ದ್ವಿಚಕ್ರ ಸವಾರರಿಗೆ ಹೆಲ್ಮೆಟ್ ಕಡ್ಡಾಯ-ಸುರಕ್ಷತೆ ಅರಿವು


Team Udayavani, Jun 29, 2019, 1:34 PM IST

gadaga-tdy-8..

ಶಿರಹಟ್ಟಿ: ಬಸವೇಶ್ವರ ವೃತ್ತದಲ್ಲಿ ಹೆಲ್ಮೆಟ್ ಕಡ್ಡಾಯ ಮತ್ತು ಸುರಕ್ಷತೆ ಕುರಿತು ಪಿಎಸ್‌ಐ ಬಸವರಾಜ ತಿಪ್ಪಾರೆಡ್ಡಿ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಟ್ಟರು.

ಶಿರಹಟ್ಟಿ: ಪ್ರತಿಯೊಬ್ಬ ವ್ಯಕ್ತಿ ಕುಟುಂಬದ ಆಧಾರ ಸ್ತಂಭವಾಗಿದ್ದಾರೆ. ಪ್ರತಿ ಜೀವಕ್ಕೂ ಬೆಲೆಯಿದೆ. ಇದನ್ನು ತಿಳಿದುಕೊಳ್ಳದೇ ಹುಂಬತನಕ್ಕೆ ಮುಂದಾದರೆ ಜೀವಕ್ಕೆ ಆಪತ್ತು ಖಚಿತ. ಆದ್ದರಿಂದ ಸವಾರರು ಮತ್ತು ಹಿಂಬದಿ ಸವಾರರು ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ ಕುಟುಂಬದ ಆತಂಕ ನಿವಾರಿಸಬೇಕೆಂದು ಪಿಎಸ್‌ಐ ಬಸವರಾಜ ತಿಪ್ಪ್ಪಾರಡ್ಡಿ ಹೇಳಿದರು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಹೆಲ್ಮೆಟ್ ಕಡ್ಡಾಯ ಮತ್ತು ಸುರಕ್ಷತೆ ಕುರಿತು ಅವರು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಟ್ಟರು.

ನಿರ್ಲಕ್ಷ್ಯ ಧೋರಣೆಯಿಂದ ಕುಟುಂಬವನ್ನು ಬೀದಿಗೆ ತರಬೇಡಿ. ವಾಹನ ಸವಾರರು ನಿಯಮಗಳನ್ನು ಪಾಲಿಸುವುದರ ಜೊತೆಗೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಇನ್ನು ಆಟೋ ರಿಕ್ಷಾದವರು ಮಿತವಾಗಿ ಪ್ಯಾಸೆಂಜರ್‌ ಹಾಕಬೇಕು. ಮಿತವಾದ ವೇಗದಲ್ಲಿ ಚಲಿಸಬೇಕು. ಇತ್ತೀಚಿನ ದಿನಮಾನದಲ್ಲಿ ಅಪಘಾತಗಳು ಹೆಚ್ಚಾಗುತ್ತಿರುವುದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಮಿತವಾಗಿ ಪ್ರಯಾಣಿಕರನ್ನು ಕರೆದೊಯ್ಯಬೇಕು. ವಾಹನ ಚಲಿಸುವಾಗ ಹೆಚ್ಚು ಧ್ವನಿಯೊಂದಿಗೆ ಹಾಡುಗಳನ್ನು ಕೇಳಿವುದು ಮತ್ತು ಶಬ್ದಗಳನ್ನು ಮಾಡುವುದು ನಿಷೇಧಿಸಬೇಕು ಎಂದರು.

ಮಾಜಿ ಶಾಸಕ ಎಸ್‌.ಎನ್‌. ಪಾಟೀಲ್ ಮತ್ತು ಪಪಂ ಮಾಜಿ ಸದಸ್ಯ ಚಾಂದಸಾಬ ಮುಳಗುಂದ, ಪೊಲೀಸ್‌ ಸಿಬ್ಬಂದಿ ಇದ್ದರು.

ಹೆಲ್ಮೆಟ್ ಧರಿಸುವಂತೆ ಹೂ ನೀಡಿ ವಿಶೇಷ ಜಾಗೃತಿ:

ದ್ವಿಚಕ್ರ ಸವಾರರು ಕಡ್ಡಾಯ ಹೆಲ್ಮೆಟ್ ಧರಿಸುವಂತೆ ಮನವರಿಕೆ ಮಾಡಿ, ಗುಲಾಬಿ ಹೂವು ನೀಡುವ ಮೂಲಕ ಅವಳಿ ನಗರದ ಪ್ರಮುಖ ವೃತ್ತಗಳಲ್ಲಿ ಜಿಲ್ಲಾ ಪೊಲೀಸ್‌ ಇಲಾಖೆಯಿಂದ ವಿಶೇಷ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.

ನಗರದ ಮುಳಗುಂದ ನಾಕಾ, ಭೂಮರೆಡ್ಡಿ ಸರ್ಕಲ್, ಮಹಾತ್ಮಗಾಂಧಿ ವೃತ್ತ, ಬೆಟಗೇರಿ ಮುಖ್ಯರಸ್ತೆ ಸೇರಿದಂತೆ ಪ್ರಮುಖ ವೃತ್ತಗಳಲ್ಲಿ ಶುಕ್ರವಾರ ಬೆಳಗ್ಗೆಯೇ ಪೊಲೀಸ್‌ ಅಧಿಕಾರಿ ಹಾಗೂ ಸಿಬ್ಬಂದಿ ಜಮಾಯಿಸಿದ್ದರು. ಶಿರಸ್ತ್ರಾಣ (ಹೆಲ್ಮೆಟ್) ಧರಿಸದೇ ಸಂಚರಿಸುವ ವಾಹನ ಸವಾರರನ್ನು ತಡೆದು, ದಂಡ ಹಾಕದೇ ಅವರಿಗೆ ಗುಲಾಬಿ ಹೂ ನೀಡುವುದರೊಂದಿಗೆ ಇನ್ನು ಮುಂದೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಸೂಚಿಸುವ ಮೂಲಕ ಸಾರ್ವಜನಿಕರ ಗಮನ ಸೆಳೆದರು.

ಪ್ರೊಬೇಶನರಿ ಡಿವೈಎಸ್‌ಪಿ ನವೀನಕುಮಾರ, ಸಂಚಾರಿ ಠಾಣೆ ಪಿಎಸ್‌ಐ ಕಮಲಾ ದೊಡ್ಡಮನಿ, ಗದಗ ಶಹರ ಪಿಎಸ್‌ಐ ಸೋಮೇಶ ಗೆಜ್ಜಿ, ಶಹರ ಹೆಚ್ಚವರಿ ಪಿಎಸ್‌ಐ ಉಮಾ ವಗ್ಗರ ಬೈಕ್‌ ಸವಾರರಿಗೆ ಗುಲಾಬಿ ಹೂ ನೀಡಿ ಹೆಲ್ಮೆಟ್ ಧರಿಸಲು ಸೂಚಿಸಿದರು.

ಪೊಲೀಸ್‌ ಸಿಬ್ಬಂದಿ ಸಂತೋಷ ಗುಬ್ಬಿ, ಮಂಜುನಾಥ, ಎಸ್‌.ಜಿ. ಹೂಗಾರ, ಮಾರುತಿ ಕುರ್ಲಗೇರಿ, ಐ.ಪಿ. ರಾಠೊಡ ಸೇರಿದಂತೆ ಪೊಲೀಸ್‌ ಸಿಬ್ಬಂದಿ ಜಾಗೃತಿಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ

Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ

7-mundaragi

ಜನರಿಗೆ ಪ್ರಜಾಪ್ರಭುತ್ವ ಅರಿವು ಮೂಡಿಸಿ, ಬಲ ತುಂಬುವ ಕಾರ್ಯಕ್ರಮ ಪ್ರಜಾಪ್ರಭುತ್ವ ದಿನಾಚರಣೆ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!

ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!

Gadaga: ಸಿಎಂ ಸ್ಥಾನ ಖಾಲಿ ಇಲ್ಲ, ಖಾಲಿಯಾಗುವ ಪ್ರಶ್ನೆಯೂ ಇಲ್ಲ: ಸಚಿವ ಎಚ್‌.ಕೆ.ಪಾಟೀಲ

Gadaga: ಸಿಎಂ ಸ್ಥಾನ ಖಾಲಿ ಇಲ್ಲ, ಖಾಲಿಯಾಗುವ ಪ್ರಶ್ನೆಯೂ ಇಲ್ಲ: ಸಚಿವ ಎಚ್‌.ಕೆ.ಪಾಟೀಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.