ನೀರಿನ ಸಮಸ್ಯೆ ನೀಗಿಸಲು ಕ್ರಮ

ಅಧಿಕಾರಿ, ಜನಪ್ರತಿನಿಧಿಗಳು ಸಹಕರಿಸಿದಾಗ ಮಾತ್ರ ಅಭಿವೃದ್ಧಿ ಸಾಧ್ಯ: ಜಿಪಂ ಸಿಇಒ ಜಗದೀಶ್‌

Team Udayavani, Jun 29, 2019, 3:58 PM IST

kolar-tdy-4..

ಕೋಲಾರ ತಾಲೂಕಿನ ವೇಮಗಲ್ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಪಂಚಾಯ್ತಿ ಸಿಇಒ ಜಗದೀಶ್‌ ಎಪ್ಸನ್‌ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಸದಸ್ಯರೊಂದಿಗೆ ಮಾತನಾಡಿದರು.

ಕೋಲಾರ: ಜಿಲ್ಲೆಯ 400ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪೂರೈಕೆ ಮಾಡುತ್ತಿದ್ದ ಟ್ಯಾಂಕರ್‌ ನೀರು ಪೂರೈಕೆಯನ್ನು 40ಕ್ಕೆ ಇಳಿಸಲಾಗಿದೆ. ನೀರಿನ ಸಮಸ್ಯೆ ಕಂಡು ಬರದಂತೆ ಎಲ್ಲಾ ಎಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಪಂ ಸಿಇಒ ಜಿ.ಜಗದೀಶ್‌ ತಿಳಿಸಿದರು.

ತಾಲೂಕಿನ ವೇಮಗಲ್ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಪ್ಸನ್‌ ಕಂಪನಿಯಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮದ ನಂತರ ಶಾಲೆಯಲ್ಲಿ ಅವರು ಮಾತನಾಡಿದರು.

ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಒಟ್ಟಾಗಿ ಸಹಕರಿಸಿದರೆ ಮಾತ್ರವೇ ಗ್ರಾಮೀಣ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಸಿಗಲು ಸಾಧ್ಯ ಎಂದ ಅವರು, ಜಿಲ್ಲೆಯಲ್ಲಿ ನೀರಿನ ಸಮಸ್ಯೆಯನ್ನು ಸಮರ್ಪಕವಾಗಿ ನಿಭಾಯಿಸಲಾಗಿದೆ ಎಂದು ತಿಳಿಸಿದರು.

ಕಿರುಕುಳ ನೀಡಿದ್ರೆ ಯಾರ್‌ ಬರ್ತಾರೆ: ವೇಮಗಲ್ ಗ್ರಾಪಂ ಅಧ್ಯಕ್ಷೆ ಶಶಿಕಲಾ ನಾಗೇಶ್‌ ಅವರು ಗ್ರಾಮ ಪಂಚಾಯಿತಿಗೆ ಪಿಡಿಒ ನೇಮಕಕ್ಕೆ ಸಂಬಂಧಿಸಿದಂತೆ ಮನವಿ ಮಾಡಿದಾಗ, ಇಲ್ಲಿನ ಅವ್ಯವಸ್ಥೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಸಿಇಒ ಅವರು, ಎಂತಹ ಪಿಡಿಒ ಬಂದರೂ ನಿಮ್ಮಿಂದ ಕೆಲಸ ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಅವರಿಗೆ ಕಿರುಕುಳ ನೀಡಿದರೆ ಯಾರು ತಾನೇ ಇಲ್ಲಿಗೆ ಬರಲು ಒಪ್ಪುತ್ತಾರೆ ಎಂದು ಪ್ರಶ್ನಿಸಿದರು.

ಸದ್ಯ ಕುರಗಲ್ ಪಿಡಿಒ ಅವರನ್ನು ನಿಯೋಜನೆ ಮಾಡಿರುವುದಾಗಿ ತಿಳಿಸಿದ ಅವರು, ಪಿಡಿಒ ತಪ್ಪು ಮಾಡಿದರೆ ಹಿರಿಯ ಅಧಿಕಾರಿಗಳಿಗೆ ತಿಳಿಸಿ, ಅದು ಬಿಟ್ಟು ಜನ ಪ್ರತಿನಿಧಿಗಳೇ ಮನಬಂದಂತೆ ಮಾತನಾಡಿದರೆ ಹೇಗೆ ಎಂದು ಪ್ರಶ್ನಿಸಿ, ವೇಮಗಲ್ಗೆ ಪಿಡಿಒಗಳಾಗಿ ಬರಲು ಹೆದರಲು ಕಾರಣವೇನು ಎಂಬುದನ್ನು ಅರಿತು ಗ್ರಾಮಕ್ಕೆ ಒಳ್ಳೆಯ ಹೆಸರು ತರುವ ರೀತಿ ಕೆಲಸ ಮಾಡಿ ಎಂದು ಸಲಹೆ ನೀಡಿದರು.

ಶಾಲಾವರಣದಲ್ಲಿ ಸಸಿ ಬೆಳೆಸಲು ಸಲಹೆ: ಶಾಲೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿರುವ ಕುರಿತು ಮುಖ್ಯಶಿಕ್ಷಕರನ್ನು ಅಭಿನಂದಿಸಿದ ಸಿಇಒ ಅವರು, ಆವರಣದಲ್ಲಿ ಮತ್ತಷ್ಟು ಸಸಿ ಬೆಳೆಸಲು ಕ್ರಮ ಕೈಗೊಳ್ಳಿ ಎಂದ ಅವರು, ಅರಣ್ಯ ಇಲಾಖೆ ಅಧಿಕಾರಿಗಳನ್ನು ಕರೆಸಿ ಎಷ್ಟು ಸಸಿಗಳನ್ನು ನೆಡಬಹುದು ಎಂದು ಅಂದಾಜು ಮಾಡಿ, ಗ್ರಾಮ ಪಂಚಾಯಿತಿ ವತಿಯಿಂದ ಸಾವಿರ ಗಿಡ ನಾಟಿ ಕಾರ್ಯಕ್ರಮದಡಿ ಸಸಿ ನೆಡಿ ಎಂದು ಹೇಳಿದರು.

ಮತ್ತಷ್ಟು ನೆಡಿ: ಈಗಾಗಲೇ 900 ಸಸಿ ನೆಟ್ಟಿರುವ ಕುರಿತು ಗ್ರಾಪಂ ಅಧ್ಯಕ್ಷೆ ಶಶಿಕಲಾ ನಾಗೇಶ್‌ ಮಾತಿಗೆ ಉತ್ತರಿಸಿ, ಈಗ ನೆಟ್ಟಿರುವ ಸಸಿ ಸಾಲದು ಮತ್ತಷ್ಟು ಹಾಕಿ ಎಂದು ಸೂಚಿಸಿದರು. ಇದಕ್ಕೆ ಅಲ್ಲೇ ಇದ್ದ ಎಪ್ಸನ್‌ ಕಂಪನಿಯ ಹಿರಿಯ ವ್ಯವಸ್ಥಾಪಕ ರಾಜೇಂದ್ರಕುಮಾರ್‌ ಸಿಂಗ್‌, ಸಸಿ ನೆಟ್ಟರೆ ಅದರ ರಕ್ಷಣೆಗೆ ಗಾರ್ಡ್‌ಗಳನ್ನು ಕಂಪನಿಯಿಂದ ಒದಗಿಸಿಕೊಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಎಪ್ಸನ್‌ ಕಂಪನಿಯ ಸ್ಯಾಮುಯಲ್ ನವನೀತ್‌, ವಿಜಯಗೋವಿಂದ್‌, ಗ್ರಾಪಂ ಅಧ್ಯಕ್ಷೆ ಶಶಿಕಲಾ ನಾಗೇಶ್‌, ಉಪಾಧ್ಯಕ್ಷ ಗಣೇಶ್‌, ಮುಖ್ಯಶಿಕ್ಷಕರ ಸಂಘದ ಜಿ.ಶ್ರೀನಿವಾಸ್‌, ಇಸಿಒ ಆರ್‌.ಶ್ರೀನಿವಾಸನ್‌, ಶಿಕ್ಷಕ ಗೆಳೆಯರ ಬಳಗದ ವೀರಣ್ಣಗೌಡ, ಮುಖ್ಯ ಶಿಕ್ಷಕ ಆರ್‌.ಸದಾನಂದ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

Zeeka-Virus

Zika Virus: ಗರ್ಭಿಣಿಯರೇ ಝೀಕಾ ಬಗ್ಗೆ ಎಚ್ಚರ: ಸರಕಾರ ಸೂಚನೆ

MBPatil

Airport: ರಾಜಧಾನಿ ಸಮೀಪ ವಿಮಾನ ನಿಲ್ದಾಣಕ್ಕೆ ಜಾಗದ ಹುಡುಕಾಟ: ಎಂ.ಬಿ. ಪಾಟೀಲ್‌

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

1-a-da

Rain; ಭಾರತ ಮತ್ತು ದಕ್ಷಿಣ ಆಫ್ರಿಕಾ ವನಿತಾ ಟಿ20 ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

1-paris

Paris Olympics; ಅಲ್ಡ್ರಿನ್‌, ಅಂಕಿತಾ ಧ್ಯಾನಿಗೆ ಒಲಿಂಪಿಕ್ಸ್‌ ಟಿಕೆಟ್‌

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

1-eweweqw

Wrestling; ವಿನೇಶ್‌ ಫೋಗಾಟ್‌ ಗೆ ಸ್ವರ್ಣ ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.