ಗುರುಪುರ ಸೇತುವೆ ಫೆಬ್ರವರಿಯಲ್ಲಿ ಲೋಕಾರ್ಪಣೆ
ಕಾಮಗಾರಿ ವೀಕ್ಷಿಸಿದ ಸಂಸದ ನಳಿನ್
Team Udayavani, Jun 23, 2019, 11:10 AM IST
ಗುರುಪುರ: ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿ 169ರ ಫಲ್ಗುಣಿ ನದಿಗೆ ಗುರುಪುರದಲ್ಲಿ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಜಿಲ್ಲೆಯಲ್ಲೇ ಅತಿ ಶೀಘ್ರ ಮುಕ್ತಾಯಗೊಳ್ಳಲಿರುವ ಕಾಮಗಾರಿ ಇದೆಂಬ ಹೆಗ್ಗಳಿಕೆ ಪಾತ್ರವಾಗಲಿದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದರು.
ಅವರು ಶನಿವಾರ ಗುರುಪುರದಲ್ಲಿ ಸೇತುವೆ ಕಾಮಗಾರಿಯ ಪ್ರಗತಿ ವೀಕ್ಷಿಸಿ, ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. ಸೇತುವೆ ಕಾಮಗಾರಿ 2019ರ ಫೆಬ್ರವರಿ 21ಕ್ಕೆ ಆರಂಭಗೊಂಡಿದ್ದು, 2021ರ ಫೆಬ್ರವರಿ 20ರಂದು ಪೂರ್ಣಗೊಳಿಸುವ ಕರಾರಿನ ಮೇರೆಗೆ ಕಾವೂರಿನ ಮೊಗರೋಡಿ ಕನ್ಸ್ಟ್ರಕ್ಷನ್ ಕಂಪೆನಿಗೆ ಗುತ್ತಿಗೆ ನೀಡಲಾಗಿತ್ತು. ಟೆಂಡರು ಪಡೆದ ತತ್ಕ್ಷಣ ಕಾಮಗಾರಿ ಆರಂಭಿಸಿರುವ ಕಂಪೆನಿ, ಬೇಸಗೆಯಲ್ಲಿ ಕ್ಷಿಪ್ರಗತಿಯಲ್ಲಿ ಪಿಲ್ಲರ್ ಹಾಕುವ ಕೆಲಸ ಮುಗಿಸಿದೆ. ಮಳೆಗಾಲದಲ್ಲಿ ಗರ್ಡರ್ ಮತ್ತು ಸ್ಲಾಬ್ ಅಳವಡಿಕೆ ನಡೆಯಲಿದೆ. ನಿಗದಿತ ಅವಧಿಯ ಒಳಗಡೆ ಲೋಕಾರ್ಪಣೆಗೊಳ್ಳಲಿದೆ ಎಂದರು.
39.420 ಕೋಟಿ ರೂ. ಅಂದಾಜು ವೆಚ್ಚದ ಹೊಸ ಸೇತುವೆ ಯೋಜನೆಯಲ್ಲಿ 25 ಮೀಟರ್ ಉದ್ದದ ಏಳು ಅಂಕಣಗಳಿವೆ. ಅಗಲ 16 ಮೀ. ಅಗಲದ ಸೇತುವೆಯು 11 ಮೀ. ಅಗಲ ರಸ್ತೆ, 2.50 ಮೀ. ಅಗಲದ ಕಾಲುದಾರಿ (ಎರಡೂ ಕಡೆ) ಇತ್ಯಾದಿ ಹೊಂದಿರುತ್ತದೆ. ಎರಡೂ ಕಡೆ 500 ಮೀ. ಉದ್ದಕೆ ಕೂಡುರಸ್ತೆ ನಿರ್ಮಾಣಗೊಳ್ಳಲಿದೆ ಎಂದರು.
ಮಂಗಳೂರು ಬೈಪಾಸ್ ರಸ್ತೆಗೆ ಸರಕಾರ ಒಪ್ಪಿಗೆ ನೀಡಿದೆ. ಈ ರಸ್ತೆ ಮೂಲ್ಕಿ – ಕಿನ್ನಿಗೋಳಿ-ಕಟೀಲು- ಬಜಪೆ – ಗುರುಪುರ ಕೈಕಂಬ – ಪೊಳಲಿ – ಬಿ.ಸಿ.ರೋಡ್- ಮೆಲ್ಕಾರು – ಮುಡಿಪು-ಕೊಣಾಜೆ ಮೂಲಕ ತಲಪಾಡಿ ಸಂಪರ್ಕಿಸಲಿದೆ. “ಭಾರತ್ ಮಾಲ’ ಯೋಜನೆಯಡಿ ಬೆ„ಪಾಸ್ ನಿರ್ಮಾಣಗೊಳ್ಳಲಿದೆ. ಪ್ರಸ್ತುತ ಗುರುಪುರ ಸೇತುವೆ ಗುರುಪುರಕ್ಕೆ ಬೈಪಾಸ್ ರಸ್ತೆಯಾಗಲಿದ್ದು, ಮಂಗಳೂರು ಕುಲಶೇಖರ ರಾಷ್ಟ್ರೀಯ ಹೆದ್ದಾರಿ ಅಡೂxರು ಮುಖಾಂತರ ಸಂಪರ್ಕ ಕಲ್ಪಿಸಲಿದೆ. ಅಡೂxರಿನಲ್ಲಿ ಫ್ಲೈ ಓವರ್ ನಿರ್ಮಾಣಗೊಳ್ಳಲಿದ್ದು, ಪ್ರಮುಖ ಜಂಕ್ಷನ್ ಆಗಲಿದೆ ಎಂದರು.
ಮಂಗಳೂರು ಉತ್ತರ ಶಾಸಕ ಡಾ| ಭರತ್ ಶೆಟ್ಟಿ ಮಾತನಾಡಿ, ಮೂಲರಪಟ್ಣ ರಸ್ತೆ ಪಿಡಬ್ಲ್ಯುಡಿಗೆ ಸೇರಿದ್ದು, ಇಲ್ಲಿ ಸೇತುವೆ ನಿರ್ಮಾಣ ಕ್ಕಾಗಿ ರಾಜ್ಯ ಸರಕಾರದ ಮೇಲೆ ನಾನು ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಉಳಿಪಾಡಿಗುತ್ತು ನಿರಂತರ ಒತ್ತಡ ಹೇರುತ್ತಿದ್ದೇವೆ. ಮಳೆಗಾಲದ ಒಳಗಡೆ ಟೆಂಡರ್ ಪ್ರಸ್ತಾವನೆ ಪೂರ್ಣ ಗೊಂಡು ಹೊಸ ಸೇತುವೆ ಮುಂದಿನ ವರ್ಷ ಆರಂಭಗೊಳ್ಳಲಿದೆ ಎಂದರು.
ರಾ.ಹೆ. ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಚ್.ಪಿ. ರಮೇಶ್, ಸಹಾಯಕ ಎಂಜಿನಿಯರ್ ಕೀರ್ತಿ ಅಮೀನ್, ವಿಹಿಂಪ ಮುಖಂಡ ಜಗದೀಶ ಶೇಣವ, ಮೊಗರೋಡಿ ಕನ್ಸ್ಟ್ರಕ್ಷನ್ ಕಂಪೆನಿಯ ಮುಖ್ಯ ಎಂಜಿನಿಯರ್ ಸುಬ್ರಹ್ಮಣ್ಯ, ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
3 ಹಂತಗಳಲ್ಲಿ ರಸ್ತೆ ನಿರ್ಮಾಣ
ಕೇಂದ್ರ ಸರಕಾರವು ಫೇಸ್ ಒಂದು, ಫೇಸ್ ಎರಡು ಹಾಗೂ ಫೇಸ್ ಮೂರು ಹೀಗೆ ಮೂರು ಹಂತಗಳಲ್ಲಿ ರಸ್ತೆಗಳ ಅಭಿವೃದ್ಧಿ ನಡೆಸುತ್ತಿದ್ದು, ಜಿಲ್ಲೆಯ ಹಲವು ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ.
ನಳಿನ್ ಕುಮಾರ್ ಕಟೀಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ
Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ
PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್ ಚೌಟ
Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.