ಟಂಟಂ ಚಾಲಕರಿಗೆ ಕಿರುಕುಳ-ಪ್ರತಿಭಟನೆ
•ಕಿರುಕುಳ ತಪ್ಪಿಸಲು ಕ್ರಮ ಕೈಗೊಳ್ಳಲು ಆಗ್ರಹ•ಪೊಲೀಸರ ವಿರುದ್ಧ ಘೋಷಣೆ ಕೂಗಿದ ಚಾಲಕರು
Team Udayavani, Jun 28, 2019, 9:49 AM IST
ಬಾಗಲಕೋಟೆ: ಪೊಲೀಸರಿಂದ ಕಿರುಕುಳ ತಪ್ಪಿಸುವಂತೆ ಒತ್ತಾಯಿಸಿ ಟಂಟಂ ಚಾಲಕರು ಗುರುವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.
ಬಾಗಲಕೋಟೆ: ನಿತ್ಯ ಟಂಟಂ ಓಡಿಸಿಕೊಂಡು ಉಪಜೀವನ ಸಾಗಿಸುತ್ತಿರುವ ನಮಗೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ನಗರದ ಟಂಟಂ ಚಾಲಕರು ಗುರುವಾರ ಸೇವೆ ಸ್ಥಗಿತಗೊಳಿಸಿ ಬೃಹತ್ ಹೋರಾಟ ನಡೆಸಿದರು.
ಬಾಗಲಕೊಟೆ, ವಿದ್ಯಾಗಿರಿ ಹಾಗೂ ನವನಗರದ ಟಂಟಂ ಚಾಲಕರು ಮೂರು ಕಡೆ ಪ್ರತಿಭಟನೆ ಮೆರವಣಿಗೆ ನಡೆಸಿ, ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು.
ನೂರಾರು ಸಂಖ್ಯೆಯಲ್ಲಿದ್ದ ಟಂಟಂ ಚಾಲಕರು, ಪೊಲೀಸರ ವಿರುದ್ಧ ಘೋಷಣೆ ಕೂಗುತ್ತ, ಬಡವರ ಹೊಟ್ಟೆ ಮೇಲೆ ಹೊಡೆಯುವ ಪೊಲೀಸರಿಗೆ ದಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಂಟಂ ಚಾಲಕರು, ಮಾಲೀಕರ ಸಂಘದ ಅಧ್ಯಕ್ಷರೂ ಆಗಿರುವ ದಲಿತ ಸಂಘರ್ಷ ಸಮಿತಿ (ಭೀಮವಾದ) ರಾಜ್ಯ ಸಂಚಾಲಕ ಪರಶುರಾಮ ನೀಲನಾಯಕ, ಡಿಸಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿ, ಟಂಟಂ ಚಾಲಕರಿಗೆ ಪೊಲೀಸರು ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳಿಂದ ಆಗುತ್ತಿರುವ ಕಿರುಕುಳ ಬಿಚ್ಚಿಟ್ಟರು.
ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ ಮನೆ, ಭೂಮಿ ಎಲ್ಲವನ್ನೂ ಕಳೆದುಕೊಂಡು ಸದ್ಯ ನವನಗರದಲ್ಲಿ ವಾಸವಾಗಿದ್ದೇವೆ. ನಗರದಲ್ಲಿ ಯಾವುದೇ ದೊಡ್ಡ ಕಾರ್ಖಾನೆಗಳೂ ಇಲ್ಲ. ಹೀಗಾಗಿ ಟಂಟಂ ಓಡಿಸಿಕೊಂಡೇ ಜೀವನ ನಡೆಸುತ್ತಿದ್ದೇವೆ. ಆದರೆ, ಪೊಲೀಸರು ವಿನಾಕಾರಣ ಕಿರುಕುಳ ನೀಡಿ ದಂಡ ಹಾಕುತ್ತಿದ್ದಾರೆ. ಇದರಿಂದ ಟಂಟಂ ಚಾಲಕರು ನಿತ್ಯ ಗಳಿಸಿದ ಹಣವನ್ನು ಪೊಲೀಸರಿಗೆ ದಂಡದ ರೂಪದಲ್ಲಿ ಕೊಡಬೇಕಾದ ಅನಿವಾರ್ಯತೆ ಎದುರಾಗಿದೆ. ನಿತ್ಯ ಉಪ ಜೀವನ ನಡೆಸುವುದೇ ಟಂಟಂ ಓಡಿಸಿದ್ದರಿಂದ ಬರುವ ಹಣದಲ್ಲೇ ನಾವೆಲ್ಲ ಜೀವನ ನಡೆಸುತ್ತೇವೆ. ಈಗ ಪೊಲೀಸರು ಕೇಸ್ ಹಾಕುತ್ತಿರುವುದರಿಂದ ತೀವ್ರ ಸಮಸ್ಯೆಯಾಗಿದೆ. ಜಿಲ್ಲಾಧಿಕಾರಿಗಳು ಕೂಡಲೇ ನಮ್ಮ ಮೇಲಾಗುತ್ತಿರುವ ಕಿರುಕುಳ ತಪ್ಪಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರಮುಖರಾದ ಮೊಹ್ಮದಶಬ್ಬೀರ ಸಣ್ಣಕ್ಕಿ, ಅಡಿವೆಪ್ಪ ಕಟ್ಟಿಮನಿ, ರಮೇಶ ಹೊಸಮನಿ, ಗುರಯ್ಯ ಸಿಕ್ಕೇರಿಮಠ, ರಾಜೇಸಾಬ ನದಾಫ ಪ್ರತಿಭಟನೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ
Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ
Mudhol: ಆರ್ಎಸ್ಎಸ್ನಿಂದ ದೇಶಕ್ಕೆ ಕಂಟಕ: ಆರ್.ಬಿ.ತಿಮ್ಮಾಪುರ
Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.