ಬಂಟರ ಸಂಘ ಕುರ್ಲಾ-ಭಾಂಡೂಪ್ : ವೈದ್ಯಕೀಯ ಶಿಬಿರ
Team Udayavani, Jul 4, 2019, 4:25 PM IST
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯು ಆರಂಭದಿಂದಲೇ ಉತ್ತಮ ಸಮಾಜಪರ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಸಮಾಜ ಬಾಂಧವರ ಪ್ರೀತಿಗೆ ಪಾತ್ರವಾಗಿದೆ. ಪ್ರಸ್ತುತ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಮ್ಯಾ ಉದಯ್ ಶೆಟ್ಟಿ ಅವರ ಮಾರ್ಗದರ್ಶನ ಹಾಗೂ ಸಮಿತಿಯ ಪದಾಧಿಕಾರಿಗಳ ಸಹಕಾರದೊಂದಿಗೆ ಉಚಿತ ಕ್ಯಾನ್ಸರ್ ತಪಾಸಣೆ, ಚರ್ಮ ರೋಗ, ಕಣ್ಣು, ಕೂದಲು ಉದುರುವಿಕೆ ಇತ್ಯಾದಿ ಸ್ತ್ರೀ ಸಂಬಂಧಿ ರೋಗಗಳ ತಪಾಸಣಾ ಶಿಬಿರವನ್ನು ಆಯೋಜಿಸಿದ್ದು ಸ್ತುತ್ಯರ್ಹ. ಕ್ಯಾನ್ಸರ್ ಇನ್ನಿತರ ರೋಗಗಳ ಬಗ್ಗೆ ತಪಾಸಣೆ ನಡೆಸುವುದಕ್ಕೆ ಸ್ತ್ರೀಯರು ನಿರ್ಲಕ್ಷÂ ವಹಿಸುತ್ತಾರೆ. ಆದರೆ ಇಂತಹ ಬೇಜವಾಬ್ದಾರಿ ಎಂದಿಗೂ ಮಾಡದೆ ಸಂಶಯವಿದ್ದಲ್ಲಿ ನಿಯಮಿತವಾಗಿ ತಜ್ಞ ವೈದ್ಯರ ಬಳಿ ತೆರಳಿ ಸಂಕೋಚಪಡದೆ ತಪಾಸಣೆಗೈದು ಸೂಕ್ತ ಚಿಕಿತ್ಸೆ ಮಾಡಿಸಿಕೊಳ್ಳಬೇಕು. ಕ್ಯಾನ್ಸರ್ನಂತಹ ಮಾರಣಾಂತಿಕ ರೋಗಗಳ ಬಗ್ಗೆ ನಿರ್ಲಕ್ಷÂ ಸಲ್ಲದು. ಇದರ ಮುಂಜಾಗ್ರತೆ ಅತ್ಯಗತ್ಯವಾಗಿದೆ ಎಂದು ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್. ಹೆಗ್ಡೆ ನುಡಿದರು.
ಜೂ. 30 ರಂದು ವಿಕ್ರೋಲಿ ಪೂರ್ವದ ವಿಕೇಸ್ ಇಂಗ್ಲಿಷ್ ಹೈಸ್ಕೂಲ್ ಸಭಾಗೃಹದಲ್ಲಿ ಬಂಟರ ಸಂಘ ಮುಂಬಯಿ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಕ್ಯಾನ್ಸರ್ ಮತ್ತು ಸ್ತ್ರೀ ಸಂಬಂಧಿ ರೋಗಗಳ ಬಗ್ಗೆ ಜಾಗೃತಿ ಹಾಗೂ ಮಾಹಿತಿ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಸ್ಥಳೀಯ ಸಮಿತಿಯ ಕಾರ್ಯವೈಖರಿಯನ್ನು ಅಭಿನಂದಿಸಿದರು.
ಪ್ರಾರಂಭದಲ್ಲಿ ಬಂಟರ ಸಂಘ ಮುಂಬಯಿ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಮ್ಯಾ ಉದಯ್ ಶೆಟ್ಟಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ. ಇಂದಿನ ವೈಜ್ಞಾನಿಕ ಯುಗದಲ್ಲಿ ನೆಮ್ಮದಿಯ ಜೀವನ ನಡೆಸಬೇಕಾದರೆ, ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಮಾತ್ರವಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಗಮನ ನೀಡಬೇಕು. ಆರೋಗ್ಯವೇ ಭಾಗ್ಯ ಎನ್ನುವ ಮಾತಿನಂತೆ ನಾವು ಕೇವಲ ಅನಾರೋಗ್ಯವಿದ್ದಾಗ ಮಾತ್ರ ಆಸ್ಪತ್ರೆಗೆ ತೆರಳಿ ತಪಾಸಣೆಯೊಂದಿಗೆ ಚಿಕಿತ್ಸೆ ಮಾಡುವ ಬದಲು ಸಮಯ ಸಮಯಕ್ಕೆ ಸರಿಯಾಗಿ ಸ್ತ್ರೀ ಸಂಬಂಧಿ ರೋಗಗಳ ಬಗ್ಗೆ ತಜ್ಞ ವೈದ್ಯರ ಬಳಿ ತೆರಳಿ ತಪಾಸಣೆಗೈದು ಮಾಹಿತಿ ಪಡೆಯಬೇಕು. ಈ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸಲು ಇಂತಹ ಶಿಬಿರವನ್ನು ಆಯೋಜಿಸಿದ್ದೇವೆ. ಸಮಿತಿಯ ಸರ್ವರ ಸಹಕಾರ, ಪ್ರೋತ್ಸಾಹದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ಸ್ಫೂರ್ತಿಯಾಗುತ್ತದೆ. ಸಮಾಜ ಬಾಂಧವರೆಲ್ಲರೂ ಇದರ ಸದುಪಯೋಗವನ್ನು ಪಡೆಯಬೇಕು ಎಂದರು.
ಕಾರ್ಯಕ್ರಮವು ವಿಕ್ರೋಲಿ ಪಶ್ಚಿಮ ಕೈಲಾಸ್ ಕಾಂಪ್ಲೆಕ್ಸ್ನಲ್ಲಿ ಕಳೆದ 25 ವರ್ಷಗಳಿಂದ ಜನಪರ ಕಾರ್ಯಗಳ ಮುಖೇನ ಜನಮನ್ನಣೆ ಪಡೆದಿರುವ ವಸಂತ ಮೆಮೋರಿಯಲ್ ಟ್ರಸ್ಟ್ ಆಶ್ರಯದಲ್ಲಿ ಟ್ರಸ್ಟ್ನ ಸಂಚಾಲಕಿ ಜಯಲಕ್ಷ್ಮೀ ಕೃಷ್ಣನ್ ಇವರು ವಿವಿಧ ರೋಗಗಳ ಬಗ್ಗೆ ನ್ಯೂನತೆ ಮತ್ತು ಚಿಕಿತ್ಸೆಯ ವಿಧಾನಗಳನ್ನು ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಪ್ರಸಿದ್ಧ ವೈದ್ಯೆ ಡಾ| ಗೀತಾಂಜಲಿ ಅಮೀನ್ ಅವರು ಕ್ಯಾನ್ಸರ್ ಇನ್ನಿತರ ರೋಗಗಳ ಬಗ್ಗೆ ವಿಶೇಷ ಮಾಹಿತಿ ಮತ್ತು ಚಿಕಿತ್ಸೆಗಳ ಬಗ್ಗೆ ಉಪನ್ಯಾಸ ನೀಡಿದರು. ಚರ್ಮ, ಕಣ್ಣು, ಕೂದಲು ಉದುರುವಿಕೆ ಮತ್ತು ಕ್ಯಾನ್ಸರ್ ಜಾಗೃತಿ ಶಿಬಿರದಲ್ಲಿ ಡಾ| ವರ್ದಿತ್ ಹೆಗ್ಡೆ, ಡಾ| ಸೌಮ್ಯಾ ವರ್ದಿತ್ ಹೆಗ್ಡೆ, ಡಾ| ಪೂಜಾ ಹೆಗ್ಡೆ, ಡಾ| ಪಲ್ಲವಿ ಶೆಟ್ಟಿ, ಡಾ| ಗೀತಾಂಜಲಿ ಅಮೀನ್, ಡಾ| ಪ್ರಜಕ್ತಾ ರಾವ್ ಮೊದಲಾದವರು ಸಹಕರಿಸಿದರು.
ವೇದಿಕೆಯಲ್ಲಿ ಬಂಟರ ಸಂಘ ಮಹಿಳಾ ವಿಭಾಗದ ಜತೆ ಕೋಶಾಧಿಕಾರಿ ರತ್ನಾ ಪಿ. ಶೆಟ್ಟಿ, ಬಂಟರ ಸಂಘ ಮುಂಬಯಿ ಕುರ್ಲಾ-ಭಾಂಡೂಪ್ ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಸಂಗೀತಾ ಸಿ. ಶೆಟ್ಟಿ, ಸೇರಿದಂತೆ ಪದಾಧಿಕಾರಿಳಾದ ಅಮೃತಾ ಶೆಟ್ಟಿ, ಡಾ| ಪಲ್ಲವಿ ಶೆಟ್ಟಿ, ವೀಣಾ ಶೆಟ್ಟಿ, ಸರೋಜಿನಿ ಶೆಟ್ಟಿ, ವಿಜೇಂದ್ರ ಶೆಟ್ಟಿ, ನಿಕಟಪೂರ್ವ ಕಾರ್ಯಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಬೆಳ್ಳಂಪಳ್ಳಿ, ನಿಕಟಪೂರ್ವ ಕಾರ್ಯಾಧ್ಯಕ್ಷೆ ಸರೋಜಾ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ತಾರಾನಾಥ ಶೆಟ್ಟಿ, ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷೆ ಕೃಷಿ¡ ಎಂ. ಶೆಟ್ಟಿ, ಭರತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಉದಯ್ ಶೆಟ್ಟಿ ಪೇಜಾವರ, ನವೀನ್ ಶೆಟ್ಟಿ ಇನ್ನಬಾಳಿಕೆ, ಸೀತಾರಾಮ್ ಶೆಟ್ಟಿ, ಹರೀಶ್ ಶೆಟ್ಟಿ, ಪ್ರವೀಣ್ ಕೆ. ಶೆಟ್ಟಿ, ಶರಣ್ ಯು. ಶೆಟ್ಟಿ, ಕುಸುಮಾ ಚಂದ್ರಶೇಖರ್ ಪಾಲೆತ್ತಾಡಿ, ವಿನುತಾ ಶೆಟ್ಟಿ, ಮಲ್ಲಿಕಾ ಶೆಟ್ಟಿ, ಜ್ಯೋತಿ ಶೆಟ್ಟಿ, ಸರಿತಾ ಶೆಟ್ಟಿ, ಯಶೋದಾ ಶೆಟ್ಟಿ, ಶಾಂತಾ ಎನ್. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದು ಸಹಕರಿಸಿದರು. ರಂಗನಿರ್ದೇಶಕ ನಾರಾಯಣ ಶೆಟ್ಟಿ ನಂದಳಿಕೆ ನಿರ್ವಹಿಸಿದರು. ಸಂಗೀತಾ ಎ. ಶೆಟ್ಟಿ ವಂದಿಸಿದರು.
ವಿಕ್ರೋಲಿ ಪರಿಸರದ ನಮ್ಮ ಸಂಘದಲ್ಲಿ ತುಳು-ಕನ್ನಡಿಗರಿಗಾಗಿ ಉತ್ತಮ ಕಾರ್ಯಗಳು ನಿರಂತರ ನಡೆಯುತ್ತಿರಲಿ. ನಮ್ಮ ಸಹಕಾರ, ಪ್ರೋತ್ಸಾಹ ಸದಾಯಿರಲಿ. ರೋಗಮುಕ್ತ ಆರೋಗ್ಯವಂತ ಸಮಾಜ ನಮ್ಮದಾಗಲಿ. ನಾಗರಿಕರಿಗೆ ರಕ್ಷಣೆ ನೀಡುವುದು ದೇಶ ಆಳುವವರ ಕರ್ತವ್ಯವೂ ಹೌದು. ಮಹಿಳೆಯರು ಆರೋಗ್ಯದೆಡೆಗೆ ಹೆಚ್ಚಿನ ಗಮನ ಹರಿಸಬೇಕು. ಸಂಸ್ಕೃತಿ-ಸಂಸ್ಕಾರಗಳ ಉಳಿವಿನೊಂದಿಗೆ ಮಹಿಳೆಯರು ಕುಟುಂಬ ಸದಸ್ಯರ ಆರೋಗ್ಯದೊಂದಿಗೆ ತಮ್ಮ ಆರೋಗ್ಯ ಕಾಪಾಡುವತ್ತ ಮುಂದಾಗಬೇಕು
– ಶ್ಯಾಮ್ಸುಂದರ್ ಶೆಟ್ಟಿ (ಅಧ್ಯಕ್ಷರು: ವಿಕ್ರೋಲಿ ಕನ್ನಡ ಸಂಘ).
ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಮ್ಯಾ ಉದಯ್ ಶೆಟ್ಟಿ ಅವರ ನೇತೃತ್ವದಲ್ಲಿ ಸಮಾಜಪರ ಉತ್ತಮ ಕಾರ್ಯಕ್ರಮಗಳು ನಡೆಯುತ್ತಿದ್ದು, ಪ್ರತಿಯೊಂದು ಕಾರ್ಯಕ್ರಮಕ್ಕೂ ಎಲ್ಲರ ಸಹಕಾರ ಅಗತ್ಯ. ಪ್ರತಿಯೊಬ್ಬರೂ ತಮ್ಮಲ್ಲಿ ಯಾವುದೇ ಕಾಯಿಲೆಗಳ ಮುನ್ಸೂಚನೆ ಕಂಡು ಬಂದಲ್ಲಿ ಅದನ್ನು ನಿರ್ಲಕ್ಷಿಸದೆ ಕೂಡಲೇ ಸಂಬಂಧಿತ ತಜ್ಞ ವೈದ್ಯರನ್ನು ಭೇಟಿಯಾಗಿ ಚಿಕಿತ್ಸೆ ಪಡೆಯಬೇಕು
– ಸಿಎ ವಿಶ್ವನಾಥ ಶೆಟ್ಟಿ (ಕಾರ್ಯಾಧ್ಯಕ್ಷರು: ಬಂಟರ ಸಂಘ ಕುರ್ಲಾ-ಭಾಂಡೂಪ್).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ
Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು
Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ
Desi Swara: ಮಸ್ಕತ್- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ
Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.