ಬೆಳೆ ವಿಮೆ ಯೋಜನೆ ಅನುಷ್ಠಾನಕ್ಕೆ ಸರ್ವ ಸಹಕಾರ

ಸಹಕಾರಿ ಸಂಘಗಳ ಸಭೆಯಲ್ಲಿ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌

Team Udayavani, Jun 23, 2019, 11:17 AM IST

rajendra

ಮಂಗಳೂರು: ಬೆಳೆ ವಿಮೆ ಯೋಜನೆಗಳನ್ನು ಕೃಷಿಕರ ಅನುಕೂಲ ಕ್ಕಾಗಿಯೇ ಸರಕಾರ ಜಾರಿಗೊಳಿಸಿದ್ದು, ಕೃಷಿಕರು ಅಧಿಕ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಂಡು ಪ್ರಯೋಜನ ಪಡೆದುಕೊಳ್ಳಬೇಕು; ಬೆಳೆ ವಿಮೆ ಯೋಜನೆಗಳ ಅನುಷ್ಠಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಸರ್ವ ಪ್ರಯತ್ನ ಮತ್ತು ಸಹಕಾರವನ್ನು ನೀಡ ಲಿದೆ ಎಂದು ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಹೇಳಿದರು.

ಪ್ರಧಾನ ಮಂತ್ರಿ ಫಸಲ್‌ ವಿಮಾ ಯೋಜನೆ ಮತ್ತು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ಅನುಷ್ಠಾನ ಕುರಿತಂತೆ ಎಸ್‌ಸಿಡಿಸಿಸಿ ಬ್ಯಾಂಕಿನ ಆಶ್ರಯದಲ್ಲಿ ಶನಿವಾರ ಕೊಡಿಯಾಲಬೈಲಿನಲ್ಲಿರುವ ಬ್ಯಾಂಕಿನ ಸಭಾಂಗಣದಲ್ಲಿ ನಡೆದ ಅವಿಭಜಿತ ದ.ಕ. ಜಿಲ್ಲೆಯ ಕೃಷಿ ಪತ್ತಿನ ಸಹಕಾರಿ ಸಂಘಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೈತರು ಜೂ. 30ರ ಒಳಗೆ ಬ್ಯಾಂಕ್‌ ಅಥವಾ ಸಹಕಾರಿ ಸಂಘಗಳ ಮೂಲಕ ನೋಂದಣಿ ಮಾಡಿಸಬೇಕು. ಹೆಚ್ಚು ರೈತ ಸದಸ್ಯರನ್ನು ನೋಂದಾಯಿಸುವ ಸಹಕಾರಿ ಸಂಘಕ್ಕೆ ಬಹುಮಾನ ನೀಡ ಲಾಗುವುದು. ಜಿಲ್ಲೆಯಲ್ಲಿ ಸಹಕಾರಿ ಸಂಸ್ಥೆಗಳ ಮೂಲಕ ಸಾಲ ಪಡೆದ ಸುಮಾರು 80,000 ರೈತರಿದ್ದಾರೆ. ಎಲ್ಲರೂ
ವಿಮೆ ಮಾಡಿಸಬೇಕು ಎಂದರು.

ರುಪೇ ಕಾರ್ಡ್‌ ಬಳಸಿ
ರೈತರಿಗೆ ರುಪೇ ಕಾರ್ಡನ್ನು ದೇಶ ದಲ್ಲಿಯೇ ಮೊದಲ ಬಾರಿಗೆ ಎಸ್‌ಸಿಡಿಸಿಸಿ ಬ್ಯಾಂಕ್‌ ಪರಿಚಯಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ರೈತರು ಇದನ್ನು ಪಡೆದು ಅದರ ಮೂಲಕ ವ್ಯವಹಾರ ನಡೆಸಬೇಕು ಎಂದು ಸಲಹೆ ನೀಡಿದರು.

ಚಿನ್ನಾಭರಣಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಬಗ್ಗೆ ಎಸ್‌ಸಿಡಿಸಿಸಿ ಬ್ಯಾಂಕಿಗೆ ಸರಕಾರದ ಅನುಮತಿ ಲಭಿಸಿದೆ ಎಂದು ಮಾಹಿತಿ ನೀಡಿದರು. ದ.ಕ. ಜಿಲ್ಲೆಯಲ್ಲಿ ಬೆಳೆ ಸಾಲವನ್ನು ಅತ್ಯಧಿಕ ಮಂದಿ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಪಡೆದಿದ್ದಾರೆ. ಆದರೆ ಜಿಲ್ಲಾ ಮಟ್ಟದ ಬ್ಯಾಂಕಿಂಗ್‌ ಸಭೆಗೆ ಎಸ್‌ಸಿಡಿಸಿಸಿ ಬ್ಯಾಂಕಿನ ಪ್ರತಿನಿಧಿಗಳಿಗೆ ಆಹ್ವಾನ ನೀಡಲಾಗುತ್ತಿಲ್ಲ ಎಂದು ಡಾ| ರಾಜೇಂದ್ರ ಕುಮಾರ್‌ ಬೇಸರಿಸಿದರು.

ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಎಚ್‌.ಆರ್‌. ನಾಯಕ್‌, ಸ. ನಿರ್ದೇಶಕ ಪ್ರವೀಣ್‌, ಕೃಷಿ ಇಲಾಖೆಯ ಸ. ನಿರ್ದೇಶಕರಾದ ವೀಣಾ ಹಾಗೂ ಉಡುಪಿ ಜಿಲ್ಲೆಯ ಸಹಕಾರಿ ಸಂಘಗಳ ಉಪ ನಿಬಂಧಕ ಪ್ರವೀಣ್‌ ನಾಯಕ್‌ ಅವರು ಸಭೆಯಲ್ಲಿ ಉಪಸ್ಥಿತರಿದ್ದು, ವಿಮಾ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಬ್ಯಾಂಕಿನ ನಿರ್ದೇಶಕರಾದ ಬಿ. ನಿರಂಜನ್‌, ಭಾಸ್ಕರ್‌ ಎಸ್‌. ಕೋಟ್ಯಾನ್‌,
ಎಂ. ವಾದಿರಾಜ್‌ ಶೆಟ್ಟಿ, ಶಶಿ ಕುಮಾರ್‌ ರೈ ಬಾಲೊಟ್ಟು, ಎಸ್‌.ಬಿ. ಜಯರಾಂ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ರಾಜೇಶ್‌ ರಾವ್‌, ಸದಾಶಿವ ಉಳ್ಳಾಲ ಉಪಸ್ಥಿತರಿದ್ದರು. ಬ್ಯಾಂಕಿನ ಸಿಇಒ ಬಿ. ರವೀಂದ್ರ ಸ್ವಾಗತಿಸಿದರು. ಜನರಲ್‌ ಮ್ಯಾನೇಜರ್‌ ಗೋಪಿನಾಥ್‌ ಭಟ್‌ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಪೋಕ್ಸೋ ಪ್ರಕರಣ: “ಬಿ’ ವರದಿ ತಿರಸ್ಕರಿಸಿ ಪ್ರಕರಣಕ್ಕೆ ಮರುಜೀವ ನೀಡಿದ ನ್ಯಾಯಾಲಯ

14

Siddapura: ಪತ್ನಿಯ ಮೇಲೆ ಪತಿ ಹಲ್ಲೆ; ಕೊಲೆ ಬೆದರಿಕೆ

12

Udupi: ಕೆಲಸಕ್ಕೆ ಸೇರಿದ ವ್ಯಕ್ತಿಯಿಂದ ಚಿನ್ನ ಕಳವು

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.