ಧೋನಿಗೂ ಅಂತಿಮ ಪಂದ್ಯವೇ?

ಭಾರತದ ಕೊನೆಯ ವಿಶ್ವಕಪ್‌ ಪಂದ್ಯ

Team Udayavani, Jul 4, 2019, 5:56 AM IST

MS

ಬರ್ಮಿಂಗ್‌ಹ್ಯಾಮ್‌: ವಿಶ್ವಕಪ್‌ ವಿಜೇತ ಭಾರತ ತಂಡದ ನಾಯಕನಾಗಿ, ಹಲವಾರು ಪಂದ್ಯಗಳಲ್ಲಿ ಟೀಮ್‌ ಇಂಡಿಯಾವನ್ನು ಯಶಸ್ವಿಯಾಗಿ ಗೆಲ್ಲಿಸಿ ಇದೀಗ ಸಾಮಾನ್ಯ ಆಟಗಾರನಾಗಿ ವಿಶ್ವಕಪ್‌ ಆಡುತ್ತಿರುವ ಮಹೇಂದ್ರ ಸಿಂಗ್‌ ಧೋನಿ ನಿವೃತ್ತಿ ಸಮೀಪಿಸಿದ್ದಾರೆಂಬುದು ಎಲ್ಲರಿಗೂ ಗೊತ್ತು. ಈ ವಿಶ್ವಕಪ್‌ನಲ್ಲಿ ಭಾರತ ಆಡಲಿರುವ ಕೊನೆಯ ಪಂದ್ಯ ಧೋನಿಯ ಕೊನೆಯ ಪಂದ್ಯವಾಗುವ ಸಾಧ್ಯತೆ ಇದೆ. ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ಈ ವಿಷಯವನ್ನು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಸ್ಮರಣೀಯ ವಿದಾಯ?
ಪ್ರಸಕ್ತ ವಿಶ್ವಕಪ್‌ ಕೂಟದ ಲೀಗ್‌ ಹಂತದ ಪಂದ್ಯದಲ್ಲಿ ಭಾರತ ಪ್ರಚಂಡ ಪ್ರದರ್ಶನ ನೀಡಿ ಸೆಮಿಫೈನಲ್‌ ಹಂತಕ್ಕೆ ತಲುಪಿದೆ. ಒಂದು ವೇಳೆ ಭಾರತ ಸೆಮಿಫೈನಲ್‌ನಲ್ಲಿ ಸೋತರೆ ಧೋನಿಗೆ ಅದೇ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗಿರಲಿದೆ ಎನ್ನಲಾಗಿದೆ ಅಥವಾ ಭಾರತ ಫೈನಲ್‌ಗೆ ಪ್ರವೇಶಿಸಿ ಅಲ್ಲಿ ಕಪ್‌ ಗೆದ್ದರೆ ಧೋನಿಗೆ ಅದು ಅವಿಸ್ಮರಣೀಯ ವಿದಾಯವಾಗುವ ಸಾಧ್ಯತೆಯೂ ಇದೆ. 2011ರಲ್ಲಿ ಭಾರತ ಕಪ್‌ ಗೆದ್ದಾಗ ಕ್ರಿಕೆಟ್‌ ದಿಗ್ಗಜ ಸಚಿನ್‌ ತೆಂಡುಲ್ಕರ್‌ಗೆ ಅದು ಸ್ಮರಣೀಯ ವಿದಾಯವಾಗಿದ್ದನ್ನು ಸ್ಮರಿಸಬಹುದು.

“ಧೋನಿ ವಿದಾಯ ಹೇಳುವ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಇಲ್ಲ. ಯಾರು ಕೂಡ ನಿವೃತ್ತಿ ಆಗಿ ಎಂದು ಅವರಿಗೆ ಹೇಳಿಲ್ಲ. ಆದರೆ ವಿಶ್ವಕಪ್‌ ಬಳಿಕ ಅವರು ತಂಡದಲ್ಲಿ ಮುಂದುವರಿಯುವ ಸಾಧ್ಯತೆ ಇಲ್ಲ’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ನೂತನ ಆಯ್ಕೆ ಸಮಿತಿ
ಸದ್ಯದಲ್ಲೇ ಬಿಸಿಸಿಐಗೆ ಹೊಸ ಆಯ್ಕೆ ಸಮಿತಿ ನೇಮಕವಾಗಲಿದೆ. ಆಸ್ಟ್ರೇಲಿಯ ಆತಿಥ್ಯದ ಮುಂಬರುವ ಟಿ20 ವಿಶ್ವಕಪ್‌ ಗಮನದಲ್ಲಿರಿಸಿಕೊಂಡು ಹೊಸ ಬದಲಾವಣೆ ತರುವ ಸಾಧ್ಯತೆ ಇದೆ. 2017ರಲ್ಲೇ ಧೋನಿ ನಿವೃತ್ತಿಯ ಕುರಿತಂತೆ ಚರ್ಚೆ ಆಗಿತ್ತು. ಬಳಿಕ ಧೋನಿ ಮುಂದಿನ 2 ವರ್ಷ ಕ್ರಿಕೆಟ್‌ ಆಡುವ ಇಂಗಿತ ವ್ಯಕ್ತಪಡಿಸಿ ತಂಡದಲ್ಲಿ ಮುಂದುವರಿದಿದ್ದರು. ಸದ್ಯ ಧೋನಿ ವಿಶ್ವಕಪ್‌ನಲ್ಲಿ 223 ರನ್‌ ಬಾರಿಸಿದ್ದರೂ ನಿಧಾನ ಗತಿಯ ಆಟದಿಂದ ಟೀಕೆಗೆ ಗುರಿಯಾಗಿದ್ದಾರೆ.

ರಕ್ತ ಸುರಿಸಿದ್ದ ಧೋನಿ!
ಇಂಗ್ಲೆಂಡ್‌ ವಿರುದ್ಧದ ವಿಶ್ವಕಪ್‌ ಪಂದ್ಯದಲ್ಲಿ ಭಾರತ ಸೋಲು ಅನುಭವಿಸಿದ್ದಕ್ಕೆ ಧೋನಿಯ ನಿಧಾನ ಗತಿಯ ಆಟವೇ ಕಾರಣ ಎಂದು ಟೀಕಿಸಲಾಗಿತ್ತು. ಆದರೆ ಧೋನಿ ಆ ಪಂದ್ಯದಲ್ಲಿ ರಕ್ತ ಸುರಿಸಿಕೊಂಡು ಆಡಿದ್ದರು ಎನ್ನುವುದಕ್ಕೆ ಸಾಕ್ಷಿಯಾಗಿರುವ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಧೋನಿ ತನ್ನ ಹೆಬ್ಬೆರಳಿನಿಂದ ಬಂದ ರಕ್ತವನ್ನು ಹೀರಿ ಹೊರಕ್ಕೆ ಉಗಿಯುತ್ತಿರುವ ಫೋಟೋ ಇದಾಗಿದೆ.

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.