ಪರಿಸರ ನಾಶಕ್ಕೆ ಮಾನವನ ದುರಾಸೆಯೇ ಕಾರಣ: ಶಾಂತವೀರ ಶ್ರೀ


Team Udayavani, Jul 1, 2019, 4:09 PM IST

1-July-35

ಹೊಸದುರ್ಗ: ದೇವಾಲಯ ಜೀರ್ಣೋದ್ಧಾರದ ವಾರ್ಷಿಕ ಮಹೋತ್ಸವದಲ್ಲಿ ಡಾ| ಶಾಂತವೀರ ಸ್ವಾಮೀಜಿ, ಈಶ್ವರಾನಂದಪುರಿ ಸ್ವಾಮೀಜಿ ಹಾಗೂ ಡಾ| ಪುರುಷೋತ್ತಮಾನಂದಪುರಿ ಸ್ವಾಮೀಜಿಯವರನ್ನು ಗೌರವಿಸಲಾಯಿತು.

ಹೊಸದುರ್ಗ: ಸೇವೆ ಮತ್ತು ನಿಷ್ಠೆಗೆ ಮತ್ತೂಂದು ಹೆಸರೇ ಆಂಜನೇಯಸ್ವಾಮಿ. ಸ್ವಾಮಿ ನಂಬಿದ ಭಕ್ತರನ್ನು ಎಂದಿಗೂ ಕೈಬಿಡುವುದಿಲ್ಲ ಎಂದು ಕುಂಚಿಟಿಗ ಮಹಾಸಂಸ್ಥಾನ ಮಠದ ಡಾ| ಶಾಂತವೀರ ಸ್ವಾಮೀಜಿ ಹೇಳಿದರು.

ತಾಲೂಕಿನ ಹಳೆಕುಂದೂರು ಗ್ರಾಮದಲ್ಲಿನ ಶ್ರೀ ಮದಾಂಜನೇಯ ಸ್ವಾಮಿ ದೇವಾಲಯ ಜೀರ್ಣೋದ್ಧಾರದ ವಾರ್ಷಿಕ ಮಹೋತ್ಸವದಲ್ಲಿ ಶ್ರೀಗಳು ಆರ್ಶೀವಚನ ನೀಡಿದರು. ಮಾನವನ ದುರಾಸೆ, ಸ್ವಾರ್ಥ ಬುದ್ಧಿಯಿಂದಾಗಿ, ಪ್ರಕೃತಿ ನಾಶವಾಗುತ್ತಿದೆ. ಇದರಿಂದ ಮಳೆಯೂ ಆಗುತ್ತಿಲ್ಲ. ಉತ್ತಮ ಬೆಳೆಯೂ ಸಿಗುತ್ತಿಲ್ಲ. ಇದು ಮನುಕುಲದ ಕಂಟಕಪ್ರಾಯವಾಗಿದೆ. ಮಳೆಯಿಲ್ಲದೇ ಜನರು ಕುಡಿಯುವ ನೀರಿನ ಹಾಹಾಕಾರಎದುರಿಸುತ್ತಿದ್ದಾರೆ.ಭಕ್ತರಿಗೆ ನೀರು ಕೊಡಲು ಸಾಧ್ಯವಾಗದ ಸ್ಥಿತಿ ಮಠ ಮಾನ್ಯಗಳಿಗೂ ಬಂದೊದಗಿದೆ. ತಾಲೂಕಿನಲ್ಲಿ ತೆಂಗು, ಅಡಿಕೆ ವಾಣಿಜ್ಯ ಬೆಳೆಗಳೂ ನೆಲ ಕಚ್ಚುತ್ತಿವೆ. ಮಾನವನ ದುರಾಸೆ ಹೀಗೆಯೇ ಮುಂದುವರೆದರೆ ಮುಂದಿನ ಪೀಳಿಗೆಗೆ ಭವಿಷ್ಯವೇ ಇಲ್ಲದಂತಾಗುತ್ತದೆ ಎಂದು ಎಚ್ಚರಿಸಿದರು.

ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಮಾತನಾಡಿ, ಕನಕ ಗುರುಪೀಠ ಹಾಗೂ ಆಂಜನೇಯಸ್ವಾಮಿಗೆ ಅವಿನಾಭಾವ ಸಂಬಂಧವಿದೆ. ಕನಕದಾಸರು ಮೋಹನ ತರಂಗಿಣಿ ಎಂಬ ಗ್ರಂಥವನ್ನು ಆಂಜನೇಯನ ಸನ್ನಿಧಿಯಾದ ಕದರಮಂಡಲಗಿಯಲ್ಲಿ ರಚನೆ ಮಾಡಿದ್ದಾರೆ. ಕಾಗಿನೆಲೆಯಲ್ಲಿ ಈಶ ಪದವಿಯ ಕಾಂತೇಶ, ಬ್ರಾಂತೇಶ ಎಂಬ ಆಂಜನೇಯಸ್ವಾಮಿ ದೇವಸ್ಥಾನಗಳಿರುವುದು ಇದಕ್ಕೆ ಸಾಕ್ಷಿ ಎಂದರು.

ಭಗೀರಥ ಪೀಠದ ಡಾ| ಪುರುಷೋತ್ತಮಾನಂದಪುರಿ ಸ್ವಾಮೀಜಿ ಮಾತನಾಡಿ, ತನ್ನ ದುರಾಸೆಯ ಫಲವನ್ನು ಮಾನವನೇ ಉಣ್ಣುತ್ತಿದ್ದಾನೆ. ಶ್ರೀ ಮದಾಂಜನೇಯ ಸ್ವಾಮಿಯ ಆಜ್ಞೆಯಂತೆ ಮೂರು ಪೀಠದ ಸ್ವಾಮೀಜಿಗಳು ದೇವಸ್ಥಾನದ ಕಾರ್ಯಕ್ರಮಕ್ಕೆ ಆಗಮಿಸಿದ್ದೇವೆ. ಭಕ್ತರೆಲ್ಲರೂ ಒಗ್ಗಟ್ಟಾಗಿರಬೇಕೆಂಬುದು ಸ್ವಾಮಿಯ ಅಪೇಕ್ಷೆಯಾಗಿದೆ ಎಂದು ಹೇಳಿದರು.

ಪ್ರಧಾನ ಅರ್ಚಕರಾದ ಟಿ.ಎಸ್‌. ವರದರಾಜು, ಬಿ.ಕೆ. ಶ್ರೀನಿವಾದ ಅಯ್ಯಂಗಾರ್‌, ಸತ್ಯನಾರಾಯಣ, ಶಮಂತ್‌, ವೆಂಕಟೇಶ್‌ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.