ಕಾಂಗರೂಗಳಿಗೆ ಶಾಕ್ ನೀಡಿದ ಹರಿಣಗಳು

ತಾಹೀರ್, ಡ್ಯುಮಿನಿಗೆ ಗೆಲುವಿನ ವಿದಾಯ ಹೇಳಿದ ದ.ಆಫ್ರಿಕಾ

Team Udayavani, Jul 7, 2019, 9:37 AM IST

tahir-d

ಮ್ಯಾಂಚೆಸ್ಟರ್: ವಿಶ್ವಕಪ್ ಕೂಟದ ಕೊನೆಯಲ್ಲಿ ಮೈಕೊಡವಿ ಮೇಲೆದ್ದ ದಕ್ಷಿಣ ಆಫ್ರಿಕಾ ಅಂತಿಮ ಪಂದ್ಯದಲ್ಲಿ ಬಲಿಷ್ಟ ಆಸೀಸ್ ವಿರುದ್ಧ 10 ರನ್ ಗಳ ಅಂತರದ ಜಯ ದಾಖಲಿಸಿದೆ. ಈ ಗೆಲುವಿನ ಮೂಲಕ ಇಮ್ರಾನ್ ತಾಹೀರ್ ಮತ್ತು ಜೀನ್ ಪಾಲ್ ಡ್ಯುಮಿನಿ ಗೆ ಗೆಲುವಿನ ವಿದಾಯ ಹೇಳಿದೆ.

ಇಲ್ಲಿನ ಓಲ್ಡ್ ಟ್ರಾಫೋರ್ಡ್ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಹರಿಣಗಳ ನಾಯಕ ಫಾಫ್ ಡುಪ್ಲೆಸ್ ಮೊದಲು ಬ್ಯಾಟಿಂಗ್ ನಡೆಸುವ ನಿರ್ಧಾರ ಮಾಡಿದರು. ಅದರಂತೆ ಬ್ಯಾಟಿಂಗ್ ಮಾಡಿದ ಆರಂಭಿಕ ಜೋಡಿ ಆಡೆನ್ ಮಾಕ್ರಮ್ ಮತ್ತು ಕ್ವಿಂಟನ್ ಡಿ ಕಾಕ್ ಸರಣಿಯಲ್ಲಿ ಮೊದಲ ಬಾರಿಗೆ ಉತ್ತಮ ಆರಂಭ ನೀಡಿದರು. ಮೊದಲ ವಿಕೆಟ್ ಗೆ 79 ರನ್ ಈ ಜೋಡಿ ಪೇರಿಸಿತ್ತು. ಡಿಕಾಕ್ ಅರ್ಧಶತಕ ಬಾರಿಸಿ ಮಿಂಚಿದರು. ಮೂರನೇ ವಿಕೆಟ್ ಗೆ ಜೊತೆಗೂಡಿದ ನಾಯಕ ಫಾಫ್ ಮತ್ತು ವ್ಯಾನ್ ಡರ್ ಡ್ಯೂಸೆನ್ ಅದ್ಭುತ ಜೊತೆಯಾಟ ನಡೆಸಿದರು. ಫಾಫ್ ಭರ್ಜರಿ ಶತಕ ಬಾರಿಸಿದರು. 94  ಎಸೆತಗಳಿಂದ 100 ಬಾರಿಸಿದ ಫಾಫ್, ವೇಗಿ ಬೆಹ್ರಾಂಡಫ್ ಗೆ ವಿಕೆಟ್ ನೀಡಿದರು. ಡ್ಯೂಸೆನ್ 95 ರನ್ ಗೆ ಔಟಾಗಿ ಶತಕದಿಂದ ವಂಚಿತರಾದರು. ಅಂತಿಮವಾಗಿ ಆರು ವಿಕೆಟ್ ನಷ್ಟಕ್ಕೆ 325 ರನ್ ಗಳಿಸಿತು.

ಆಫ್ರಿಕಾ ನೀಡಿದ ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಆಸೀಸ್ ಗೆ ಆರಂಭಿಕ ಆಘಾತ ಎದುರಾಯಿತು. 32 ರನ್ ಗೆ ಎರಡು ವಿಕೆಟ್ ಕಳೆದುಕೊಂಡ ಕಾಂಗರೂಗಳನ್ನು ಮೇಲಕ್ಕೆತ್ತಿದ್ದು ಡೇವಿಡ್ ವಾರ್ನರ್. ವಾರ್ನರ್ 122 ರನ್ ಗಳಿಸಿದರು. ಅಂತಿಮವಾಗಿ ಕೀಪರ್ ಅಲೆಕ್ಸ್ ಕ್ಯಾರಿ 85 ರನ್ ಗಳಿಸಿ ಹೋರಾಟ ನಡೆಸಿದರು. ಆದರೆ ಅಂತಿಮವಾಗಿ ಆಸೀಸ್ 49.5 ಓವರ್ ಗಳಲ್ಲಿ 2015 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಹರಿಣಗಳಿಗೆ 10 ರನ್ ಗಳಿಂದ ಶರಣಾಯಿತು.

ಶತಕ ಬಾರಿಸಿದ ಫಾಫ್ ಡು ಪ್ಲೆಸಿಸ್ ಪಂದ್ಯಪುರುಷ ಪ್ರಶಸ್ತಿ ಪಡೆದರು. ಈ ಸೋಲಿನಿಂದ ಆಸೀಸ್ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಾರಿತು.

ತಾಹೀರ್, ಡ್ಯುಮಿನಿ ನಿವೃತ್ತಿ: ದಕ್ಷಿಣ ಆಫ್ರಿಕಾದ ಸ್ಪಿನ್ನರ್ ಇಮ್ರಾನ್ ತಾಹೀರ್ ಮತ್ತು ಆಲ್ ರೌಂಡರ್ ಜೀನ್ ಪಾಲ್ ಡ್ಯುಮಿನಿ ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಿಗೆ ವಿದಾಯ ಹೇಳಿದರು. ಇವರಿಬ್ಬರು ಮುಂದೆ ಫ್ರಾಂಚೈಸಿ ಕೂಟಗಳಲ್ಲಿ ಪಾಲ್ಗೊಳ್ಳುವ ಅಭಿಲಾಷೆ ಹೊಂದಿದ್ದಾರೆ. ಆಪ್ರಿಕಾ ಜಯದೊಂದಿಗೆ ಅವರಿಬ್ಬರಿಗೂ ವಿದಾಯ ಹೇಳಿತು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.