ಮಾರ್ಗೋನಹಳ್ಳಿ ಸರ್ಕಾರಿ ಶಾಲೆಗೆ ಬೇಕಿದೆ ಕಾಯಕಲ್ಪ

ಶಾಲಾ ಆವರಣವೇ ದನದ ಕೊಟ್ಟಿಗೆ, ವಾಹನ ನಿಲ್ದಾಣ • ಕುಸಿಯುವ ಹಂತದಲ್ಲಿ ಶಾಲಾ ಕಟ್ಟಡ

Team Udayavani, Jun 24, 2019, 11:47 AM IST

mandya-tdy-3..

ಕೆ.ಆರ್‌.ಪೇಟೆ ತಾಲೂಕಿನ ಮಾರ್ಗೋನಹಳ್ಳಿ ಗ್ರಾಮದ ಶಾಲಾ ಆವರಣದಲ್ಲಿ ದನಗಳನ್ನು ಕಟ್ಟಿ ಹಾಕಿರುವುದು.

ಕೆ.ಆರ್‌.ಪೇಟೆ: ಮುಖ್ಯಮಂತ್ರಿಗಳು ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯಮಾಡುವ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಯೋಜನೆ ರೂಪಿಸುತ್ತಿದ್ದೇನೆ ಎಂದು ಹೇಳುತ್ತಿದ್ದಾರೆ. ಆದರೆ ಅವರ ಗಮನಕ್ಕೆ ಅಧಿಕಾರಿಗಳು, ಶಾಸಕರು ಸರ್ಕಾರಿ ಶಾಲೆಗಳಲ್ಲಿ ಕನಿಷ್ಠ ಮೂಲ ಸೌಲಭ್ಯಗಳಲ್ಲದೆ ಇರುವ ಬಗ್ಗೆ ಮಾಹಿತಿ ನೀಡಿ ಗ್ರಾಮೀಣ ಭಾಗದ ಶಾಲೆಗಳ ಅಭಿವೃದ್ಧಿಗೆ ಕೈಜೊಡಿಸಬೇಕಿದೆ.

ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ ಎಂಬುದು ಒಂದು ಆರೋಪವಾದರೆ, ಬಹುತೇಕ ಸರ್ಕಾರಿ ಶಾಲಾ ಕಟ್ಟಡಗಳು ಯಾವಾಗಬೇಕಾದರೂ ಕುಸಿದು ಬೀಳುವ ಆತಂಕದಲ್ಲಿದೆ. ಇದಕ್ಕೆ ಉದಾರಹಣೆ ಎಂಬಂತೆ ತಾಲೂಕಿನ ಮಾರ್ಗೋನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಶಾಲಾ ಕಟ್ಟಡ ಕುಸಿದು ಬಿದ್ದಿದ್ದು, ದಶಕಗಳೆ ಕಳೆದಿದೆ. ಶಾಲಾ ಆವರಣವನ್ನು ದನದ ಕೊಟ್ಟಿಗೆ, ವಾಹನಗಳನ್ನು ನಿಲ್ಲಿಸುವ ನಿಲ್ದಾಣವಾಗಿ ಬಳಕೆಯಾಗುತ್ತಿದ್ದು ಇಂತಹ ಪರಿಸ್ಥಿತಿಯಲ್ಲಿ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಓದಲು ಸಾಧ್ಯವಿಲ್ಲಾ ಎಂಬ ಸ್ಥಿತಿ ನಿರ್ಮಾಣವಾಗಿದೆ.

ಪಾಠ ಮಾಡಲು ಸಮಯ ಕೊಡಿ? : ಸರ್ಕಾರ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಶಾಲೆಯನ್ನು ತೆರೆದಿದೆ ಇಲ್ಲಿ ಈಗ ಮುಖ್ಯವಾಗಿ ಮಕ್ಕಳ ಕೊರತೆ ಕಂಡುಬರುತ್ತಿದೆ. ಇದಕ್ಕೆ ಪ್ರಮುಖ ಕಾರಣ ಗ್ರಾಮೀಣ ಭಾಗದ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಮೂಲಭೂತ ಸೌಲಭ್ಯಗಳು ಸಿಗದಿರುವುದು. ಒಂದರಿಂದ ಐದನೆ ತರಗತಿ ಇರುವ ಶಾಲೆಯಲ್ಲಿ 12 ರಿಂದ 30 ಮಕ್ಕಳು ಇರುವುದನ್ನು ನಾವು ತಾಲೂಕಿನಲ್ಲಿ ಕಾಣಬಹುದಾಗಿದೆ. ಇಲ್ಲಿಗೆ ಸರ್ಕಾರ ಇಬ್ಬರು ಶಿಕ್ಷಕರನ್ನು ನೇಮಕ ಮಾಡುತ್ತಾರೆ. ಇದರಲ್ಲಿ ಒಬ್ಬರು ಮಕ್ಕಳಿಗೆ ಬಿಸಿಯೂಟದ ಸಿದ್ಧತೆ ಹಾಗೂ ಪ್ರತಿದಿನ ದಾಖಲು ಮಾಡಬೇಕಾಗಿರುವ ಸುಮಾರು 17 ವಿಷಯಗಳನ್ನು ಕಡತಗಳಿಗೆ ನಮೂದಿಸುವುದರಲ್ಲಿ ಸಮಯ ಮುಗಿದು ಹೋಗುತ್ತದೆ. ಇನ್ನುಳಿದ ಒಬ್ಬ ಶಿಕ್ಷಕರು ಐದು ತರಗತಿ ಮಕ್ಕಳಿಗೆ ಎಷ್ಟು ಪಾಠ ಮಾಡಲು ಸಾಧ್ಯ ಎಂಬುದನ್ನು ಬಿಡಿಸಿ ಹೇಳುವ ಅವಶ್ಯಕತೆಯಿಲ್ಲ.

ಮುರಿದು ಬಿದ್ದಿರುವ ಶಾಲಾ ಕಟ್ಟಡ ತಾಲೂಕಿನ ಮಾರ್ಗೋನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯ ಕಟ್ಟಡ ಅರ್ಧಭಾಗಕ್ಕೆ ಕುಸಿದು ಬಿದ್ದು ದಶಕಗಳೆ ಕಳೆದಿದ್ದರೂ ಅದನ್ನು ಸರಿಪಡಿಸುವ ಬದಲು ಬದಲಿ ಕೊಠಡಿ ವ್ಯವಸ್ಥೆ ಮಾಡಿಕೊಂಡು ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ. ಶಾಲೆ ಕಾಂಪೌಂಡ್‌ ಗೋಡೆ ಕುಸಿದು ಬಿದ್ದು ಕೇವಲ ನಾಮಫ‌ಲಕ ಮಾತ್ರ ಉಳಿದುಕೊಂಡಿದೆ. ಶಾಲಾ ಕಟ್ಟಡ ಅರ್ಧ ಭಾಗ ಕುಸಿದು ಬಿದ್ದಿದೆ. ಇದನ್ನು ಗ್ರಾಮಕ್ಕೆ ಮೊದಲ ಸಾರಿ ಭೇಟಿ ನೀಡುವವರು ಗಮನಿಸಿದರೆ ಯಾವುದೋ ಸ್ಮಾರಕದಂತೆ ಭಾಸವಾಗುತ್ತದೆ. ಆದರೆ ವಾಸ್ತವವಾಗಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಚುನಾಯಿತ ಜನ ಪತ್ರತಿನಿಧಿಗಳ ನಿರ್ಲಕ್ಷ್ಯದಿಂದ ಶಾಲಾ ಕಟ್ಟಡ ದುರಸ್ತಿಯಾಗಿಲ್ಲ ಎಂಬುದು ಗ್ರಾಮಸ್ಥರ ಆರೋಪವಾಗಿದೆ.

ಕಟ್ಟಡ ಕುಸಿದರೆ ಶಾಲಾ ವಿದ್ಯಾರ್ಥಿಗಳಿಗೆ ತೊಂದರೆ:

ನಮ್ಮ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯಲ್ಲಿ 1 ರಿಂದ 7 ನೇ ತರಗತಿವರೆಗೆ ಮಕ್ಕಳಿಗೆ ಪಾಠ ಹೇಳಿಕೊಡಲಾಗುತ್ತಿದೆ. ಆದರೆ ನಮ್ಮ ಶಾಲಾ ಕಟ್ಟಡ ಕುಸಿದು ಬಿದ್ದು ದಶಕಗಳೆ ಕಳೆದಿದ್ದರೂ ಅವುಗಳನ್ನು ಮರು ನಿರ್ಮಾಣ ಮಾಡುವ ಮನಸ್ಸು ಅಧಿಕಾರಿಗಳಿಂದ ಬಂದಿಲ್ಲ. ಈಗ ಇರುವ ಕೇವಲ 3 ಕೊಠಡಿಗಳಲ್ಲಿ ಏಳು ತರಗತಿಗಳನ್ನು ನಡೆಸಬೇಕು. ಇದರಿಂದ ಯಾವುದೇ ಮಗುವಿಗೆ ಗುಣಮಟ್ಟದ ಶಿಕ್ಷಣ ಸಿಗುವುದು ಕಷ್ಠಸಾಧ್ಯ. ಎಲ್ಲಕ್ಕಿಂತ ಮುಖ್ಯವಾಗಿ ಕುಸಿದು ಬಿದ್ದಿರುವ ಶಾಲಾ ಕಟ್ಟಡವನ್ನು ನೆಲಸಮ ಮಾಡಬೇಕು. ಒಂದು ವೇಳೆ ಶಾಲೆಯ ಬಳಿಗೆ ತೆರಳುವ ಯಾವುದಾದರೂ ಮಗುವಿನ ತಲೆಯ ಮೇಲೆ ಏನಾದರು ಕಟ್ಟಡ ಕುಸಿದು ಬಿದ್ದರೆ ಸಮಸ್ಯೆಯಾಗುತ್ತದೆ. ಈ ಬಗ್ಗೆ ನಾವುಗಳು ಶಿಕ್ಷಣ ಇಲಾಖೆಗೆ ಪತ್ರಬರೆದಿದ್ದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಮಾರ್ಗೋನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಮಹೇಶ್‌ ಬೇಸರ ವ್ಯಕ್ತಪಡಿಸಿದರು.
•ಎಚ್.ಬಿ.ಮಂಜುನಾಥ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.