ಸ್ವಚ್ಛತಾ ಅಭಿಯಾನ ಯಶಸ್ವಿಗೊಳಿಸಿ
•ಜಿಲ್ಲೆಯ ಎಲ್ಲ ನಗರ-ಪಟ್ಟಣಗಳಲ್ಲಿ 'ನಮ್ಮ ಚಿತ್ತ ಸ್ವಚ್ಛತೆಯತ್ತ ಕಾರ್ಯಕ್ರಮ: ವಿನೋತ್ ಪ್ರಿಯಾ
Team Udayavani, Jul 7, 2019, 11:26 AM IST
ಚಿತ್ರದುರ್ಗ: ಸ್ವಚ್ಛತಾ ಆಂದೋಲನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸ್ವಚ್ಛತೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಚಿತ್ರದುರ್ಗ: ಸ್ವಚ್ಛತೆ ಇರುವ ಕಡೆ ಆರೋಗ್ಯ ಇರುತ್ತದೆ. ಉತ್ತಮ ಆರೋಗ್ಯ ಇದ್ದರೆ ಬಲಿಷ್ಠ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅಭಿಪ್ರಾಯಪಟ್ಟರು.
ನಗರದ ಜೆಸಿಆರ್ ವೃತ್ತದ ಬಳಿ ಜಿಲ್ಲಾಡಳಿತ ಮತ್ತು ನಗರಸಭೆ ಸಹಯೋಗದಲ್ಲಿ ಸ್ವಚ್ಛ ಸರ್ವೇಕ್ಷಣದ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಗರ, ಪಟ್ಟಣ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಲು ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಲು ಮೊದಲ ಹಾಗೂ ಮೂರನೇ ಶನಿವಾರ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ಇಂದಿನಿಂದ ಜಿಲ್ಲೆಯ ಎಲ್ಲ ನಗರ, ಪಟ್ಟಣಗಳಲ್ಲಿ ಈ ಕಾರ್ಯಕ್ರಮ ಪ್ರಾರಂಭಿಸಲಾಗಿದೆ. ಈ ಕಾರ್ಯಕ್ರಮ ನಿರಂತರವಾಗಿ ನಡೆಯಲಿದೆ ಎಂದರು.
ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ದವರು ಕಸ ಸಂಗ್ರಹಿಸುವ ವಾಹನಗಳಲ್ಲೇ ಸಾರ್ವಜನಿಕರು ಕಸ ಹಾಕುವ ಮೂಲಕ ಸ್ವಚ್ಛತೆ ಕಾಪಾಡಬೇಕು. ಖಾಲಿ ಸ್ಥಳ, ನಿವೇಶನ ಸೇರಿದಂತೆ ಎಲ್ಲೆಂದರಲ್ಲಿ ಕಸ ಹಾಕಬಾರದು ಎಂದು ಮನವಿ ಮಾಡಿದರು.
ನಗರಸಭೆ ಸದಸ್ಯೆ ರೋಹಿಣಿ ಮಾತನಾಡಿ, ನಗರ, ಪಟ್ಟಣಗಳ ಸ್ವಚ್ಛತೆಗೆ ಜಿಲ್ಲಾಧಿಕಾರಿಗಳು ಹೆಚ್ಚಿನ ಒತ್ತು ನೀಡಿದ್ದು, ನಾಗರಿಕರು ಸಹಕರಿಸಬೇಕು. ಮನೆ ಸುತ್ತಮುತ್ತ, ಖಾಲಿ ಜಾಗಗಳಲ್ಲಿ ಕಸ ಹಾಕಬಾರದು. ಹಸಿ ಕಸ ಮತ್ತು ಒಣ ಕಸ ಹಾಗೂ ಪ್ಲಾಸ್ಟಿಕ್ ಪ್ರತ್ಯೇಕಿಸಿ ಕಸದ ವಾಹನಗಳಲ್ಲೇ ಹಾಕಬೇಕು. ಕೆಲವರು ರಾತ್ರಿ ವೇಳೆಯಲ್ಲಿ ಚರಂಡಿ, ರಸ್ತೆ ಬದಿಯಲ್ಲಿ ಕಸ ಹಾಕುತ್ತಾರೆ. ಇದು ನಿಲ್ಲಬೇಕು ಎಂದರು.
ಇನ್ನರ್ವ್ಹೀಲ್ ಕ್ಲಬ್ ಮಾಜಿ ಅಧ್ಯಕ್ಷ ರಾಜೇಶ್ವರಿ ಮಾತನಾಡಿ, ಜಿಲ್ಲಾಧಿಕಾರಿಗಳೊಂದಿಗೆ ಸ್ವಚ್ಛ ಭಾರತ್ ಕಾರ್ಯಕ್ರಮ ನಡೆಸಿದ್ದೇವೆ. ಸುಂದರ ಪರಿಸರ ನಿರ್ಮಿಸಲು ಪ್ರತಿಯೊಬ್ಬರೂ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಬೇಕು. ಸ್ವತಃ ಜಿಲ್ಲಾಧಿಕಾರಿಯವರೇ ಪೊರಕೆ ಹಿಡಿದು ಕಸ ಗುಡಿಸಿರುವುದು ಎಲ್ಲರಿಗೂ ಉತ್ತೇಜನ ನೀಡಿದಂತಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
‘ನಮ್ಮ ಚಿತ್ತ ಸ್ವಚ್ಛತೆಯತ್ತ’ ಎಂಬ ಘೋಷ ವಾಕ್ಯದೊಂದಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಜಿಲ್ಲಾಧಿಕಾರಿಗಳು ಚಿಂದಿ ಆಯುವವರಿಗೆ ಗುರುತಿನ ಚೀಟಿ ವಿತರಿಸಿದರು. ಜೆಸಿಆರ್ ಬಡಾವಣೆ, ಹಿಮ್ಮತ್ ನಗರ, ಜೆ.ಜೆ. ಹಟ್ಟಿ, ಖಾಲಿ ನಿವೇಶನ ಹಾಗೂ ಸರ್ವಿಸ್ ರಸ್ತೆಗಳ ಮೇಲೆ ಬಿದ್ದಿದ್ದ ಪ್ಲಾಸ್ಟಿಕ್ ಕವರ್, ಬಾಟಲ್ ಮತ್ತಿತರ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ನಗರಸಭೆ ಕಸದ ವಾಹನಗಳಲ್ಲಿ ಹಾಕಲಾಯಿತು.
ನಗರಸಭೆ ಸದಸ್ಯೆ ಅನುರಾಧಾ ರವಿಕುಮಾರ್, ಪರಿಸರ ಇಂಜಿನಿಯರ್ ಜಾಫರ್, ವ್ಯವಸ್ಥಾಪಕ ಜಯಣ್ಣ, ಟಾರ್ಗೆಟ್ ಟೆನ್ ತೌಸಂಡ್ ಬಳಗ, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Western Ghat: ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ ಕಸ್ತೂರಿ ಹೋರಾಟ ಕಿಚ್ಚು
Udupiಸಂತೆಕಟ್ಟೆ ರಸ್ತೆ ಕಥೆ ವ್ಯಥೆ; ಶಾಶ್ವತ ರಸ್ತೆ ಆಮೇಲೆ,ಸಂಚಾರ ಯೋಗ್ಯ ರಸ್ತೆಯೇ ಮೊದಲಾಗಲಿ
State Govt: 14 ಜಿಲ್ಲಾಸ್ಪತ್ರೆಗಳಲ್ಲಿ ಸ್ಕ್ಯಾನ್ ಸೇವೆ ಸ್ಥಗಿತ
Bull Trawl ಬೋಟುಗಳನ್ನು ಅಡ್ಡಗಟ್ಟಿದ ಆಕ್ರೋಶಿತ ನಾಡದೋಣಿ ಮೀನುಗಾರರು
Western Ghats: ಅರಣ್ಯ ನಾಶ ಅಬಾಧಿತ, ತಾಪ ಏರಿಕೆಗೆ ಇಲ್ಲ ಅಂಕುಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Ravi Katapadi: ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ
Divorce; 8 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಊರ್ಮಿಳಾ ಮಾತೋಂಡ್ಕರ್
Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ
US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್
3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.