ಸಿದ್ದು ಬದಲಿಸದಂತೆ ರಾಹುಲ್ಗೆ ಪತ್ರ
Team Udayavani, Jun 26, 2019, 3:00 AM IST
ಬಾಗಲಕೋಟೆ: ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನ ಹಾಗೂ ಕಾಂಗ್ರೆಸ್ನ ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಬದಲಿಸುವ ಕುರಿತು ಊಹಾಪೋಹ ಕೇಳಿ ಬರುತ್ತಿದ್ದು, ಅವರನ್ನು ಯಾವುದೇ ಕಾರಣಕ್ಕೂ ಬದಲಿಸಬಾರದು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದಾಗಿ ಮಾಜಿ ಶಾಸಕ ಎಸ್.ಜಿ. ನಂಜಯ್ಯನಮಠ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಪಕ್ಷದ ಕೆಳ ಹಂತದ ಸಣ್ಣ ಕಾರ್ಯಕರ್ತರಿಂದ ಹಿಡಿದು, ಸಾಮಾನ್ಯ ವ್ಯಕ್ತಿಗಳಿಗೂ ಪರಿಚಯವಿರುವ ನಾಯಕ. ಐದು ವರ್ಷ ಸಿಎಂ ಆಗಿದ್ದಾಗ ಹಲವಾರು ಜನಪರ ಯೋಜನೆ ಕೊಟ್ಟಿದ್ದಾರೆ. ಸಮ್ಮಿಶ್ರ ಸರ್ಕಾರ ಅತ್ಯುತ್ತಮವಾಗಿ ನಡೆಯಲು ಅವರ ಮಾರ್ಗದರ್ಶನ ಅಗತ್ಯ. ಹೀಗಾಗಿ ಅವರನ್ನು ಬದಲಿಸಬಾರದು ಎಂದು ಪತ್ರದಲ್ಲಿ ಒತ್ತಾಯಿಸಿರುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.