ಶಾಸಕರು ಸುಳ್ಳು ಹೇಳ್ಳೋದು ಬಿಡ್ಲಿ

ಆಧಾರ ರಹಿತ ಟೀಕೆ ಬಿಟ್ಟು ಅಭಿವೃದ್ಧಿ ಕಡೆ ಗಮನ ಹರಿಸಲಿ

Team Udayavani, Jul 7, 2019, 10:01 AM IST

07-July-3

ಜಗಳೂರು: ಮಾಜಿ ಶಾಸಕ ಎಚ್.ಪಿ. ರಾಜೇಶ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಜಗಳೂರು: ಹಾಲಿ ಶಾಸಕರು ಅಭಿವೃದ್ದಿಯ ಕಡೆ ಆಸಕ್ತಿ ತೋರುತ್ತಿಲ್ಲ. ಬಹು ಗ್ರಾಮ ಕುಡಿಯುವ ನೀರಿನ ಕಡತ ಇಲ್ಲ ಎಂದು ಜನತೆಗೆ ಸುಳ್ಳು ಹೇಳುತ್ತಿದ್ದಾರೆ. ಆ ಕಡತವನ್ನು ನಾನು ನೀಡುತ್ತೇನೆ. ಕಡತ ನೀಡಿದ ಮೇಲೆ ಶಾಸಕನ ಸ್ಥಾನಕ್ಕೆ ಅವರು ರಾಜೀನಾಮೆ ನೀಡಬೇಕು. ಕಡತ ಸಿಗಲಿಲ್ಲವೆಂದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಶಾಸಕ ಎಚ್.ಪಿ ರಾಜೇಶ್‌ ಹಾಲಿ ಶಾಸಕರಿಗೆ ಸವಾಲು ಹಾಕಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಅಧಿಕಾರಾವಧಿಯಲ್ಲಿ ಕ್ಷೇತ್ರದ ಪ್ರತಿಯೊಂದು ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಸಿಸಿ ರಸ್ತೆ, ಸಂಪರ್ಕ ರಸ್ತೆ ಸಮುದಾಯ ಭವನ ವಸತಿ ಶಾಲೆಗಳನ್ನು ನಿರ್ಮಿಸಿದ್ದೇನೆ. ನೂತನವಾಗಿ ಕೆರೆ ಮತ್ತು ಚೆಕ್‌ ಡ್ಯಾಂ ನಿರ್ಮಿಸಿದ್ದೇನೆ ಎಂದರು.

ಹಾಲಿ ಶಾಸಕರು ಆಧಾರರಹಿತವಾಗಿ ನನ್ನ ಮೇಲೆ ಟೀಕೆ ಮಾಡುವುದನ್ನು ಬಿಟ್ಟು ಅಭಿವೃದ್ಧಿ ಕೆಲಸ ಮಾಡಿ ತೋರಿಸಲಿ. 5 ಕೋಟಿ ರೂ. ಕೆರೆ ಕಾಮಗಾರಿ ಹೆಸರಿನಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದಾರೆ. ನಾವು 1.56 ಕೋಟಿ ರೂ. ವೆಚ್ಚದಲ್ಲಿ ಕೆರೆಯ ಸುತ್ತ ವಾಕ್‌ಪಾತ್‌, ತಡೆಗೋಡೆ, ನಿರ್ಮಿಸಿ ಸಂರಕ್ಷಿಸಲಾಗಿದ್ದು, 55 ಲಕ್ಷ ರೂ. ವೆಚ್ಚದಲ್ಲಿ ರಂಗಪುರ ಗ್ರಾಮದ ಸಮೀಪದ ಚೆಕ್‌ ಡ್ಯಾಂ ನಿರ್ಮಿಸಿ ಈ ಭಾಗದ ನೀರು ಕೆರೆಗೆ ಬರುವಂತೆ ಮಾಡಿದ್ದೇವೆ ಎಂದರು.

35 ಲಕ್ಷ ರೂ.ಗಳಲ್ಲಿ ಟ್ರೀ ಪಾರ್ಕ್‌ ಅಭಿವೃದ್ಧಿ ಮಾಡಲಾಗಿದೆ. ಟ್ರೀ ಪಾರ್ಕ್‌ನಲ್ಲಿ ಗೋಲ್ಮಾಲ್ ನಡೆದಿದೆ ಎಂದಿದ್ದಾರೆ. ಟ್ರೀ ಪಾಕ್‌ ರ್ ಕಾಮಗಾರಿ ಕುರಿತು ಎಸಿಬಿ, ಲೋಕಾಯುಕ್ತ ಸೇರಿ ಇಲಾಖಾ ವಿಚಾರಣೆ ನಡೆದಿದ್ದು, ಯಾವುದೇ ಹಗರಣ ನಡೆದಿಲ್ಲ ಎಂದು ಹೇಳಿದ್ದಾರೆ. ಇವರು ಕೂಡ ತನಿಖೆ ನಡೆಸಲಿ ಎಂದರು.

ಕೆಪಿಸಿಸಿ ಎಸ್‌ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ ಮಾತನಾಡಿ, ತಾಲೂಕಿನಲ್ಲಿ ಅಧಿಕಾರಿಗಳು ಕಚೇರಿಯಲ್ಲಿ ಕೆಲಸ ನಿರ್ವಹಿಸದೆ ಜನಸಾಮಾನ್ಯರನ್ನು ಅಲೆದಾಡಿಸುತ್ತಿದ್ದಾರೆ. ಅಲ್ಲದೆ ನಿತ್ಯ ಫೈಲ್ ಹಿಡಿದು ಶಾಸಕರ ಮನೆ ಮುಂದೆ ನಿಲ್ಲುತ್ತಾರೆ. ಹೀಗಾದರೆ ಜನಸಾಮಾನ್ಯರ ಸಮಸ್ಯೆ ಬಗೆಹರಿಸುವವರು ಯಾರು?. ಭೀಕರ ಬರಗಾಲದಿಂದ ಜನ ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಅಭಾವ ಉಂಟಾಗಿದ್ದು, ಅದನ್ನು ನಿಭಾಯಿಸುವಲ್ಲಿ ತಾಲೂಕು ಆಡಳಿತ ವಿಫಲವಾಗಿ ನೆಪಮಾತ್ರಕ್ಕೆ ಗೋಶಾಲೆ ತೆರೆಯಲಾಗಿದೆ ಎಂದು ಆರೋಪಿಸಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ತಿಪ್ಪೇಸ್ವಾಮಿ ಗೌಡ, ಪ್ರಧಾನ ಕಾರ್ಯದರ್ಶಿ ಪಲ್ಲಾಗಟ್ಟೆ ಶೇಖರಪ್ಪ, ತಾಪಂ ಉಪಾಧ್ಯಕ್ಷ ಮುದೇಗೌಡ್ರು ಬಸವರಾಜಪ್ಪ, ತಾಪಂ ಸದಸ್ಯ ಬಿದರಕೆರೆ ಬಸವರಾಜ್‌, ಯುವ ಕಾಂಗ್ರೆಸ್‌ ಉಪಾಧ್ಯಕ್ಷ ಗುಡ್ಡದಲಿಂಗನಹಳ್ಳಿ ನಾಗರಾಜ್‌, ಮುಖಂಡರಾದ ಬಿ.ಲೋಕೇಶ ,ಬೈರೇಶ್‌, ವೀರಣ್ಣಗೌಡ, ವೆಂಕಟೇಶ್‌ ಪ್ರಕಾಶ್‌, ದಾದಾಪೀರ್‌, ರೇಣುಕೇಶ್‌ ,ಆದರ್ಶ, ಯುಸೂಫ್‌ ಸೇರಿದಂತೆ ಇತರರು ಹಾಜರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.