ಬಾಕಿ ಕೊಡದ ಕಾರ್ಖಾನೆಯ ಸಕ್ಕರೆ ಜಪ್ತಿ: ರಾಮಚಂದ್ರನ್‌

•30ರೊಳಗೆ ಬಾಕಿ ಕೊಡಿ, ಇಲ್ಲದಿದ್ರೆ ಜು.1ಕ್ಕೆ ಸಕ್ಕರೆ ಜಪ್ತಿಗೆ ಕ್ರಮ •ಜಿಲ್ಲಾಧಿಕಾರಿ ಖಡಕ್‌ ಸೂಚನೆ

Team Udayavani, Jun 25, 2019, 7:51 AM IST

bk-tdy-1..

ಬಾಗಲಕೋಟೆ: ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯಲ್ಲಿ ಡಿಸಿ ರಾಮಚಂದ್ರನ್‌ ಮಾತನಾಡಿದರು.

ಬಾಗಲಕೋಟೆ: ಜಿಲ್ಲೆಯ ವಿವಿಧ ಸಕ್ಕರೆ ಕಾರ್ಖಾನೆಗಳು ರೈತರಿಗೆ ನೀಡಬೇಕಾದ ಕಬ್ಬಿನ ಬಾಕಿ ಪಾವತಿಸಲು ಜೂ.30 ಗಡುವು ನೀಡಲಾಗಿದ್ದು, ಪಾವತಿಸದಿದ್ದಲ್ಲಿ ಜು.1ರಂದು ಸಕ್ಕರೆ ಜಪ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಹೇಳಿದರು.

ನವನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಕ್ಕರೆ ಕಾರ್ಖಾನೆ ಮಾಲಿಕರ ಸಭೆಯಲ್ಲಿ ಅವರು ಮಾತನಾಡಿದರು. 2018-19ನೇ ಹಂಗಾಮಿನ ಒಟ್ಟು 15849.18 ಲಕ್ಷ ಬಾಕಿ ಉಳಿದಿದ್ದು, ಈ ಕುರಿತು ಈಗಾಗಲೇ ಜೂ.17ರಂದು ಸಕ್ಕರೆ ಆಯುಕ್ತರ ಆದೇಶದಂತೆ ಕಬ್ಬು ಬಾಕಿ ವಸೂಲಾತಿಗೆ ನೋಟಿಸ್‌ ನೀಡಲಾಗಿದೆ. ಜೂ.30ರಂದು ಸಂಜೆ 6ಗಂಟೆಯೊಳಗಾಗಿ ಬಾಕಿ ಹಣ ಸಂಪೂರ್ಣ ಪಾವತಿಸಲಿದ್ದಲ್ಲಿ ಜು.1ರಂದು ಸಕ್ಕರೆ ಜಪ್ತಿಗೆ ಕ್ರಮ ಜರುಗಿಸಲಾಗುವುದು ತಿಳಿಸಿದರು.

ನಿರಾಣಿ ಸುಗರ್, ರನ್ನ ಶುಗರ್ ಹಾಗೂ ಸಾಯಿಪ್ರಿಯಾ ಶುಗರ್ ನವರು ಜೂ.30ರೊಳಗೆ ಪಾವತಿಸುವುದಾಗಿ ತಿಳಿಸಿದರೆ, ಉಳಿದ ಸಕ್ಕರೆ ಕಾರ್ಖಾನೆ ಮಾಲಿಕರು ಉತ್ಪಾದನೆ ಸಹಾಯಧನ ಮತ್ತು ರಸ್ತೆ ಸಾರಿಗೆ ವಿನಾಯಿತಿ ಕೋರಿ ಕೇಂದ್ರ ಸರಕಾರಕ್ಕೆ ಅರ್ಜಿ ಸಲ್ಲಿಸಲಾಗಿದ್ದು, ವಿನಾಯಿತಿ ಹಣ ಬಂದ ಮೇಲೆ ಪಾವತಿಸಲು ಕಾಲಾವಧಿ ಕೇಳಿ ಮನವಿ ನೀಡುವುದಾಗಿ ತಿಳಿಸಿದರು. ಈಗಾಗಲೇ ಈ ಹಿಂದೆ ಕಾಲಾವಕಾಶ ನೀಡಲಾಗಿದೆ. ಕಾಲಾವಕಾಶ ನೀಡುವ ಪ್ರಶ್ನೆಯೇ ಇಲ್ಲ. ಮೊದಲು ಕೊಡಬೇಕಾದ ರೈತರ ಕಬ್ಬು ಬಾಕಿ ಪಾವತಿಸಿ ನಂತರ ನಿಮ್ಮ ಸಮಸ್ಯೆಗಳ ಬಗ್ಗೆ ಮಾತನಾಡಿ ಎಂದು ಸೂಚಿಸಿದರು.

2018-19ನೇ ಸಾಲಿಗೆ ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಯವರು ಒಟ್ಟು 98,84,052.873 (ಎಚ್ಎನ್‌ಟಿ ಒಳಗೊಂಡು) ಕಬ್ಬು ನುರಿಸಿದ್ದು, ಎಫ್‌ಆರ್‌ಪಿ ಅನ್ವಯ 2,89,863.81 ಲಕ್ಷ ರೂ. ಮೊತ್ತ ಪಾವತಿಸಬೇಕಾಗಿದೆ. ಈ ಪೈಕಿ 2,74,014.62 ಲಕ್ಷ ರೂ. ಮೊತ್ತ ಪಾವತಿಸಿದ್ದು, 15,849.18 ಲಕ್ಷ ರೂ.ಮೊತ್ತ ಪಾವತಿಸಲು ಬಾಕಿ ಇರುತ್ತದೆ. ನಾಯನೇಗಲಿಯ ಇಐಡಿ ಪ್ಯಾರಿ (ಇಂಡಿಯಾ ಲಿ) ಶುಗರ್ ನವರು 2018-19ನೇ ಸಾಲಿನ ಬಾಕಿ ಹಣ ಸಂಪೂರ್ಣವಾಗಿ ಪಾವತಿಸಿದ್ದು, ಈ ಕಾರ್ಖಾನೆಯವರನ್ನು ಅಭಿನಂದಿಸುವುದಾಗಿ ತಿಳಿಸಿದರು.

2017-18ನೇ ಸಾಲಿಗೆ ಹೆಚ್ಚುವರಿಯಾಗಿ ಘೋಷಿಸಿರುವ ದರ ಪಾವತಿ ಕುರಿತು ಇಐಡಿ ಪ್ಯಾರಿ ಶುಗರ್ ಹೊರತುಪಡಿಸಿ ಉಳಿದ ಎಲ್ಲ ಕಾರ್ಖಾನೆಯವರು ಪಾವತಿಸಲು ಬಾಕಿ ಉಳಿದಿದೆ. 2016-17ನೇ ಹಂಗಾಮಿಗೆ ಕಾರ್ಖಾನೆಯವರು ಘೋಷಿಸಿರುವ ಹೆಚ್ಚುವರಿ ದರ ಪಾವತಿ ಬಾಕಿ ಉಳಿಸಿಕೊಂಡಿರುವ ನಿರಾಣಿ ಶುಗರ್ನವರು 682.66 ಲಕ್ಷ ರೂ. ಹಾಗೂ ರನ್ನ ಶುಗರ್ 288.89 ಲಕ್ಷ ರೂ. ಹಾಗೂ ಇಐಡಿ ಪ್ಯಾರಿ ಇಂಡಿಯಾ 1387.84 ಲಕ್ಷ ಬಾಕಿ ಉಳಿದಿದ್ದು, ತುರ್ತಾಗಿ ಪಾವತಿಸಲು ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಭಿನವ ಖರೆ, ಬಾಗಲಕೋಟೆ ಉಪ ವಿಭಾಗಾಧಿಕಾರಿ ಎಚ್.ಜಯಾ, ಜಮಖಂಡಿ ಉಪ ವಿಭಾಗಾಧಿಕಾರಿ ಮೊಹಮ್ಮದ ಇಕ್ರಮ, ಆಹಾರ ಇಲಾಖೆಯ ಉಪ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಇದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.