ಹಣಕಾಸು ಆಯೋಗದ ಅನುದಾನದಲ್ಲೂ ಹೆಚ್ಚಳ
Team Udayavani, Jun 26, 2019, 3:00 AM IST
ಬೆಂಗಳೂರು: ಗ್ರಾಮ ಪಂಚಾಯಿತಿಗಳ ಸ್ವಂತ ಅನುದಾನದಲ್ಲಿ ವಿಕಲಚೇತನರ ಕಲ್ಯಾಣ ಕಾರ್ಯಕ್ರಮಗಳಿಗೆ ಶೇ.5ರಷ್ಟು ಅನುದಾನ ಮೀಸಲಿಡಬೇಕೆಂದು ಇತ್ತೀಚೆಗಷ್ಟೇ ಹೇಳಿದ್ದ ಸರ್ಕಾರ, ಈಗ ಕೇಂದ್ರ ಹಾಗೂ ರಾಜ್ಯ ಹಣಕಾಸು ಆಯೋಗ ಮತ್ತು ಜಿಲ್ಲಾ, ತಾಲೂಕು ಹಾಗೂ ಗ್ರಾಪಂಗಳಿಗೆ ಬಿಡುಗಡೆಯಾಗುವ ವಿವಿಧ ಯೋಜನೆಗಳ ಅನುದಾನದಲ್ಲೂ ಶೇ.5ರಷ್ಟು ಹಣ ಮೀಸಲಿಡಬೇಕೆಂದು ಹೇಳಿದೆ. ವಿಕಲಚೇತನರ ಅಭಿವೃದ್ಧಿ ಹಾಗೂ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಶೇ.3 ಅನುದಾನ ಮೀಸಲಿಡಲಾಗುತ್ತಿತ್ತು.
ಆದರೆ, 2018-19ನೇ ಸಾಲಿನ ಬಜೆಟ್ನಲ್ಲಿ ಅನುದಾನವನ್ನು ಶೇ.5ಕ್ಕೆ ಹೆಚ್ಚಿಸಲಾಗಿದೆ. ಅದರಂತೆ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ರಾಜ್ ಇಲಾಖೆ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲಿ ಕೇಂದ್ರ ಮತ್ತು ರಾಜ್ಯ ಹಣಕಾಸು ಆಯೋಗದ ಅನುದಾನ ಸೇರಿ ಜಿಲ್ಲಾ, ತಾಲೂಕು ಮತ್ತು ಗ್ರಾಪಂಗಳಿಗೆ ಬಿಡುಗಡೆಯಾಗುವ ಅನುದಾದನಲ್ಲಿ ವಿಕಲಚೇತನ ಅಭಿವೃದ್ಧಿ ಯೋಜನೆಗೆ ಶೇ.5ರಷ್ಟು ಅನುದಾನವನ್ನು ಕಡ್ಡಾಯವಾಗಿ ಮೀಸಲಿಡಬೇಕೆಂದು ಇಲಾಖೆ ಸುತ್ತೋಲೆ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.