ಅರಣ್ಯಗಳ್ಳರ ಮೇಲೆ ಐಪಿಸಿ ಸೆಕ್ಷನ್‌ನಡಿ ದೂರು ದಾಖಲಿಸಿ


Team Udayavani, Jul 3, 2019, 2:21 PM IST

hv-tdy-3..

ಬ್ಯಾಡಗಿ: ಹಿರೇಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಕೋ ಕ್ಲಬ್‌ನ ವತಿಯಿಂದ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮುಖ್ಯಶಿಕ್ಷಕ ಎಂ.ಎನ್‌.ಚಳಗೇರಿ ಉದ್ಘಾಟಿಸಿದರು.

ಬ್ಯಾಡಗಿ: ಸಮೃದ್ಧ ಅರಣ್ಯಗಳ ನಾಶಕ್ಕೆ ಮನುಷ್ಯನ ದುರಾಸೆಯೇ ಕಾರಣ. ಆದರೆ, ಸರ್ಕಾರಗಳಿಂದ ಇಂಥ ಮನಸ್ಥಿತಿ ಬದಲಾವಣೆ ಅಸಾಧ್ಯ. ಕನಿಷ್ಟ ಕಾನೂನಿನ ಬಿಗಿಯಲ್ಲಾದರೂ ಅರಣ್ಯಗಳ್ಳರನ್ನು ಮಟ್ಟಹಾಕಬೇಕು, ಐಪಿಸಿ ಸೆಕ್ಷನ್‌ನಡಿ ದೂರು ದಾಖಲಿಸಿಕೊಂಡು ಶಿಕ್ಷೆಯಾಗುವಂತಹ ವ್ಯವಸ್ಥೆ ಜಾರಿಯಾದಲ್ಲಿ ಮಾತ್ರ ಪರಿಣಾಮಕಾರಿಯಾಗಲು ಸಾಧ್ಯ ಎಂದು ಮುಖ್ಯಶಿಕ್ಷಕ ಎಂ.ಎನ್‌.ಚಳಗೇರಿ ಅಭಿಪ್ರಾಯ ವ್ಯಕ್ತಪಡಿಸಿದರು.

ತಾಲೂಕಿನ ಹಿರೇಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಕೋ ಕ್ಲಬ್‌ನ ವತಿಯಿಂದ ಜರುಗಿದ ನಡೆದ ವಿಶ್ವಪರಿಸರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೇಶದ ಸದ್ಯದ ಪರಿಸ್ಥಿತಿ ಅವಲೋಕಿಸಿ ನಮ್ಮಿಂದ ಕಿಂಚಿತ್ತಾದರೂ ದೇಶಕ್ಕೆ ಅಥವಾ ಸಮಾಜಕ್ಕೆ ಅನುಕೂಲವಾಗುವಂತಹ ಸಾರ್ವತ್ರಿಕ ಯೋಚನೆಗಳನ್ನು ಮಾಡಲು ಯಾರೂ ಸಿದ್ಧರಿಲ್ಲ. ಜಾರಿಯಲ್ಲಿರುವ ಒಟ್ಟು ಕಾನೂನುಗಳ ಪೈಕಿ ಶೇ.17 ರಷ್ಟು ಮಾತ್ರ ಪಾಲನೆಯಾಗುತ್ತಿದೆ. ಕಾನೂನು ವಿರೋಧಿ ಚಟುವಟಿಕೆಗಳಿಂದ ದಾಖಲಿಸಲ್ಪಟ್ಟ ದೂರುಗಳಿಂದ ನ್ಯಾಯಾಲಯಗಳು ತುಂಬಿ ತುಳುಕುತ್ತಿವೆ. ಕಾನೂನಿನ ಬಿಗಿ ಹಿಡಿತವಿಲ್ಲದಿದ್ದರೇ ಭಾರತದಂತಹ ರಾಷ್ಟ್ರದಲ್ಲಿ ಎನೊಂದು ವ್ಯವಸ್ಥೆಯನ್ನು ಸುಗಮಗೊಳಿಸಲು ಸಾಧ್ಯವಿಲ್ಲ. ಹೀಗಿರುವಾಗ ಬಿಗಿಯಾದ ಕಾನೂನಿಲ್ಲದೇ ಅರಣ್ಯಗಳನ್ನು ಕಡಿವಾಣ ಹಾಕಲು ಸಾಧ್ಯವಿಲ್ಲ ಎಂದರು.

ಹೆಚ್ಚಾಗುತ್ತಿರುವ ಅರಣ್ಯ ನಾಶ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದಿಂದಲೂ ಕಟ್ಟುನಿಟ್ಟಿನ ಕ್ರಮಗಳಾಗಬೇಕಾಗಿದೆ, ಸುತ್ತಲಿನ ಪರಿಸರವನ್ನು ಕಾಯ್ದು ಕೊಳ್ಳುವುದಷ್ಟೇ ಅಲ್ಲ, ಜೊತೆಗೆ ಗಿಡಮರಗಳನ್ನು ಬೆಳೆಸುವುದು, ಪಾಲನೆ ಪೋಷಣೆ ಮಾಡುವುದು ನಮ್ಮೆಲ್ಲರ ಹೊಣೆಯಾಗಬೇಕು. ಅರಣ್ಯ ಸಂರಕ್ಷಣೆ ಎಂಬುದು ಕೇವಲ ಘೋಷಣೆಗೆ ಸೀಮಿತವಾಗುತ್ತಿದ್ದು, ನಿತ್ಯವೂ ನಡೆಯುತ್ತಿರುವ ಮರಗಳ ಮಾರಣ ಹೋಮ ಮಾತ್ರ ಸ್ಥಗಿತಗೊಂಡಿಲ್ಲ. ದೇಶದ ಜನರು ಪ್ರಾಕೃತಿಕ ಸಂಪತ್ತಿನ ಬಗ್ಗೆ ತಿರಸ್ಕಾರ ಮನೋಭಾವನೆ ತೋರುತ್ತಿರುವುದು ತರವಲ್ಲ ಎಂದರು.

ಎಸ್‌ಡಿಎಂಸಿ ಸದಸ್ಯ ವೀರಣ್ಣ ಮಾತನಾಡಿ, ಜಗತ್ತಿನ ಹಲವಾರು ನಗರಗಳಲ್ಲಿ ಇಂದು ನೀರಿಲ್ಲದೇ ಜನರು ಸಾವನ್ನಪ್ಪುತ್ತಿದ್ದಾರೆ. ಅಂತರ್ಜಲ ಮಟ್ಟ ಕುಸಿತಕ್ಕೆ ಅರಣ್ಯಗಳ ನಾಶವೇ ಕಾರಣವಾಗಿದೆ. ಅದರಲ್ಲಿ ಬೃಹತ್‌ ಮರಗಳ ಮಾರಣಹೋಮ ಪ್ರಮುಖ ಕಾರಣವಾಗಿದ್ದು, ಅಭಿವೃದ್ಧಿ ಹೆಸರಿನಲ್ಲಿ ಹೀನಕೃತ್ಯ ಮಾಡುವುದು ನಿಲ್ಲಬೇಕು. ಇತ್ತೀಚಿನ ತಾಪಮಾನ ಶೇ. 44ರ ಗಡಿ ದಾಟುತ್ತಿದ್ದು, ಇಂದು ಅಪಾಯದ ಮುನ್ಸೂಚನೆ. ನೂರಾರು ವರ್ಷಗಳಿಂದ ಹಸಿರಾಗಿದ್ದ ವಾತಾವರಣ ಬರಡಾಗುತ್ತಿದೆ. ಮನೆಗೊಂದು ಸಸಿ ನೆಡುವ ಮೂಲಕ ಪರಿಸರದ ಸಮತೋಲನ ಕಾಪಾಡಬೇಕಿದೆ ಎಂದರು.

ಇದೇ ಸಂದರ್ಭದಲ್ಲಿ ಶಾಲೆಯ ಆವರಣದಲ್ಲಿ ಸುಮಾರು 25 ಕ್ಕೂ ಹೆಚ್ಚು ಚೆರ್ರಿ ಗಿಡಗಳ ತೋಟದ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಎಸ್‌ಡಿಎಂಸಿ ಸದಸ್ಯ ಹುಚ್ಚಪ್ಪ, ಊರಿಯ ಮುಖಂಡರಾದ ಗಣೇಶಣ್ಣ ಬಣಕಾರ, ಮಂಜಪ್ಪ ದಿಡಗೂರ, ಗಣೇಶಣ್ಣ ಚಿಕ್ಕಳ್ಳಿ, ಭಾವಲಿಂಗಯ್ಯ ಹಿರೇಮಠ, ಶಿಕ್ಷಕರಾದ ಅಶೋಕ ನಾಯಕ, ಶಿವಯೋಗಿ ರೂಗಿ, ಗಂಗಾಧರ ಬಡಂಕರ, ಎಚ್.ಭಜಂತ್ರಿ, ಪರಮೇಶ ಉಪ್ಪಣಸಿ ಇನ್ನಿತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.