ ಸಹ ನೀರು ಬಿಡದೇ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸಚಿವರ ಮಾತಿಗೂ ಬೆಲೆ ಇಲ್ಲ: ನಿವೃತ್ತ ಎಎಸ್‌ಐ ಮಲ್ಲಪ್ಪ ಮಾತನಾಡಿ, ಕಳೆದ ಜನವರಿಯಿಂದ ನಮಗೆ ನೀರು ಬಿಟ್ಟಿಲ್ಲ, ಮೂರು ಬೋರ್‌ವೆಲ್‌ಗ‌ಳಿದ್ದರೂ ಬಿಡುತ್ತಿಲ್ಲ. ಈ ಹಿಂದೆ ರಾಮಲಿಂಗೇಶ್ವರ ದೇವಾಲಯದ ಬಳಿ ಕೃಷಿ ಸಚಿವ ಶಿವಶಂಕರರೆಡ್ಡಿ ಅವರಿಗೆ ಮನವಿ ನೀಡಿದ್ದೆವು.

ಆಯುಕ್ತರಿಗೆ ಕರೆ ಮಾಡಿ ಸೂಕ್ತ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದ್ದರೂ ನೀರಿನ ವ್ಯವಸ್ಥೆ ಮಾಡಲಾಗಿಲ್ಲ. ಈ ಬಡಾವಣೆಗಳು ಹಿಂದೆ ಗ್ರಾಮ ಪಂಚಾಯಿತಿಗೆ ಸೇರ್ಪಡೆಗೊಂಡಿತ್ತು. ಆಗ ಸಮರ್ಪಕವಾಗಿ ನೀರು ಬರುತ್ತಿತ್ತು. ಆದರೆ ನಗರಸಭೆಗೆ ಸೇರಿದ ನಂತರ ತೊಂದರೆಗೆ ಒಳಗಾಗಿದ್ದೇವೆ ಎಂದು ಅಳಲು ತೋಡಿಕೊಂಡರು.

ಹೋರಾಟ ನಿಲ್ಲಲ್ಲ: ಸ್ಥಳೀಯರಾದ ಅನಿತಾ ಮಾತನಾಡಿ, ನಮ್ಮ ಬಡಾವಣೆಯ ಬೋರ್‌ವೆಲ್‌ನಲ್ಲಿ ನೀರು ಬರುತ್ತಿದ್ದರೂ ನಮಗೆ ನೀರು ಬಿಡುತ್ತಿಲ್ಲ. ಅನಿವಾರ್ಯವಾಗಿ ನಾವು ಕೊಳವೆಬಾವಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದೇವೆ. ನಗರಸಭೆ ಸೂಕ್ತ ನೀರಿನ ವ್ಯವಸ್ಥೆ ಮಾಡದಿದ್ದರೆ ಜಿಲ್ಲಾಧಿಕಾರಿಗಳಿಗೆ ಹಾಗೂ ಕೃಷಿ ಸಚಿವರಿಗೆ ಮತ್ತೂಮ್ಮೆ ದೂರು ನೀಡುತ್ತೇವೆ. ನಮ್ಮ ಸಮಸ್ಯೆ ಇತ್ಯರ್ಥ ಆಗುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದು ತಿಳಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.