ಸಂಹಿತಾ ಸಿನಿ ಸಂಭ್ರಮ

ಕನ್ನಡ-ತಮಿಳಿನಲ್ಲಿ ಬಿಝಿ

Team Udayavani, Jul 3, 2019, 3:00 AM IST

Samhitha

ಮಾಡೆಲಿಂಗ್‌ ಎಂಬುದು ಚಿತ್ರರಂಗಕ್ಕೆ ನಟ-ನಟಿಯರಾಗಲು ಬಯಸುವಂಥವರಿಗೆ ಮೊದಲು ಮೆಟ್ಟಿಲಿದ್ದಂತೆ. ಮಾಡೆಲಿಂಗ್‌ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಅನೇಕ ನಟ-ನಟಿಯರು ನಂತರ ಚಿತ್ರರಂಗದಲ್ಲಿ ಭದ್ರವಾಗಿ ನೆಲೆಯೂರಿರುವ ಸಾಕಷ್ಟು ಉದಾಹರಣೆಗಳು ಕನ್ನಡ ಚಿತ್ರರಂಗದಲ್ಲೂ ಸಿಗುತ್ತದೆ. ಈಗ ಈ ಸಾಲಿಗೆ ಸಂಹಿತಾ ವಿನ್ಯಾ ಎನ್ನುವ ಅಂಥದ್ದೇ ಮತ್ತೂಂದು ಹೆಸರು ಸೇರ್ಪಡೆಯಾಗುತ್ತಿದೆ.

ಸುಮಾರು 3-4 ವರ್ಷಗಳಿಂದ ಮಾಡೆಲಿಂಗ್‌ ಲೋಕದಲ್ಲಿ ಸಕ್ರಿಯವಾಗಿರುವ ಸಂಹಿತಾ ವಿನ್ಯಾ, ಅನೇಕ ಜಾಹೀರಾತುಗಳು, ಕೆಲ ಕಿರುಚಿತ್ರಗಳಲ್ಲಿ ಅಭಿನಯಿಸುತ್ತಲೇ ಹಿರಿತೆರೆಗೆ ಕಾಲಿಟ್ಟ ಹುಡುಗಿ. ಆರಂಭದಲ್ಲಿ ಬೈರಾಜ್‌ ನಿರ್ದೇಶನದ “ಸೂತ್ರದಾರಿ’ ಚಿತ್ರದಲ್ಲಿ ಸಣ್ಣ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಸಂಹಿತಾ ವಿನ್ಯಾ, ಬಳಿಕ ಎ. ಮಂಜು ದೈವಜ್ಞ ನಿರ್ದೇಶನದ “ಗೌಡರ ದರ್ಬಾರ್‌’ ಚಿತ್ರದ ಪಾತ್ರಕ್ಕೂ ಬಣ್ಣ ಹಚ್ಚಿದರು.

“ಗೌಡರ ದರ್ಬಾರ್‌’ ಚಿತ್ರದ ಬಳಿಕ ಸಂಹಿತಾ ವಿನ್ಯಾಗೆ, ನಿಧಾನವಾಗಿ ಒಂದಷ್ಟು ಅವಕಾಶಗಳು ಹುಡುಕಿಕೊಂಡು ಬರಲು ಶುರುವಾದವು. ತಮ್ಮ ಚಿತ್ರರಂಗದ ಅನುಭವಗಳ ಬಗ್ಗೆ ಮಾತನಾಡುವ ಸಂಹಿತಾ ವಿನ್ಯಾ, “ಕನ್ನಡ ಚಿತ್ರರಂಗಕ್ಕೆ ಬಂದು ಸುಮಾರು ಎರಡು ವರ್ಷವಾಯ್ತು. ಈ ಎರಡು ವರ್ಷದಲ್ಲಿ ನಾನು ನಾಯಕಿಯಾಗಿ ಅಭಿನಯಿಸಿದ್ದ “ಹಾಲುತುಪ್ಪ’, “ಅಮೃತ ಘಳಿಗೆ’ ಎರಡು ಚಿತ್ರಗಳು ಬಿಡುಗಡೆಯಾಗಿವೆ.

ಇನ್ನೂ “ವಿಷ್ಣು ಸರ್ಕಲ್‌’, “ಸೀತಮ್ಮ ಬಂದಳು ಸಿರಿಮಲ್ಲಿಗೆ ತೊಟ್ಟು’, “ಗೌಡರ ದರ್ಬಾರ್‌’ ಚಿತ್ರಗಳು ರಿಲೀಸ್‌ಗೆ ರೆಡಿಯಾಗಿವೆ. ಇದರ ನಡುವೆಯೇ ತಮಿಳಿನಲ್ಲಿ “ಕಾದಲ್‌ ವಾನಮ್‌’ ಚಿತ್ರದಲ್ಲೂ ನಟಿಸುವ ಅವಕಾಶ ಸಿಕ್ಕಿತು. ಇಲ್ಲಿಯವರೆಗೆ ಅಭಿನಯಿಸಿರುವ ಪ್ರತಿಚಿತ್ರಗಳು ಕೂಡ ಒಂದೊಂದು ವಿಭಿನ್ನ ಅನುಭವ ಕೊಟ್ಟಿವೆ. ನಾನು ಪ್ರತಿ ಪಾತ್ರಗಳನ್ನೂ ಖುಷಿಯಿಂದ ನಿರ್ವಹಿಸಿದ್ದೇನೆ’ ಎನ್ನುತ್ತಾರೆ.

ಆದರೆ ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಕನ್ನಡ ಚಿತ್ರಗಳಿಗೆ ಇಲ್ಲಿಯ ನಟಿಯರಿಗಿಂತ ಪರಭಾಷಾ ನಟಿಯರಿಗೆ ಹೆಚ್ಚಿನ ಆದ್ಯತೆ ಸಿಗುತ್ತಿದೆ ಎನ್ನುವುದು ಸಂಹಿತಾ ವಿನ್ಯಾ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಮಾತನಾಡುವ ಸಂಹಿತಾ ವಿನ್ಯಾ “ಕನ್ನಡದಲ್ಲಿ ಇತ್ತೀಚೆಗೆ ಹೆಚ್ಚು ಹೆಚ್ಚು ಚಿತ್ರಗಳು ನಿರ್ಮಾಣವಾಗುತ್ತಿವೆ.

ಆದರೆ ಬಹುತೇಕ ಚಿತ್ರಗಳಲ್ಲಿ ಕನ್ನಡದ ನಟಿಯರಿಗೆ ಅವಕಾಶ ಸಿಗುತ್ತಿಲ್ಲ. ಇಲ್ಲಿನ ನಿರ್ಮಾಪಕರು, ನಿರ್ದೇಶಕರು ಅವಕಾಶ ಕೊಟ್ಟರೆ ಇನ್ನಷ್ಟು ಕನ್ನಡದ ನಟಿಯರು ಬೆಳಕಿಗೆ ಬರುತ್ತಾರೆ. ನನಗೂ ಕೂಡ ಬೇರೆ ಭಾಷೆಗಳಲ್ಲಿ ಚಿತ್ರಗಳ ಆಫ‌ರ್ ಬರುತ್ತಿವೆ. ಆದ್ರೆ ಕನ್ನಡ ಚಿತ್ರರಂಗದಲ್ಲೇ ಗುರುತಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ, ಇಲ್ಲೇ ಹೆಚ್ಚು ಗಮನ ಕೊಡುತ್ತಿದ್ದೇನೆ’ ಎನ್ನುತ್ತಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.