ಮತ್ತೆ ಬಜಾರ್‍ಗೆ ಬಂದ ಧನ್ವೀರ್‌

ಬಹದ್ದೂರ್‌ ಚೇತನ್‌ ಕಥೆ, ಭರಾಟೆ ನಿರ್ಮಾಪಕ ಸುಪ್ರೀತ್‌ ನಿರ್ಮಾಣ

Team Udayavani, Jul 1, 2019, 3:04 AM IST

dhanveer

ಸುನಿ ನಿರ್ದೇಶನದ “ಬಜಾರ್‌’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದ ನವ ಪ್ರತಿಭೆ ಧನ್ವೀರ್‌, ಆ ಚಿತ್ರದಲ್ಲಿ ಒಂದಷ್ಟು ಭರವಸೆ ಮೂಡಿಸಿದ್ದರು. ಪಕ್ಕಾ ಆ್ಯಕ್ಷನ್‌ ಸಿನಿಮಾ ಎನಿಸಿಕೊಂಡಿದ್ದ “ಬಜಾರ್‌’ ಚಿತ್ರ ಅವರ ನಿರೀಕ್ಷೆ ಮಟ್ಟ ತಲುಪಲಿಲ್ಲ. ಹಾಗಂತ, ಧನ್ವೀರ್‌ ಬೇಸರಿಸಿಕೊಳ್ಳಲಿಲ್ಲ. ಮತ್ತೂಂದು ಹೊಸತನದ ಕಥೆಗಾಗಿ ಎದುರು ನೋಡುತ್ತಿದ್ದರು.

ಈಗ ಅವರೊಂದು ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ಸದ್ಯಕ್ಕೆ ಅವರು ಆಯ್ಕೆ ಮಾಡಿಕೊಂಡಿರುವ ಕಥೆಯಲ್ಲಿ ಮನರಂಜನೆ ಹೆಚ್ಚಿದೆ. ಫ್ಯಾಮಿಲಿ ಎಂಟರ್‌ಟೈನ್‌ಮೆಂಟ್‌ ಚಿತ್ರ ಕೊಡುವ ಆಸೆಯಿಂದ ಧನ್ವೀರ್‌, ಈವರೆಗೆ ಬಂದ ಕಥೆಗಳನ್ನು ಪಕ್ಕಕ್ಕೆ ಸರಿಸಿ, ಈಗ ಪಕ್ಕಾ ಮನರಂಜನೆಯ ಕಥೆ ಹಿಡಿದು ಬಂದಿದ್ದಾರೆ. ಅಂದಹಾಗೆ, ಧನ್ವೀರ್‌ ಹೊಸ ಚಿತ್ರಕ್ಕೆ “ಬಹದ್ದೂರ್‌’ ಚೇತನ್‌ಕುಮಾರ್‌ ಅವರು ಕಥೆ ಬರೆದಿದ್ದಾರೆ.

ಇದರೊಂದಿಗೆ ಚಿತ್ರಕಥೆ ಮತ್ತು ಸಾಹಿತ್ಯವೂ ಇರಲಿದೆ. ಧನ್ವೀರ್‌ ಅವರಿಗಾಗಿಯೇ ಬರೆದ ಕಥೆ ಅದಾಗಿರುವುದರಿಂದ ಸ್ವತಃ ಧನ್ವೀರ್‌, ಆ ಕಥೆ ಇಷ್ಟಪಟ್ಟು, ಈಗ ಚಿತ್ರ ಮಾಡಲು ಸಜ್ಜಾಗಿದ್ದಾರೆ. ಇನ್ನು, ಈ ಚಿತ್ರವನ್ನು ಶ್ರೀಮುರಳಿ ಅಭಿನಯದ “ಭರಾಟೆ’ ಚಿತ್ರ ನಿರ್ಮಿಸಿರುವ ಸುಪ್ರೀತ್‌ ನಿರ್ಮಾಣ ಮಾಡುತ್ತಿರುವುದು ವಿಶೇಷ.

“ಬಹದ್ದೂರ್‌ ‘ ಚೇತನ್‌ ಅವರು ಈಗಾಗಲೇ ಒನ್‌ಲೈನ್‌ ಸ್ಟೋರಿ ಹೇಳಿದ್ದು, ಇಷ್ಟರಲ್ಲೇ ಸ್ಕ್ರಿಪ್ಟ್ ಪಕ್ಕಾ ಮಾಡಿಕೊಡಲಿದ್ದಾರೆ. ಸದ್ಯಕ್ಕೆ ಹೀರೋ, ಕಥೆ, ನಿರ್ಮಾಪಕರು ಪಕ್ಕಾ ಆಗಿದ್ದು, ನಿರ್ದೇಶನ ಯಾರು ಮಾಡಲಿದ್ದಾರೆ ಎಂಬುದಷ್ಟೇ ಬಾಕಿ ಉಳಿದಿದೆ. ನಾಯಕಿ ಸೇರಿದಂತೆ ಯಾರೆಲ್ಲಾ ತಂತ್ರಜ್ಞರು ಇರಲಿದ್ದಾರೆ ಎಂಬುದಕ್ಕೆ ಇಷ್ಟರಲ್ಲೇ ಮಾಹಿತಿ ಸಿಗಲಿದೆ.

ತಮ್ಮ ಎರಡನೇ ಚಿತ್ರದ ಕುರಿತು ಹೇಳಿಕೊಳ್ಳುವ ಧನ್ವೀರ್‌, “ನನ್ನ ಮೊದಲ ಚಿತ್ರದಲ್ಲಿ ನಾನು ಮಾಸ್‌ ಆಗಿ ಕಾಣಿಸಿಕೊಂಡಿದ್ದೆ. ಈ ಚಿತ್ರದಲ್ಲೂ ಮಾಸ್‌ ಎಲಿಮೆಂಟ್ಸ್‌ ಇದೆಯಾದರೂ, ಇದೊಂದು ಪಕ್ಕಾ ಮನರಂಜನಾತ್ಮಕ ಚಿತ್ರ. ಕುಟುಂಬ ಸಮೇತ ಬಂದು ನೋಡುವಂತಹ ಚಿತ್ರ ಇದಾಗಲಿದೆ.

ಇನ್ನು, ಈ ಚಿತ್ರದ ಪಾತ್ರಕ್ಕಾಗಿ ಒಂದಷ್ಟು ತಯಾರಿ ಮಾಡಿಕೊಳ್ಳಬೇಕಿದೆ. ಕನ್ನಡ ಮಾತ್ರವಲ್ಲ, ತೆಲುಗು ಭಾಷೆಯಲ್ಲೂ ನಟಿಸುವ ಆಸೆ ಇದೆ. ಲೇಟ್‌ ಆದರೂ ಪರವಾಗಿಲ್ಲ, ಒಳ್ಳೆಯ ಚಿತ್ರ ಕೊಡಬೇಕೆಂಬುದು ನನ್ನ ಗುರಿ’ ಎನ್ನುತ್ತಾರೆ ಧನ್ವೀರ್‌. ಎಲ್ಲವೂ ಅಂದುಕೊಂಡಂತೆ ನಡೆದರೆ ಧನ್ವೀರ್‌ ಹೊಸ ಚಿತ್ರಕ್ಕೆ ಆಗಸ್ಟ್‌ನಲ್ಲಿ ಚಾಲನೆ ಸಿಗಲಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.