ಸೀ ವಾಕ್‌ ಆಕರ್ಷಣೆ; ಹೆಚ್ಚಿದ ಜನದಟ್ಟಣೆ

ಮಲ್ಪೆ ಬೀಚ್‌ನಲ್ಲಿ ನೀರಿಗಿಳಿಯಲು ಸಾಧ್ಯವಿಲ್ಲದ್ದರಿಂದ ಸೀ ವಾಕ್‌ನತ್ತ ಜನರ ದಂಡು

Team Udayavani, Jul 8, 2019, 5:57 AM IST

0707MLE2A

ಮಲ್ಪೆ: ಮುಂಗಾರು ಕ್ಷೀಣಗೊಂಡಿದ್ದರೂ, ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರು ನೀರಿಗಿಳಿಯುವಂತಿಲ್ಲ. ಆದ್ದರಿಂದ ಕಡಲ ಸೌಂದರ್ಯ ವೀಕ್ಷಿಸಲು ಜನರು ಸೀ ವಾಕ್‌ನತ್ತ ಲಗ್ಗೆ ಹಾಕುತ್ತಿದ್ದಾರೆ. ವಾರಾಂತ್ಯದಲ್ಲಂತೂ ಇಲ್ಲಿ ಜನದಟ್ಟಣೆ ಉಂಟಾಗುತ್ತಿದೆ.

ಮಲ್ಪೆ ಬೀಚ್‌ನಲ್ಲಿ 20 ಅಡಿಗಳಷ್ಟು ದೂರದಲ್ಲಿ ನೆಟ್‌ ಅಳವಡಿಸಲಾಗಿದ್ದು, ದೂರದಲ್ಲೇ ನಿಂತು ಸಮುದ್ರ ನೋಡಬೇಕಾಗಿದೆ. ಇದರಿಂದ ಸೀ ವಾಕ್‌ಗೆ ಜನ ಹೋಗುತ್ತಿದ್ದಾರೆ. ಸ್ಥಳೀಯರೂ ಸೀ ವಾಕ್‌ ಸೌಂದರ್ಯಕ್ಕೆ ಮನಸೋತಿದ್ದಾರೆ.

ದೈತ್ಯ ಅಲೆಗಳ ಆಕರ್ಷಣೆ
ಸೀ ವಾಕ್‌ ವೇನಲ್ಲಿ ಸಂಚರಿಸುವ ಪ್ರವಾಸಿಗರಿಗೆ ಸಮುದ್ರದ ವಿಹಂಗಮ ನೋಟದ ದರ್ಶನವಾಗುತ್ತದೆ. ಅಲ್ಲದೆ ಮಳೆಗಾಲದಲ್ಲಿ ಸಮುದ್ರದ ಅಲೆಗಳ ಅಬ್ಬರ ಜಾಸ್ತಿ ಇರುವುದರಿಂದ ದೈತ್ಯ ಅಲೆಗಳು ಬಂಡೆಕಲ್ಲಿಗೆ ಅಪ್ಪಳಿಸುವ ರಮಣೀಯ ದೃಶ್ಯವನ್ನು ಆಸ್ವಾದಿಸುವುದೇ ಒಂದು ಸೊಬಗು.

ಐಲ್ಯಾಂಡ್‌ ನಿಷೇಧದ ಬಳಿಕ ಮತ್ತಷ್ಟು ಹೆಚ್ಚು
ಸೀ ವಾಕ್‌ ಆರಂಭಗೊಂಡ ದಿನದಿಂದಲೂ ಇಲ್ಲಿಗೆ ಬರುವ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿಲ್ಲ. ರಜಾ ದಿನಗಳಲ್ಲಿ ಸಂಜೆ ವೇಳೆ ನೂಕು ನುಗ್ಗಲು ಇರುತ್ತದೆ. ಸೈಂಟ್‌ಮೇರೀಸ್‌ ಬೋಟಿನ ಯಾನ ನಿಷೇಧವಾದ ಬಳಿಕ ಸೀವಾಕ್‌ ನೋಡಲು ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಳಗೊಂಡಿದೆ. ಕಳೆದ ಮಳೆಗಾಲಕ್ಕೆ ಹೋಲಿಸಿದರೆ ಈ ಬಾರಿ ಹೆಚ್ಚು ಸಂಖ್ಯೆಯಲ್ಲಿ ಜನ ಇಲ್ಲಿಗೆ ಬರುತ್ತಿದ್ದಾರೆ. ಇದೀಗ ನಿತ್ಯ 600ರಿಂದ 700 ಮಂದಿ ಬಂದರೆ ವಾರಾಂತ್ಯ 2,000 ಗಡಿ ದಾಟುತ್ತದೆ.

ಮೀನಿಗೆ ಗಾಳ ಹಾಕುವ ಮೋಜು
ಸೀ ವಾಕ್‌ನ ಎರಡೂ ಬದಿಯಲ್ಲಿ ಬಂಡೆಕಲ್ಲಿನಲ್ಲಿ ಕುಳಿತು ಮೀನಿಗೆ ಗಾಳ ಹಾಕುವ ದೃಶ್ಯ ಸರ್ವೇ ಸಾಮಾನ್ಯ ಇಲ್ಲಿ ಬೆಳಗ್ಗೆಯಿಂದ ರಾತ್ರಿವರೆಗೂ ಗಾಳ ಹಾಕುವವರ ದಂಡೇ ಇರುತ್ತದೆ. ಸೀ ವಾಕ್‌ ನಿರ್ಮಾಣ ಆಗುವ ಮೊದಲು ಕೂಡ ಇಲ್ಲಿನ ಬ್ರೇಕ್‌ ವಾಟರ್‌ನಲ್ಲಿ ಗಾಳ ಹಾಕುತ್ತಿದ್ದರು.

ಭೇಟಿ ನೀಡುವವರ
ಸಂಖ್ಯೆ ಹೆಚ್ಚಳ
ಮಳೆಯ ಬಿಡುವಿನಿಂದಾಗಿ ಜನ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಸಮುದ್ರದ ದೊಡ್ಡ ದೊಡ್ಡ ಅಲೆಗಳು ಬಂಡೆಗೆ ಬಡಿಯುವ ದೃಶ್ಯ ರೋಮಾಂಚನವಾಗಿದೆ. ಜತೆಗೆ ಇಲ್ಲಿ ಗಾಳ ಹಾಕಿ ಮೀನು ಹಿಡಿಯುವುದನ್ನೂ ನೋಡಬಹುದು.
– ಚೇತನ್‌ ಬಾಪುತೋಟ, ಸ್ಥಳೀಯರು

ಹೆಚ್ಚು ಖುಷಿ
ಸಮುದ್ರವನ್ನು ನೋಡಲು ಕುಟುಂಬದೊಂದಿಗೆ ಮಲ್ಪೆ ಬೀಚ್‌ಗೆ ಬಂದಿದ್ದೆವು, ಆದರೆ ಈಗ ಅಲ್ಲಿ ನೀರಿಗೆ ಇಳಿಯಲು ಬಿಡುತ್ತಿಲ್ಲ. ದೂರದಲ್ಲಿ ನಿಂತು ನೋಡಬೇಕು. ಆದರೆ ಸೀ ವಾಕ್‌ಗೆ ಬಂದರೆ ಸಮುದ್ರದೊಳಗೆ ಬಂದ ಹೊಸ ಅನುಭವವಾಗುತ್ತಿದೆ. ಮಕ್ಕಳಿಗೂ ಖುಷಿಯಾಗುತ್ತದೆ.
– ಶ್ರೇಯಾ ಚೇತನ್‌, ಬೆಂಗಳೂರು

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.