ಐತಿಹಾಸಿಕ ಕಂದವಾರ ಕೆರೆಯಲ್ಲೂ ಮರಳುಗೆ ಕನ್ನ


Team Udayavani, Jun 26, 2019, 3:00 AM IST

aitihasika

ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರಕ್ಕೆ ಹೊಂದಿಕೊಂಡಿರುವ ಐತಿಹಾಸಿಕ ಕಂದವಾರ ಕೆರೆಯಲ್ಲಿ ಹಲವು ದಿನಗಳಿಂದ ಅಕ್ರಮ ಮರಳು ದಂಧೆ ಶುರುವಾಗಿದ್ದರೂ ಸ್ಥಳೀಯ ನಗರಸಭೆ ಅಧಿಕಾರಿಗಳಾಗಲೀ ಅಥವಾ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಾಗಲೀ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಹೇಳ್ಳೋರು ಕೇಳ್ಳೋರು ಇಲ್ಲ: ಗ್ರಾಮೀಣ ಪ್ರದೇಶದಲ್ಲಿ ಇತ್ತೀಚೆಗೆ ಅಕ್ರಮ ಮರಳು ದಂಧೆ ಜೋರಾಗಿದ್ದು ಅದರಲ್ಲೂ ಮಳೆಗಾಲ ಶುರುವಾದ ನಂತರ ಮರಳು ಸಾಗಾಟ ಎಗ್ಗಿಲ್ಲದೇ ನಡೆಯುತ್ತಿದೆ. ಜಿಲ್ಲಾ ಕೇಂದ್ರಕ್ಕೆ ಕೂಗಳತೆಯ ದೂರದಲ್ಲಿರುವ ಕಂದವಾರ ಕೆರೆಯಲ್ಲಿ ಟ್ರ್ಯಾಕ್ಟರ್‌ ಹಾಗೂ ಎತ್ತಿನ ಬಂಡಿಗಳಲ್ಲಿ ಅಕ್ರಮವಾಗಿ ಮರಳು ಸಾಗಾಟ ಅವ್ಯಾಹತವಾಗಿ ನಡೆಯುತ್ತಿದ್ದರೂ ಹೇಳ್ಳೋರು ಕೇಳ್ಳೋರು ಇಲ್ಲವಾಗಿದೆ.

ಎತ್ತಿನಬಂಡಿ, ಟ್ರ್ಯಾಕ್ಟರ್‌ಗಳಲ್ಲಿ ಸಾಗಾಟ: ಇತ್ತೀಚೆಗೆ ಬಿದ್ದ ಮಳೆಯಿಂದ ಕಂದವಾರ ಕೆರೆಗೆ ನೀರು ಹರಿದು ಬಂದಿದ್ದು, ಕೆರೆಯ ಕಾಲುವೆಗಳಲ್ಲಿ ಸಂಗ್ರಹವಾಗಿರುವ ಮರಳು ಜೊತೆಗೆ ಕೆರೆಯ ಮಧ್ಯ ಭಾಗಕ್ಕೆ ಎತ್ತಿನ ಬಂಡಿಗಳಲ್ಲಿ ತೆರಳಿ ರಾಜಾರೋಷವಾಗಿ ಮರಳು ತುಂಬಿಸಿಕೊಂಡು ಬಂದು ನಗರ ಪ್ರದೇಶದಲ್ಲಿ ಮಾರಾಟಕ್ಕೆ ಮುಂದಾಗಿದ್ದಾರೆ. ಎತ್ತಿನಬಂಡಿಗಳಲ್ಲಿ ತರುವ ಮರಳನ್ನು ಟ್ರ್ಯಾಕ್ಟರ್‌ಗಳಲ್ಲಿ ತುಂಬಿಸಿಕೊಂಡು ಸಾವಿರಾರು ರೂ.ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಮರಳು ದಂಧೆಗೆ ಕುಮ್ಮಕ್ಕು: ಈಗಾಗಲೇ ರಾಜ್ಯ ಸರ್ಕಾರ ರೂಪಿಸಿರುವ ಹೆಬ್ಟಾಳ, ನಾಗವಾರ ತ್ಯಾಜ್ಯ ನೀರನ್ನು ಸಂಸ್ಕರಣಾ ಘಟಕದಿಂದ ಬಾಗಲೂರು ಕೆರೆಯಿಂದ ಕಂದವಾರ ಕೆರೆಗೆ ಹರಿಸಲು ಕಾಮಗಾರಿ ಭರದಿಂದ ಸಾಗಿವೆ. ಅಂತರ್ಜಲ ವೃದ್ಧಿಸುವ ದೃಷ್ಟಿಯಿಂದ ಸರ್ಕಾರ ಎಚ್‌.ಎನ್‌. ವ್ಯಾಲಿ ಯೋಜನೆ ರೂಪಿಸಿದೆ.

ಆದರೆ ಮಳೆ ನೀರನ್ನು ಅಂತರ್ಜಲಕ್ಕೆ ಇಂಗಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಮರಳನ್ನು ದಂಧೆಕೋರರು ಈಗ ಕೆರೆಯಿಂದ ಹೊರ ತರುತ್ತಿರುವುದು ಎದ್ದು ಕಾಣುತ್ತಿದ್ದರೂ ಸಂಬಂದಪಟ್ಟ ಇಲಾಖೆಗಳ ಅಧಿಕಾರಿಗಳು ಮಾತ್ರ ಈ ಬಗ್ಗೆ ಯಾವುದೇ ಕ್ರಮಕ್ಕೆ ಮುಂದಾಗದೇ ಪರೋಕ್ಷವಾಗಿ ಮರಳು ದಂಧೆಗೆ ಬೆಂಬಲವಾಗಿ ನಿಂತಿದ್ದಾರೆಂಬ ಆರೋಪ ಕೇಳಿ ಬರುತ್ತಿದೆ.

ಈಗಾಗಲೇ ಕಂದವಾರ ಕೆರೆಯಲ್ಲಿ ಮರಳು ತೆಗೆಯಲು ಸಾಕಷ್ಟು ಗುಂಡಿಗಳನ್ನು ತೋಡಿರುವ ದಂಧೆಕೋರರು ವ್ಯಾಪಕ ಪ್ರಮಾಣದಲ್ಲಿ ಮರಳು ಸಾಗಾಟ ಮಾಡುತ್ತಿದ್ದಾರೆ. ಕಂದವಾರ ಕೆರೆಯ ಮಧ್ಯ ಭಾಗಕ್ಕೆ ಹೋಗಲು ಎತ್ತಿನಬಂಡಿ ಹಾಗೂ ಟ್ರ್ಯಾಕ್ಟರ್‌ ಮಾಲೀಕರು ದೊಡ್ಡ ದಾರಿಯನ್ನೇ ಮಾಡಿಕೊಂಡಿದ್ದಾರೆ.

ಕಡಿವಾಣ ಹಾಕಬೇಕಿದೆ: ಒಟ್ಟಿನಲ್ಲಿ ಮೊದಲೇ ಒತ್ತುವರಿದಾರರಿಂದ ವರ್ಷದಿಂದ ವರ್ಷಕ್ಕೆ ತನ್ನ ಸ್ವರೂಪ ಕಳೆದುಕೊಳ್ಳುತ್ತಿರುವ ಕಂದವಾರ ಕೆರೆಯಲ್ಲಿ ಈಗ ಎಗ್ಗಿಲ್ಲದೇ ಮರಳು ದಂಧೆ ರಾಜಾರೋಷವಾಗಿ ಹಾಡಹಗಲೇ ಹಾಗೂ ರಾತ್ರೋರಾತ್ರಿ ನಡೆಯುತ್ತಿದ್ದರೂ ಯಾರು ಕೋಳ್ಳೋರು ಇಲ್ಲದಂತಾಗಿದೆ. ಜಿಲ್ಲಾಡಳಿತ ಇತ್ತಕಡೆ ಗಮನ ಹರಿಸಿ ಮರಳು ದಂಧೆಕೋರರಿಗೆ ಕಡಿವಾಣ ಹಾಕಬೇಕಿದೆ.

ಬೆಳಗ್ಗೆ ಎತ್ತಿನಬಂಡಿ.. ರಾತ್ರಿ ಟ್ರ್ಯಾಕ್ಟರ್‌ನಲ್ಲಿ ಸಾಗಾಟ: ಕಂದವಾರ ಕೆರೆಗೆ ಅಂಟಿಕೊಂಡಿರುವ ಚಿಕ್ಕಬಳ್ಳಾಪುರದ ಗಂಗನಮಿದ್ದೆ ಪ್ರದೇಶದ ನಿವಾಸಿಗಳು ಹೇಳುವ ಪ್ರಕಾರ ಹಗಲಲ್ಲಿ ಎತ್ತಿನಬಂಡಿಗಳ ಮೂಲಕ ಮರಳು ಸಾಗಾಟ ನಡೆಯುತ್ತದೆ. ರಾತ್ರಿ ವೇಳೆಯಲ್ಲೂ ಟ್ರ್ಯಾಕ್ಟರ್‌ಗಳಲ್ಲಿ ಸಾಗಾಟ ಮಾಡಲಾಗುತ್ತಿದೆ. ಈ ಬಗ್ಗೆ ಯಾರು ಕೇಳ್ಳೋರು ಇಲ್ಲ. ಈ ಬಗ್ಗೆ ಯಾರಿಗೆ ದೂರು ನೀಡಬೇಕೋ ನಮಗೆ ಗೊತ್ತಿಲ್ಲ ಎಂದು ಗಂಗನಮಿದ್ದೆಯ ನಿವಾಸಿ ರಮೇಶ್‌ ಉದಯವಾಣಿಗೆ ತಿಳಿಸಿದರು.

ಕೆರೆ ನಮ್ಮ ವ್ಯಾಪ್ತಿಗೆ ಬರಲ್ಲ ಎಂದ ಆಯುಕ್ತರು: ಚಿಕ್ಕಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿರುವ ಕಂದವಾರ ಕೆರೆಯಲ್ಲಿ ಅಕ್ರಮ ಮರಳು ಸಾಗಾಟದ ಬಗ್ಗೆ ನಗರಸಭೆ ಆಯುಕ್ತ ಉಮಾಕಾಂತ್‌ರನ್ನು ಉದಯವಾಣಿ ಸಂಪರ್ಕಿಸಿದರೆ ಕಂದವಾರ ಕೆರೆ ವ್ಯಾಪ್ತಿ ನಮಗೆ ಬರಲ್ಲ. ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಗೆ ಬರುತ್ತದೆ ಎಂದರು. ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿದರೂ ಯಾರು ಸ್ವೀಕರಿಸಲೇ ಇಲ್ಲ.

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.