![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Jun 28, 2019, 1:39 PM IST
ಹುಬ್ಬಳ್ಳಿ: ಇಲ್ಲಿನ ವಿಮಾನ ನಿಲ್ದಾಣಕ್ಕೆ ಕರೆ ಮಾಡಿ ತನ್ನ ಪ್ರೇಯಸಿಯೊಂದಿಗೆ ಮಾತನಾಡಬೇಕು ಎಂದು ಪೀಡಿಸುತ್ತಿದ್ದ ವ್ಯಕ್ತಿಯನ್ನು ಗೋಕುಲ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಬಂಧಿತ ರಾಯ್ ಡಯಾಸ್ ಜಾಮೀನು ಪಡೆದು ತೆರಳಿದ್ದಾರೆ. ಹಲವು ತಿಂಗಳುಗಳಿಂದ ರಾಯ್ ಡಯಾಸ್ ಇಲ್ಲಿನ ವಿಮಾನ ನಿಲ್ದಾಣಕ್ಕೆ ಕರೆ ಮಾಡಿ ತನ್ಮ ಪ್ರೇಯಸಿಯೊಂದಿಗೆ ಮಾತನಾಡಬೇಕು ಎಂದು ಪೀಡಿಸುತ್ತಿದ್ದ. ಇದು ವಿಮಾನ ನಿಲ್ದಾಣ ಪ್ರಾಧಿಕಾರದ ಸಿಬ್ಬಂದಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿತ್ತು. ಅವನಿಗೆ ತಕ್ಕ ಪಾಠ ಕಲಿಸಬೇಕು ಎಂದು ನಿರ್ಧರಿಸಿ ಗೋಕುಲ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಭಗ್ನ ಪ್ರೇಮಿಯ ಹುಡುಕಾಟಕ್ಕೆ ಮುಂದಾಗಿದ್ದರು. ಆದರೆ ಚಾಲಾಕಿ ಡಯಾಸ್ ಇಂಟರ್ನೆಟ್ ಕಾಲ್ ಮಾಡುತ್ತಿದ್ದ. ಹೀಗಾಗಿ ಆರಂಭದಲ್ಲಿಪೊಲೀಸರಿಗೆ ಇದು ಕಷ್ಟವಾಗಿತ್ತು. ಆದರೆ ಪಟ್ಟು ಬಿಡದ ಪೊಲೀಸರು ಗೋವಾದಲ್ಲಿದ್ದ ರಾಯ್ ಡಯಾಸ್ನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಜಾಮೀನು ನೀಡುವಂತಹ ಪ್ರಕರಣವಾಗಿದ್ದರಿಂದ ರಾಯ್ ಡಯಾಸ್ ಜಾಮೀನು ಪಡೆದು ಗೋವಾಕ್ಕೆ ತೆರಳಿದ್ದಾರೆ. ಎನ್ನಲಾಗಿದ್ದು, ಪುನಃ ಇಂತಹ ಕೆಲಸ ಮಾಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.