28.79 ಲಕ್ಷ ರೂ. ಸಾಲ ವಿನಾಯ್ತಿ ನೀಡಿದ ಕೆನರಾ ಬ್ಯಾಂಕ್‌

ಒಂದೇ ದಿನದಲ್ಲಿ 70 ಪ್ರಕರಣ ಇತ್ಯರ್ಥ

Team Udayavani, Jun 30, 2019, 2:50 PM IST

30-June-30

ಸಾಗರ: ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕೆನರಾ ಬ್ಯಾಂಕ್‌ನ ಕ್ಷೇತ್ರೀಯ ಕಾರ್ಯಾಲಯದ ಅಧಿಕಾರಿಗಳನ್ನೊಳಗೊಂಡ ಲೋಕ ಅದಾಲತ್‌ ನಡೆಯಿತು.

ಸಾಗರ: ನಗರದ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕೆನರಾ ಬ್ಯಾಂಕ್‌ನ ಕ್ಷೇತ್ರೀಯ ಕಾರ್ಯಾಲಯ ಶನಿವಾರ ಏರ್ಪಡಿಸಿದ್ದ ಲೋಕ ಅದಾಲತ್‌ನಲ್ಲಿ ಒಂದೇ ದಿನದಲ್ಲಿ 70 ಪ್ರಕರಣಗಳು ಇತ್ಯರ್ಥಗೊಂಡಿವೆ.

ವಿವಿಧ ಯೋಜನೆಗಳಡಿ ಸಾಲ ಪಡೆದಿದ್ದು ಅವಧಿ ಮೀರಿದರೂ ಅದನ್ನು ತೀರಿಸದ 553 ಮಂದಿಗೆ ಲೋಕ ಅದಾಲತ್‌ ಮೂಲಕ ಪ್ರಕರಣವನ್ನು ಬಗೆಹರಿಸಿಕೊಳ್ಳುವಂತೆ ನೋಟಿಸ್‌ ನೀಡಲಾಗಿತ್ತು. ಈ ಪೈಕಿ 110 ಸಾಲಗಾರರು ಹಾಜರಾಗಿದ್ದು 70 ಸಾಲಗಾರರ ಪ್ರಕರಣ ರಾಜಿ ಸಂಧಾನದ ಮೂಲಕ ಬಗೆಹರಿದಿದೆ. ಒಟ್ಟು 28.79 ಲಕ್ಷ ರೂ.ದಷ್ಟು ಮೊತ್ತದ ವಿನಾಯ್ತಿಯನ್ನು ಸಾಲಗಾರರಿಗೆ ಬ್ಯಾಂಕ್‌ನ ವತಿಯಿಂದ ನೀಡಲಾಯಿತು.

ಈ ಸಂದರ್ಭದಲ್ಲಿ ಹಿರಿಯ ವಿಭಾಗದ ಪ್ರಧಾನ ಸಿವಿಲ್ ನ್ಯಾಯಾಧಿಧೀಶ ಜಿ. ರಾಘವೇಂದ್ರ ಮಾತನಾಡಿ, ಬ್ಯಾಂಕ್‌ಗಳಿಂದ ಸಾಲ ಪಡೆದವರು ನಿಗದಿತ ಅವಧಿಯಲ್ಲಿ ತೀರುವಳಿ ಮಾಡದೆ ಇದ್ದಾಗ ಬ್ಯಾಂಕ್‌ನವರು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದರೆ ಸಾಲಗಾರರು ಸಾಲದ ಮೊತ್ತದ ಜೊತೆಗೆ ಬಡ್ಡಿ, ನ್ಯಾಯಾಲಯದ ಖರ್ಚು ವೆಚ್ಚಗಳನ್ನು ಕೂಡ ಪಾವತಿಸಬೇಕಾಗುತ್ತದೆ. ಲೋಕ ಅದಾಲತ್‌ನಲ್ಲಿ ರಾಜಿ ಮಾಡಿಕೊಂಡರೆ ಸಾಲದ ಮೊತ್ತದಲ್ಲೂ ವಿನಾಯ್ತಿ ದೊರಕುತ್ತದೆ ಎಂದು ತಿಳಿಸಿದರು.

ಬಹುತೇಕ ಪ್ರಕರಣಗಳಲ್ಲಿ ಸಾಲಗಾರರಿಗೆ ನಿಗದಿತ ಅವಧಿಯಲ್ಲಿ ಸಾಲವನ್ನು ತೀರುವಳಿ ಮಾಡುವ ಉದ್ದೇಶವಿದ್ದರೂ ಅನಿವಾರ್ಯವಾಗಿ ಎದುರಾಗುವ ಕಷ್ಟ ಕಾರ್ಪಣ್ಯಗಳಿಂದ ಅದು ಸಾಧ್ಯವಾಗಿರುವುದಿಲ್ಲ. ಹೀಗಾಗಿ ಈ ಸಂಬಂಧ ನ್ಯಾಯಾಲಯದಲ್ಲಿ ವ್ಯಾಜ್ಯ ಎದುರಿಸುವುದಕ್ಕಿಂತ ರಾಜಿ ಮೂಲಕ ಪ್ರಕರಣವನ್ನು ಮುಕ್ತಾಯಗೊಳಿಸಿಕೊಳ್ಳುವುದು ಸೂಕ್ತ ಎಂದು ಸಲಹೆ ನೀಡಿದರು.

ನ್ಯಾಯಾಧೀಶರಾದ ಸೈಯದ್‌ ಅಫ್ರ್ರಾತ್‌ ಇಬ್ರಾಹಿಂ ಮಾತನಾಡಿ, ಇತರ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಯಾರ ಪರವಾಗಿ ತೀರ್ಪು ಬರುತ್ತದೆ ಎಂದು ಮೊದಲೇ ಹೇಳಲು ಸಾಧ್ಯವಿಲ್ಲ. ಆದರೆ ಬ್ಯಾಂಕ್‌ಗಳು ದಾಖಲಿಸುವ ಪ್ರಕರಣಗಳಲ್ಲಿ ತಾಂತ್ರಿಕವಾಗಿ ಯಾವುದೇ ಲೋಪ ಇಲ್ಲದಿದ್ದರೆ ಹೆಚ್ಚಿನ ಸಂದರ್ಭಗಳಲ್ಲಿ ಬ್ಯಾಂಕ್‌ ಗಳ ಪರವಾಗಿಯೇ ತೀರ್ಪು ಬರುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಸಾಲಗಾರರು ಸಾಧ್ಯವಾದಷ್ಟು ಬ್ಯಾಂಕ್‌ನವರು ವ್ಯಾಜ್ಯ ದಾಖಲಿಸುವ ಮುನ್ನವೇ ರಾಜಿ ಮಾಡಿಕೊಳ್ಳುವುದು ಸುರಕ್ಷಿತ ಕ್ರಮ ಎಂದು ತಿಳಿಸಿದರು.

ಕೆನರಾ ಬ್ಯಾಂಕ್‌ನ ವಿಭಾಗೀಯ ಪ್ರಬಂಧಕ ವಾಸುದೇವ ಮೊಗೇರ, ಸಾಗರ ಶಾಖೆಯ ಹಿರಿಯ ಪ್ರಬಂಧಕರಾದ ಎಚ್.ಎಸ್‌. ಪ್ರಭಾ, ಕಾರ್ಗಲ್ ಶಾಖೆಯ ಪ್ರಬಂಧಕ ರಮೇಶ್‌ ಎಚ್. ತಾಳಗುಪ್ಪ ಶಾಖೆಯ ಪ್ರಬಂಧಕ ಮಂಜುನಾಥ, ಆನಂದಪುರ ಶಾಖೆಯ ವಿನಾಯಕ, ಬ್ಯಾಂಕ್‌ನ ಅಧಿಕಾರಿಗಳಾದ ಎಸ್‌. ಸುರೇಶ್‌, ಶಿಲ್ಪನಾ, ವೈಶಾಲಿ, ವಕೀಲರಾದ ಕೆ.ಜಿ. ರಾಘವೇಂದ್ರ, ಸತೀಶ್‌ ಕುಮಾರ್‌, ವಿ. ಶಂಕರ್‌ ಇದ್ದರು.

ಟಾಪ್ ನ್ಯೂಸ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.