ಕಲ್ಯಾಣ್‌ ಓಂ ಶಕ್ತಿ ಮಹಿಳಾ ಸಂಸ್ಥೆ: ಗ್ರಾಮೀಣರಿಗೆ ನೆರವು


Team Udayavani, Jun 28, 2019, 5:51 PM IST

2706MUM06

ಕಲ್ಯಾಣ್‌: ಓಂ ಶಕ್ತಿ ಮಹಿಳಾ ಸಂಸ್ಥೆ ಕಲ್ಯಾಣ್‌ ಇದರ ವತಿಯಿಂದ ಸಂಸ್ಥೆಯ ಗೌರವಾಧ್ಯಕ್ಷೆ ಚಿತ್ರಾ ಆರ್‌. ಶೆಟ್ಟಿ ಮುಂದಾಳತ್ವದಲ್ಲಿ ಮೋಹ್‌ವಾಡಿಯ ಮಕ್ಕಳಿಗೆ ಶಾಲಾ ಪರಿಕರಗಳು ಮತ್ತು ಸೈಕಲ್‌ ವಿತರಣೆ ಹಾಗೂ ಗ್ರಾಮೀಣ ಭಾಗದ ಜನತೆಗೆ ಸೇವಾ ಸೌಲಭ್ಯಗಳ ಪೂರೈಕೆ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.

ವಿವಿಧ ಕ್ಷೇತ್ರಗಳಲ್ಲಿ ಸೇವೆಗಳನ್ನು ಮಾಡುತ್ತಾ ಬಂದಿರುವ ಕಲ್ಯಾಣ್‌ ಪರಿಸರದ ಓಂ ಶಕ್ತಿ ಮಹಿಳಾ ಸಂಸ್ಥೆ ವರ್ಷದ ಆದಿಯಲ್ಲಿ ಕಲ್ಯಾಣ್‌ನಿಂದ 60 ಕೀ. ಮೀ. ದೂರದಲ್ಲಿರುವ ಮೋಹ್‌ವಾಡಿಯ ಆದಿವಾಸಿ ಜನಾಂಗದ 50 ಕುಟುಂಬಗಳಿಗೆ ದೈನಂದಿನ ಬದುಕಿಗೆ ಪೂರಕವಾಗಿ, ಅವರಿಗೆ ಹೈನುಗಾರಿಕೆ ಮತ್ತು ಕೋಳಿ ಸಾಕಣೆಯ ಸೌಲಭ್ಯವನ್ನು ಒದಗಿಸಿ ಕೊಟ್ಟು ಮೋಹ್‌ವಾಡಿಯನ್ನು ಒಂದು ಮಾದರಿ ಹಳ್ಳಿಯಾಗಿ ಮಾರ್ಪಡಿ ಸುವಲ್ಲಿ ಯಶಸ್ವಿಯಾಗಿದೆ.

ಇದೇ ಹಳ್ಳಿಯಲ್ಲಿ 5-6 ಕಿ. ಮೀ. ದೂರದ ಹೈಸ್ಕೂಲ್‌ಗೆ ಕಾಲ್ನಡಿಗೆಯಲ್ಲಿಯೇ ತೆರಳುವ ಸುಮಾರು 30 ವಿದ್ಯಾರ್ಥಿಗಳಿಗೆ ಸೈಕಲ್‌ ವ್ಯವಸ್ಥೆ ಹಾಗೂ ಮೋಹ್‌ವಾಡಿಯ ಸುಮಾರು 80 ಮಕ್ಕಳಿಗೆ ಪಾದರಕ್ಷೆ, ಇನ್ನಿತರ ಶಾಲಾ ಪರಿಕರಗಳನ್ನು ವಿತರಿಸಲಾಯಿತು.

ಅಕಾಲಿಕ ಮಳೆಯಿಂದ ಹಾನಿಗೊಳ ಗಾದ ಪ್ರದೇಶಕ್ಕೆ ಶಾಸಕ ಕಿಶನ್‌ಜಿà ಕಕೋರೆ, ತಹಶೀಲ್ದಾರ್‌, ಜಿಲ್ಲಾ ಪರಿಷತ್‌ನ ಉಪ ಸಭಾಪತಿ ಸೀಮಾ ಘರಾಟ್‌, ಜಿಲ್ಲಾ ಪರಿಷತ್‌ನ ಸದಸ್ಯ ಅನಿಲ್‌ ಘರಾಟ್‌ ಮತ್ತಿತರ ಸರಕಾರಿ ಅಧಿಕಾರಿಗಳೊಂದಿಗೆ ಓಂ ಶಕ್ತಿ ಮಹಿಳಾ ಸಂಸ್ಥೆಯ ಮಹಿಳೆಯರು ಭೇಟಿ ನೀಡಿ ಸಂಕಷ್ಟಕ್ಕೊಳಗಾದ ಕುಟುಂಬಗಳಿಗೆ ದಿನನಿತ್ಯದ ಅಗತ್ಯ ಆಹಾರ ಪದಾರ್ಥಗಳು ಮತ್ತು ಇನ್ನಿತರ ಸಾಮಗ್ರಿ ವಿತರಿಸಿದರು.

ಮೂಲ ಸೌಕರ್ಯಗಳಿಂದ ವಂಚಿತರಾದ ಶಾಲಾ ಮಕ್ಕಳ ಜ್ಞಾನ ವಿಕಾಸಕ್ಕಾಗಿ ಶಾರದಾ ವಿದ್ಯಾ ಮಂದಿರ್‌ ವೈಶಾಖರೆ ಶಾಲೆಗೆ 2 ಕಂಪ್ಯೂಟರ್‌ಗಳನ್ನು ಪೂರೈಸಲಾಯಿತು. ಸಂಸ್ಥೆಯ ಅಧ್ಯಕ್ಷೆ ಹರಿಣಿ ಟಿ. ಶೆಟ್ಟಿ, ಉಪಾಧ್ಯಕ್ಷೆ ಜ್ಯೋತಿ ಎಸ್‌. ಶೆಟ್ಟಿ, ಕೋಶಾಧಿಕಾರಿ ಸುರೇಖಾ ಎಚ್‌. ಶೆಟ್ಟಿ, ಜತೆ ಕೋಶಾಧಿಕಾರಿ ಕುಶಲಾ ಜಿ. ಶೆಟ್ಟಿ, ಸಮಾಜ ಕಲ್ಯಾಣ ಸಮಿತಿಯ ಶಶಿ ಪಿ. ಶೆಟ್ಟಿ, ರಜನಿ ಎಸ್‌. ಶೆಟ್ಟಿ, ಉಷಾ ಎ. ಶೆಟ್ಟಿ, ಸುಪ್ರೀತಾ ಎಂ. ಭಂಡಾರಿ, ಶಾಲಿನಿ ಎಸ್‌. ಶೆಟ್ಟಿ, ಯಶೋದಾ ಆರ್‌. ಶೆಟ್ಟಿ, ಪ್ರೇಮಾ ಆಳ್ವ, ಕುಮಾರಿ ವಿ. ಶೆಟ್ಟಿ, ಪ್ರಕೃತಿ ಎಸ್‌. ಶೆಟ್ಟಿ, ಇಂದಿರಾ ಎಲ್‌. ಶೆಟ್ಟಿ, ರಂಜಿತಾ ಆರ್‌. ಶೆಟ್ಟಿ, ಸುಧಾ ಡಿ. ಶೆಟ್ಟಿ, ಆಶಾ ವಿ. ಶೆಟ್ಟಿ, ಆಶ್ನಾ ಪಿ. ಶೆಟ್ಟಿ ಮೊದಲಾದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತ ನಾಡಿದ ಸಂಸ್ಥೆಯ ಗೌರವಾಧ್ಯಕ್ಷೆ ಚಿತ್ರಾ ಆರ್‌. ಶೆಟ್ಟಿ ಅವರು, ಇನ್ನೂ ಹಲವು ಮಕ್ಕಳಿಗೆ ಸಹಾಯ ಮಾಡಲಿದ್ದೇವೆ. ನಮ್ಮ ಈ ಸಮಾಜ ಸೇವೆಗೆ ಶ್ರಮಿಸಿದ ಎಲ್ಲ ದಾನಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದೇನೆ. ನಮ್ಮ ಸಮಾಜಪರ ಕಾರ್ಯಗಳಿಗೆ ಎಲ್ಲರ ಸಹಕಾರ ಸದಾಯಿರಲಿ ಎಂದು ಆಶಿಸಿದರು. ಹರಿಣಿ ಟಿ. ಶೆಟ್ಟಿ ವಂದಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.