ದ್ವಿಚಕ್ರ ಸವಾರರಿಗೆ ಹೆಲ್ಮೆಟ್ ಕಡ್ಡಾಯ-ಸುರಕ್ಷತೆ ಅರಿವು
Team Udayavani, Jun 29, 2019, 1:34 PM IST
ಶಿರಹಟ್ಟಿ: ಬಸವೇಶ್ವರ ವೃತ್ತದಲ್ಲಿ ಹೆಲ್ಮೆಟ್ ಕಡ್ಡಾಯ ಮತ್ತು ಸುರಕ್ಷತೆ ಕುರಿತು ಪಿಎಸ್ಐ ಬಸವರಾಜ ತಿಪ್ಪಾರೆಡ್ಡಿ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಟ್ಟರು.
ಶಿರಹಟ್ಟಿ: ಪ್ರತಿಯೊಬ್ಬ ವ್ಯಕ್ತಿ ಕುಟುಂಬದ ಆಧಾರ ಸ್ತಂಭವಾಗಿದ್ದಾರೆ. ಪ್ರತಿ ಜೀವಕ್ಕೂ ಬೆಲೆಯಿದೆ. ಇದನ್ನು ತಿಳಿದುಕೊಳ್ಳದೇ ಹುಂಬತನಕ್ಕೆ ಮುಂದಾದರೆ ಜೀವಕ್ಕೆ ಆಪತ್ತು ಖಚಿತ. ಆದ್ದರಿಂದ ಸವಾರರು ಮತ್ತು ಹಿಂಬದಿ ಸವಾರರು ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ ಕುಟುಂಬದ ಆತಂಕ ನಿವಾರಿಸಬೇಕೆಂದು ಪಿಎಸ್ಐ ಬಸವರಾಜ ತಿಪ್ಪ್ಪಾರಡ್ಡಿ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಹೆಲ್ಮೆಟ್ ಕಡ್ಡಾಯ ಮತ್ತು ಸುರಕ್ಷತೆ ಕುರಿತು ಅವರು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಟ್ಟರು.
ನಿರ್ಲಕ್ಷ್ಯ ಧೋರಣೆಯಿಂದ ಕುಟುಂಬವನ್ನು ಬೀದಿಗೆ ತರಬೇಡಿ. ವಾಹನ ಸವಾರರು ನಿಯಮಗಳನ್ನು ಪಾಲಿಸುವುದರ ಜೊತೆಗೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಇನ್ನು ಆಟೋ ರಿಕ್ಷಾದವರು ಮಿತವಾಗಿ ಪ್ಯಾಸೆಂಜರ್ ಹಾಕಬೇಕು. ಮಿತವಾದ ವೇಗದಲ್ಲಿ ಚಲಿಸಬೇಕು. ಇತ್ತೀಚಿನ ದಿನಮಾನದಲ್ಲಿ ಅಪಘಾತಗಳು ಹೆಚ್ಚಾಗುತ್ತಿರುವುದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಮಿತವಾಗಿ ಪ್ರಯಾಣಿಕರನ್ನು ಕರೆದೊಯ್ಯಬೇಕು. ವಾಹನ ಚಲಿಸುವಾಗ ಹೆಚ್ಚು ಧ್ವನಿಯೊಂದಿಗೆ ಹಾಡುಗಳನ್ನು ಕೇಳಿವುದು ಮತ್ತು ಶಬ್ದಗಳನ್ನು ಮಾಡುವುದು ನಿಷೇಧಿಸಬೇಕು ಎಂದರು.
ಮಾಜಿ ಶಾಸಕ ಎಸ್.ಎನ್. ಪಾಟೀಲ್ ಮತ್ತು ಪಪಂ ಮಾಜಿ ಸದಸ್ಯ ಚಾಂದಸಾಬ ಮುಳಗುಂದ, ಪೊಲೀಸ್ ಸಿಬ್ಬಂದಿ ಇದ್ದರು.
ಹೆಲ್ಮೆಟ್ ಧರಿಸುವಂತೆ ಹೂ ನೀಡಿ ವಿಶೇಷ ಜಾಗೃತಿ:
ದ್ವಿಚಕ್ರ ಸವಾರರು ಕಡ್ಡಾಯ ಹೆಲ್ಮೆಟ್ ಧರಿಸುವಂತೆ ಮನವರಿಕೆ ಮಾಡಿ, ಗುಲಾಬಿ ಹೂವು ನೀಡುವ ಮೂಲಕ ಅವಳಿ ನಗರದ ಪ್ರಮುಖ ವೃತ್ತಗಳಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ವಿಶೇಷ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.
ನಗರದ ಮುಳಗುಂದ ನಾಕಾ, ಭೂಮರೆಡ್ಡಿ ಸರ್ಕಲ್, ಮಹಾತ್ಮಗಾಂಧಿ ವೃತ್ತ, ಬೆಟಗೇರಿ ಮುಖ್ಯರಸ್ತೆ ಸೇರಿದಂತೆ ಪ್ರಮುಖ ವೃತ್ತಗಳಲ್ಲಿ ಶುಕ್ರವಾರ ಬೆಳಗ್ಗೆಯೇ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಜಮಾಯಿಸಿದ್ದರು. ಶಿರಸ್ತ್ರಾಣ (ಹೆಲ್ಮೆಟ್) ಧರಿಸದೇ ಸಂಚರಿಸುವ ವಾಹನ ಸವಾರರನ್ನು ತಡೆದು, ದಂಡ ಹಾಕದೇ ಅವರಿಗೆ ಗುಲಾಬಿ ಹೂ ನೀಡುವುದರೊಂದಿಗೆ ಇನ್ನು ಮುಂದೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಸೂಚಿಸುವ ಮೂಲಕ ಸಾರ್ವಜನಿಕರ ಗಮನ ಸೆಳೆದರು.
ಪ್ರೊಬೇಶನರಿ ಡಿವೈಎಸ್ಪಿ ನವೀನಕುಮಾರ, ಸಂಚಾರಿ ಠಾಣೆ ಪಿಎಸ್ಐ ಕಮಲಾ ದೊಡ್ಡಮನಿ, ಗದಗ ಶಹರ ಪಿಎಸ್ಐ ಸೋಮೇಶ ಗೆಜ್ಜಿ, ಶಹರ ಹೆಚ್ಚವರಿ ಪಿಎಸ್ಐ ಉಮಾ ವಗ್ಗರ ಬೈಕ್ ಸವಾರರಿಗೆ ಗುಲಾಬಿ ಹೂ ನೀಡಿ ಹೆಲ್ಮೆಟ್ ಧರಿಸಲು ಸೂಚಿಸಿದರು.
ಪೊಲೀಸ್ ಸಿಬ್ಬಂದಿ ಸಂತೋಷ ಗುಬ್ಬಿ, ಮಂಜುನಾಥ, ಎಸ್.ಜಿ. ಹೂಗಾರ, ಮಾರುತಿ ಕುರ್ಲಗೇರಿ, ಐ.ಪಿ. ರಾಠೊಡ ಸೇರಿದಂತೆ ಪೊಲೀಸ್ ಸಿಬ್ಬಂದಿ ಜಾಗೃತಿಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ
ಜನರಿಗೆ ಪ್ರಜಾಪ್ರಭುತ್ವ ಅರಿವು ಮೂಡಿಸಿ, ಬಲ ತುಂಬುವ ಕಾರ್ಯಕ್ರಮ ಪ್ರಜಾಪ್ರಭುತ್ವ ದಿನಾಚರಣೆ
Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್
ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!
Gadaga: ಸಿಎಂ ಸ್ಥಾನ ಖಾಲಿ ಇಲ್ಲ, ಖಾಲಿಯಾಗುವ ಪ್ರಶ್ನೆಯೂ ಇಲ್ಲ: ಸಚಿವ ಎಚ್.ಕೆ.ಪಾಟೀಲ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.