ವಿರೋಧದ ನಡುವೆಯೂ 75 ಮರಗಳಿಗೆ ಕೊಡಲಿ

ಬಲಾಡ್ಯರಿಗೆ ಲಾಭ ಮಾಡಿಕೊಡಲು ಮುಂದಾದ ಅರಣ್ಯ ಇಲಾಖೆ: ಸಾರ್ವಜನಿಕರ ಆಕ್ರೋಶ

Team Udayavani, Jun 26, 2019, 1:19 PM IST

tk-tdy-1..

ಕುಣಿಗಲ್ ತಾಲೂಕಿನ ಪ್ರಥಮ ದರ್ಜೆ ಕಾಲೇಜಿನ ಕಾಂಪೌಡಿನ ಪಕ್ಕದಲ್ಲಿ ಬೆಳೆದು ನಿಂತಿದ್ದ 75ಕ್ಕೂ ಹೆಚ್ಚು ಮರಗಳನ್ನು ಅಭಿವೃದ್ಧಿ ಹೆಸರಿನಲ್ಲಿ ಕತ್ತರಿಸಿರುವುದು.

ಕುಣಿಗಲ್: ಉತ್ತಮ ಪರಿಸರ, ಸ್ವಚ್ಛಗಾಳಿ, ಮಳೆ ಹಾಗೂ ಜೀವ ಸಂಕುಲಗಳ ಸಂರಕ್ಷಣೆಗಾಗಿ ಸಸಿಗಳನ್ನು ನೆಡಬೇಕೆಂದು ಸರ್ಕಾರ ಕೋಟ್ಯಂತರ ರೂ. ಖರ್ಚು ಮಾಡಿ ಪ್ರಚಾರ ಕೈಗೊಂಡು ಸಸಿಗಳನ್ನು ನೆಡುತ್ತಿದ್ದಾರೆ ಮತ್ತೂಂದೆಡೆ, ಬಲಾಡ್ಯ ವ್ಯಕ್ತಿಗಳಿಗೆ ಲಾಭ ಮಾಡಿಕೊಡುವ ದೃಷ್ಟಿಯಿಂದ, ಬೆಳೆದು ನಿಂತಿರುವ ಬೃಹತ್‌ ಮರಗಳ ಮಾರಣ ಹೋಮಕ್ಕೆ ಅರಣ್ಯ ಇಲಾಖೆಯೇ ಕೊಡಲಿ ಹಾಕಿರುವ ಘಟನೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿರುವುದು ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಅನುಮಾನಕ್ಕೆ ಕಾರಣ: ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮೈದಾನದ ಕಾಂಪೌಂಡ್‌ ಪಕ್ಕದಲ್ಲಿ ಸಾಲು ಮರದ ಸರದಾರ ಮಾಜಿ ಸಚಿವ ದಿ.ವೈ.ಕೆ.ರಾಮಯ್ಯ ಹಾಕಿದ್ದ ಬೆಳೆದು ನಿಂತ್ತಿದ್ದ ಬೃಹತ್‌ ಮರಗಳಿಗೆ ಅರಣ್ಯ ಇಲಾಖೆಯೇ ಕೊಡಲಿ ಹಾಕಿ ಮರಗಳ ನಾಶಕ್ಕೆ ಕಾರಣವಾಗಿರುವುದು, ನಾಗರಿಕರ ಅನುಮಾನಕ್ಕೆ ಕಾರಣವಾಗಿದೆ.

ಕ್ರೀಡಾ ಟ್ರ್ಯಾಕ್‌ ನಿರ್ಮಾಣ: ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮೈದಾನದಲ್ಲಿ ಅಭಿವೃದ್ಧಿ ಹಾಗೂ ಕ್ರೀಡಾ ಟ್ರ್ಯಾಕ್‌ ನಿರ್ಮಾಣಕ್ಕೆ 75 ಮರಗಳ ಕತ್ತರಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಅನುಮತಿ ನೀಡಿದ್ದಾರೆ. ಈ ಹಿಂದೆ ಮರ ಕಡಿಯುವ ವೇಳೆ ಸಾರ್ವಜನಿಕರು ಗಲಾಟೆ ಮಾಡಿ ಮರ ಕಡಿಯದಂತೆ ತಡೆಹಿಡಿದಿದ್ದರೂ. ಆದರೆ ಈಗ ಮತ್ತೆ ಅರಣ್ಯ ಇಲಾಖೆಯ ಅನುಮತಿ ಇದೆ ಎಂದು ಹರಾಜು ಕೂಗಿಕೊಂಡಿರುವ ಗುತ್ತಿಗೆದಾರ ಮರಗಳನ್ನು ಕತ್ತರಿಸಿ ತುಂಡರಿಸಿದ್ದಾರೆ.

ಗಿಡ ನೆಟ್ಟಿದ್ದ ಮಾಜಿ ಶಾಸಕ ರಾಮಯ್ಯ: ಪರಿಸರ ಪ್ರೇಮಿ ಸಾಲು ಮರಗಳ ಸರದಾರ ಎಂದೇ ಪ್ರಸಿದ್ಧಿ ಯಾಗಿದ್ದ ದಿ.ವೈ.ಕೆ.ರಾಮಯ್ಯ ಶಾಸಕರಾಗಿದ್ದ ಸಂದರ್ಭದಲ್ಲಿ ತಾಲೂಕಾದ್ಯಂತ ಗಿಡ ನೆಡುವ ಕಾರ್ಯಕ್ರಮ ನಡೆಸಿದ್ದರು. ಈ ವೇಳೆ ಪ್ರಥಮ ದರ್ಜೆ ಕಾಲೇಜಿನ ಮೈದಾನದಲ್ಲಿ ನೂರಾರು ಗಿಡಗಳನ್ನು ನೆಟ್ಟು ಬೆಳೆಸಿದ್ದರು.

ಅಭಿವೃದ್ಧಿಗೆ ಮರಕ್ಕೆ ಕೊಡಲಿ: ಪ್ರಥಮ ದರ್ಜೆ ಕಾಲೇಜಿನ ಇಡೀ ಮೈದಾನ ಹಸಿರಿನಿಂದ ಕಂಗೊಳಿಸು ತ್ತಿತ್ತು. ಯಾವುದೇ ಅಭಿವೃದ್ಧಿಗೂ ತೊಂದರೆಯಾಗದಂತೆ ಮೈದಾನದ ಸುತ್ತಲು ಹಾಗೂ ಒಂದು ಕಡೆ ಮಾತ್ರ ಗಿಡ ನೆಟ್ಟು ಬೆಳೆಸಲಾಗಿತ್ತು. ಆದರೆ ಈಗ ಅಭಿವೃದ್ಧಿ ನೆಪದಲ್ಲಿ ಮೈದಾನದಲ್ಲಿ ಹಸಿರಿನಿಂದ ಕಂಗೊಳಿಸುತ್ತಿದ್ದ ಮರ ಗಳನ್ನು ನೆಲಕ್ಕೆ ಉರುಳಿಸುತ್ತಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹಿಗ್ಗಾಮುಗ್ಗಾ ತರಾಟೆ: ಕಾಂಪೌಂಡ್‌ ಪಕ್ಕದಲ್ಲಿ ಇರುವ ಯಾವುದೇ ಅಭಿವೃದ್ಧಿಗೂ ಅಡ್ಡಿಯಾಗದೆ ಇರುವ ಮರಗಳನ್ನು ಸಹ ಕತ್ತರಿಸುತ್ತಿರುವುದು ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಜೊತೆಗೆ ಅರಣ್ಯ ಇಲಾಖೆಯ ಅಧಿಕಾರಿಗಳ ಮರ ಕತ್ತರಿಸುವ ಧೋರಣೆಯನ್ನು ಖಂಡಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿ ಹಿಗ್ಗಾಮಗ್ಗಾ ತರಾಟೆ ತೆಗೆದುಕೊಂಡಿದ್ದಾರೆ.

ಸಾರ್ವಜನಿಕರ ಆಕ್ರೋಶ: ಹಸಿರೇ ಉಸಿರು, ಮರ ಗಿಡ ಬೆಳಸದಿದ್ದರೇ ಮಾನವನ ಬದುಕು ನರಕ ವಾಗಲಿದೆ. ಕೆಲವೇ ದಿನಗಳ ಹಿಂದೆ ಪರಿಸರ ದಿನಾ ಚರಣೆ ಸಮಾರಂಭದಲ್ಲಿ ಮಾರುದ್ದ ಭಾಷಣ ಮಾಡಿದ್ದ ಅರಣ್ಯ ಇಲಾಖೆಯ ಅಧಿಕಾರಿಗಳು ತಾಲೂಕಿನ ಇಷ್ಟು ಸಾವಿರ ಗಿಡ ನಡುವ ಗುರಿ ಹೊಂದಲಾಗಿದೆ ಎಂದು ಬೊಬ್ಬೆ ಹಾಕಿದರು. ಗಿಡ ನಡೆಲು ಇರುವ ಉತ್ಸಾಹ ಬೆಳೆದು ನಿಂತ್ತಿರುವ ಮರಗಳನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳಿ ಯಾಕೆ ಇಲ್ಲ ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ.

ಅರಣ್ಯ ಇಲಾಖೆ ಎದುರು ಹೋರಾಟ: ಈಗಾಗಲೇ ಪಟ್ಟಣದ ಮುಖ್ಯ ರಸ್ತೆ ಅಭಿವೃದ್ಧಿಗಾಗಿ ನೂರಾರು ಬೃಹತ್‌ ಮರಗಳನ್ನು ಕತ್ತರಿಸಲಾಗಿದೆ. ಇಲ್ಲಿಯೂ ಅವ್ಯಕತೆ ಇಲ್ಲದಿರುವ ಮರಗಳನ್ನು ಹಣದ ಆಸೆಗೆ ನೆಲಕ್ಕೆ ಉರುಳಿಸಲಾಗಿದೆ. ಈಗ ಮತ್ತೆ ಮರ ಕತ್ತರಿಸಲು ಅರಣ್ಯ ಇಲಾಖೆ ಮುಂದಾಗಿ ರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈಗಲೂ ಅರಣ್ಯ ಇಲಾಖೆ ಅಭಿವೃದ್ಧಿ ನೆಪದಲ್ಲಿ ಮರಗಳನ್ನು ಕತ್ತರಿಸುವ ಧೋರಣೆ ಮುಂದುವರಿಸಿದರೇ ಸಾರ್ವಜನಿಕರು ಅರಣ್ಯ ಇಲಾಖೆ ವಿರುದ್ಧ ಉಗ್ರ ಹೋರಾಟ ರೂಪಿಸಬೇಕಾ ಗುತ್ತದೆ ಎಂದು ಸಾರ್ವಜನಿಕರು ಎಚ್ಚರಿಸಿದ್ದಾರೆ.

 

● ಕೆ.ಎನ್‌.ಲೋಕೇಶ್‌

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.