ಯಂಗ್ಮೆನ್ಸ್ ಭೋವಿ ಅಸೋಸಿಯೇಶನ್ ವತಿಯಿಂದ ಚಲನಚಿತ್ರ ಪ್ರದರ್ಶನ
Team Udayavani, Jul 6, 2019, 4:53 PM IST
ಮುಂಬಯಿ:ಯಂಗ್ಮೆನ್ಸ್ ಭೋವಿ ಅಸೋಸಿಯೇಶನ್ ಮುಂಬಯಿ ಇದರ ವತಿಯಿಂದ ಜೂ. 30ರಂದು ಸಂಜೆ ಚಿದಾನಂದ ಉದ್ಯಾವರ ಅವರು ರಚಿಸಿ, ನಿರ್ದೇಶಿಸಿರುವ “ನಿಲಾವುಂದೆ ಬೆಳಿ ಮೊಯ’ ಮಲಯಾಳಿ ಭಾಷೆಯ ಚಲನಚಿತ್ರ ಪ್ರದರ್ಶನವು ಮುಲುಂಡ್ ಪಶ್ಚಿಮದ ಕಾಳಿದಾಸ ಸಭಾಗೃಹದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಕಲಾವಿದ ಮತ್ತು ಚಿತ್ರನಿರ್ದೇಶಕ ಚಿದಾನಂದ ಉದ್ಯಾವರ ಅವರನ್ನು ಯಂಗ್ಮೆನ್ಸ್ ಭೋವಿ ಅಸೋಸಿಯೇಶನ್ ವತಿಯಿಂದ “ಮೊಯ ಕಲಾರತ್ನ’ ಬಿರುದು ಪ್ರದಾನಿಸಿ ಸಮ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಚಲನಚಿತ್ರದ ಕಲಾವಿದರೆಲ್ಲರನ್ನು ಅಭಿನಂದಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಉದ್ಯಾವರ ಮುಂಬಯಿ ಹದಿನಾರು ಸಮಸ್ತರು ಮತ್ತು ಉದ್ಯಾವರ ವಿದ್ಯಾದಾಯಿನಿ ಸಂಘದ ವತಿಯಿಂದ ಕಲಾವಿದ ಮತ್ತು ಚಿತ್ರನಿರ್ದೇಶಕ ಚಿದಾನಂದ ಉದ್ಯಾವರ ಅವರನ್ನು ಉದ್ಯಾವರ “ಉದಯಸೂರ್ಯ’ ಪ್ರಶಸ್ತಿಯನ್ನು ಪ್ರದಾನಿಸಿ ಗೌರವಿಸಿ ಶುಭಹಾರೈಸಿದರು.
ಪ್ರಾರಂಭದಲ್ಲಿ ಮೊಯ ಸಮಾಜದ ವಿವಿಧ ಸಂಘಟನೆಗಳ ಗಣ್ಯರು ಹಾಗೂ ಯಂಗ್ಮೆನ್ಸ್ ಬೋವಿ ಅಸೋಸಿಯೇಶನ್ನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷ ಚಂದ್ರಕಾಂತ್ ಉಚ್ಚಿಲ್ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಸಂಸ್ಥೆಯ ಗೌರವ ಕಾರ್ಯದರ್ಶಿ ರವಿ ಉಚ್ಚಿಲ್ ಅವರು ಮಾತನಾಡಿ, ನಮ್ಮ ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಪ್ರತಿಭಾವಂತರು ತುಂಬಾ ಮಂದಿ ಇದ್ದಾರೆ. ಅವರನ್ನು ಪ್ರೋತ್ಸಾಹಿಸುವ ಕಾರ್ಯ ನಮ್ಮಿಂದಾಗಬೇಕು. ಈ ನಿಟ್ಟಿನಲ್ಲಿ ಯಂಗ್ಮೆನ್ಸ್ ಬೋವಿ ಅಸೋಸಿಯೇಶನ್ ಶ್ರಮಿಸುತ್ತಿದ್ದು, ಇದಕ್ಕೆ ಎಲ್ಲರ ಸಹಕಾರದ ಅಗತ್ಯವಿದೆ ಎಂದರು.
ಸಮ್ಮಾನ ಸ್ವೀಕರಿಸಿದ ಮಾತನಾಡಿದ ಕಲಾವಿದ ಮತ್ತು ಚಿತ್ರನಿರ್ದೇಶಕ ಚಿದಾನಂದ ಉದ್ಯಾವರ ಅವರು, ನನ್ನನ್ನು ಮುಂಬಯಿಗೆ ಕರೆದು ನಾನು ನಿರ್ಮಿಸಿದ ಈ ಚಿತ್ರವನ್ನು ಇಲ್ಲಿ ಅದ್ದೂರಿಯಿಂದ ಪ್ರದರ್ಶಿಸಲು ಅವಕಾಶ ಮಾಡಿಕೊಟ್ಟ ಯಂಗ್ಮೆನ್ಸ್ ಬೋವಿ ಅಸೋಸಿಯೇಶನ್ ಹಾಗೂ ಇತರ ಸಮಾಜ ಬಾಂಧವ ರಿಗೆ ಋಣಿಯಾಗಿದ್ದೇನೆ. ನಮ್ಮ ಸಮಾಜದಲ್ಲಿ ಅನೇಕ
ಪ್ರತಿಭೆಗಳು ಅರಳುತ್ತಿದ್ದು, ಅವರಿಗೆ ಉತ್ತಮ ವೇದಿಕೆ ಯನ್ನು ನೀಡಿ ಪ್ರೋತ್ಸಾಹಿಸಿದಾಗ ಮಾತ್ರ ಅವರು ಬೆಳೆಯಲು ಸಾಧ್ಯವಾಗುತ್ತದೆ. ಇದು ನನ್ನದೊಂದು ಕಿರು ಪ್ರಯತ್ನವಾಗಿದೆ. ಯಂಗ್ಮೆನ್ಸ್ ಬೋವಿ ಅಸೋಸಿಯೇಶನ್ ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವುದು ಅಭಿನಂದನೀಯ ಎಂದರು.
ಕಾರ್ಯಕ್ರಮದಲ್ಲಿ ಬಂಟರವಾಣಿಯ ಮಾಸಿಕದ ಸಂಪಾದಕ ಪ್ರೇಮನಾಥ್ ಮುಂಡ್ಕೂರು, ತೀಯಾ ಸಮಾಜ ಮುಂಬಯಿ ಅಧ್ಯಕ್ಷ ರವಿ ಮಂಜೇಶ್ವರ ಹಾಗೂ ಸಮಾಜದ ಇತರ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಚಿತ್ರ-ವರದಿ: ಸುಭಾಷ್ ಶಿರಿಯಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ
Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು
Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ
Desi Swara: ಮಸ್ಕತ್- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ
Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್ ಬೇಕು
Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ
ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ
Supreme court ಯೂಟ್ಯೂಬ್ ಲೈವ್ ಸ್ಟ್ರೀಮ್ ಚಾನೆಲ್ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.