ಜಯನಗರ ಉಪವಿಭಾಗದಲ್ಲಿ ರೌಡಿಗಳ ಪರೇಡ್‌


Team Udayavani, Jun 30, 2019, 3:00 AM IST

Udayavani Kannada Newspaper

ಬೆಂಗಳೂರು: ಕೊಲೆ, ದರೋಡೆ, ಸರಗಳ್ಳತನ ಸೇರಿ ಹಲವು ಅಪರಾಧ ಕೃತ್ಯಗಳಲ್ಲಿ ತೊಡಗಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿರುವ ರೌಡಿಶೀಟರ್‌ಗಳ ಪರೇಡ್‌ ನಡೆಸಿದ ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೋಚ್‌ ಸೆಪಟ್‌, ಅಪರಾಧ ಚಟುವಟಿಕೆಗಳಲ್ಲಿ ತೊಡಗದಂತೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಯಡಿಯೂರು ಕೆರೆಯ ವಾಜಪೇಯಿ ಮೈದಾನದಲ್ಲಿ ಜಯನಗರ ಉಪವಿಭಾಗದ ಐದು ಪೊಲೀಸ್‌ ಠಾಣೆಗಳ 145ಕ್ಕೂ ಹೆಚ್ಚು ರೌಡಿಶೀಟರ್‌ಗಳನ್ನು ಪರೇಡ್‌ ನಡೆಸಿದ ಅವರು, ಸಾರ್ವಜನಿಕರಿಗೆ ತೊಂದರೆ ಕೊಡುವುದು, ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವುದು, ಪ್ರಚೋದನೆ ನೀಡಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪರೇಡ್‌ನ‌ಲ್ಲಿ ಪ್ರತಿಯೊಬ್ಬ ರೌಡಿಯ ಪೂರ್ವಪರ ಪರಿಶೀಲನೆ ನಡೆಸಿದ ಅವರು, ಇಷ್ಟು ದಿನಗಳು ಅಪರಾಧ ಕೃತ್ಯಗಳಲ್ಲಿ ತೊಡಗಿದ್ದು ಸಾಕು. ಇನ್ಮುಂದೆ ಕುಟುಂಬದ ಜತೆ ಸಮಾಜದಲ್ಲಿ ಗೌರವಯುತವಾಗಿ ಬದುಕಿ. ಇಲ್ಲವಾದರೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬಿಸಿ ಮುಟ್ಟಿಸಿದರು.

ಅಲ್ಲದೆ, ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುವುದು ಸರಿಯಲ್ಲ. ಜನರಿಗೆ ಬೆದರಿಸಿ ಭಯದ ವಾತಾವರಣ ಸೃಷ್ಟಿಸುವುದು ಕಂಡು ಬಂದರೆ ಸುಮ್ಮನಿರುವುದಿಲ್ಲ. ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವುದು ಕಂಡು ಬಂದಲ್ಲಿ ಗೂಂಡಾ ಕಾಯ್ದೆ ಜಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮತ್ತೂಂದೆಡೆ ಪರೇಡ್‌ಗೆ ಗೈರಾದ ರೌಡಿಗಳ ಪಟ್ಟಿ ತಯಾರಿಸಿ. ಅಪರಾಧ ಹಿನ್ನೆಲೆಯುಳ್ಳ ಪ್ರತಿಯೊಬ್ಬರ ಚಲನವಲನಗಳ ಮೇಲೆ ನಿಗಾವಹಿಸಿ. ಜನರಿಗೆ ತೊಂದರೆ ಕೊಡುವುದು ಕಂಡು ಬಂದರೆ, ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ತಮ್ಮ ವಿಭಾಗದ ಪೊಲೀಸರಿಗೆ ಸೂಚಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.