“ಸ್ಯಾನಿಟರಿ ನ್ಯಾಪ್ಕಿನ್ಸ್‌’ ಸಂಸ್ಕರಣೆಗೆ ಪ್ರತ್ಯೇಕ ಯಂತ್ರ


Team Udayavani, Jul 13, 2019, 5:00 AM IST

f-6

ಮಹಾನಗರ: ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕಿಸುವ ಹೊಸ ನೀತಿಗೆ ಮೊರೆ ಹೋದ ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇದೀಗ ಸ್ಯಾನಿಟರಿ ತ್ಯಾಜ್ಯ ನಿರ್ವಹಣೆಗೆ “ಸ್ಯಾನಿಟರಿ ನ್ಯಾಪ್ಕಿನ್ಸ್‌ ಇನ್ಸಿನರೇಟರ್’ ವ್ಯವಸ್ಥೆ ಅಳವಡಿಸಲು ನಿರ್ಧರಿಸಲಾಗಿದೆ.

ಸ್ವತ್ಛ ಭಾರತ ಯೋಜನೆಯಡಿಯಲ್ಲಿ ಒಟ್ಟು 12.56 ಕೋಟಿ ರೂ. ವೆಚ್ಚದಲ್ಲಿ ಮಂಗಳೂರಿನ ಪ್ರಮುಖ 8 ಶೌಚಾಲಯಗಳಲ್ಲಿ ಪ್ರತ್ಯೇಕ ಸ್ಯಾನಿಟರಿ ನ್ಯಾಪಿRನ್‌ ಇನ್ಸಿನರೇಟರ್ ಯಂತ್ರಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ಈ ಕುರಿತ ವಿಸ್ತೃತ ಯೋಜನ ವರದಿ (ಡಿಪಿಆರ್‌)ಗೆ ಒಪ್ಪಿಗೆ ಲಭಿಸಿದ್ದು, ಟೆಂಡರ್‌ ಪ್ರಕ್ರಿಯೆ ಆರಂಭವಾಗಿದೆ.

ನಗರದ 8 ಕಡೆಗಳಲ್ಲಿ ಸಾರ್ವಜನಿಕ ಶೌಚಾಲಯಗಳಲ್ಲಿ ಸ್ಯಾನಿಟರಿ ಇನ್ಸಿನರೇಟರ್ ವ್ಯವಸ್ಥೆ ಅಳವಡಿಸಲಾಗುತ್ತದೆ. ಸ್ಯಾನಿಟರಿ ನ್ಯಾಪ್ಕಿನ್ಸ್‌ ಇನ್ಸಿನರೇಟರ್ರ ಮೂಲಕ ಸ್ಯಾನಿಟರ್‌ ತ್ಯಾಜ್ಯಗಳನ್ನು ಸ್ಥಳದಲ್ಲೇ ಸಂಸ್ಕರಿಸ ಲಾಗುತ್ತದೆ. ಇದರಿಂದ ಡಂಪಿಂಗ್‌ ಯಾರ್ಡ್‌ಗಳಿಗೆ ತೆರಳುವ ಸ್ಯಾನಿಟರಿ ತ್ಯಾಜ್ಯ ಪ್ರಮಾಣ ಕಡಿಮೆಯಾಗಲಿದೆ.

ಸದ್ಯ ನಗರ ವ್ಯಾಪ್ತಿಯಲ್ಲಿ ದಿನಕ್ಕೆ 350ರಿಂದ 400 ಟನ್‌ ಕಸಗಳು ಸಂಗ್ರಹ ವಾಗುತ್ತಿದ್ದು, ಅದನ್ನು ಹಸಿ ಕಸ, ಒಣ ಕಸ ಎಂಬುದಾಗಿ ಪ್ರತ್ಯೇಕಿಸುವ ಸಲುವಾಗಿ ಕಠಿನ ಕ್ರಮ ಜರಗಿಸಲಾಗುತ್ತಿದೆ. ಹೊಸ ನಿಯಮದಂತೆ ಸ್ಯಾನಿಟರಿ ತ್ಯಾಜ್ಯಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸುವ ವ್ಯವಸ್ಥೆ ಮಾಡಲಾಗಿದೆ. ಸಂಗ್ರಹಿಸಿದ ಸ್ಯಾನಿಟರಿ ತ್ಯಾಜ್ಯಗಳನ್ನು ಆಯಾಯಾ ವಲಯದ ಕಸ ಸಂಗ್ರಹಣ ವಾಹನಗಳು ಅವರ ಮಿತಿಯೊಳಗಿನ ಸಾರ್ವಜನಿಕ ಶೌಚಾಲಯಗಳಲ್ಲಿ ಅಳವಡಿಸಲಾಗುವ ಸ್ಯಾನಿಟರಿ ಇನ್ಸಿನರೇಟರ್ ಬಳಿ ತರುತ್ತಾರೆ. ಶೌಚಾಲಯ ನಿರ್ವಾಹಕರು ಅದನ್ನು ಮುಂದಿನ ಪ್ರಕ್ರಿಯೆಗೆ ಒಳಪಡಿಸುತ್ತಾರೆ. ಡಂಪಿಂಗ್‌ ಯಾರ್ಡ್‌ಗಳಿಗೆ ಹೋಗುವ ಸ್ಯಾನಿಟರಿ ತ್ಯಾಜ್ಯಗಳನ್ನು ಸ್ಯಾನಿಟರಿ ನ್ಯಾಪ್ಕಿನ್ಸ್‌ ಇನ್ಸಿನರೇಟರ್ ಮೂಲಕ ಸಂಸ್ಕರಿಸಿದಾಗ ಅಲ್ಲಿಗೆ ಹೋಗುವ ತ್ಯಾಜ್ಯಗಳ ಸಂಖ್ಯೆಯಲ್ಲಿ ಇಳಿತವಾಗಲಿದೆ.

ಸ್ಯಾನಿಟರಿ ತ್ಯಾಜ್ಯ ಪ್ರತ್ಯೇಕ ಸಂಗ್ರಹ
ಪಾಲಿಕೆ ವ್ಯಾಪ್ತಿಯಲ್ಲಿ ಸ್ಯಾನಿಟರಿ ತ್ಯಾಜ್ಯವನ್ನು ಪ್ರತಿ ದಿನ ಪ್ರತ್ಯೇಕವಾಗಿ ಸಂಗ್ರಹಿಸಲು ನಿರ್ಧರಿಸಲಾಗಿದೆ. ಈ ಹಿಂದೆ ಎಲ್ಲ ತ್ಯಾಜ್ಯಗಳೊಂದಿಗೆ ಸ್ಯಾನಿಟರಿ ತ್ಯಾಜ್ಯಗಳನ್ನು ಸಂಗ್ರಹಿಸಲಾಗುತ್ತಿತ್ತು. ಇದರಿಂದ ಸಂಸ್ಕರಣೆಗೆ ಪ್ರತ್ಯೇಕಿಸಲು ಕಷ್ಟವಾಗುತ್ತಿತ್ತು. ಕೆಲವು ಮನೆ, ಹಾಸ್ಟೆಲ್‌ಗ‌ಳಲ್ಲಿ ಸ್ಯಾನಿಟರಿ ತ್ಯಾಜ್ಯಗಳನ್ನು ಶೌಚಾಲಯಕ್ಕೆ ಹಾಕುವುದರಿಂದ ಮ್ಯಾನ್‌ಹೋಲ್‌ ಬ್ಲಾಕ್‌ ಆಗಿ ಸಮಸ್ಯೆಗಳು ಎದುರಾಗುತ್ತಿತ್ತು. ಈ ಎಲ್ಲ ಸಮಸ್ಯೆಗಳ ಪರಿಹಾರಕ್ಕಾಗಿ ಪಾಲಿಕೆ ದಿನನಿತ್ಯ ಪ್ರತ್ಯೇಕ ಚೀಲದ ಮೂಲಕ ಸ್ಯಾನಿಟರಿ ತ್ಯಾಜ್ಯಗಳನ್ನು ಸಂಗ್ರಹಿಸಿ ಸಂಸ್ಕರಣೆಗೆ ನಿರ್ಧರಿಸಲಾಗಿದೆ.

ಏನಿದು ಸ್ಯಾನಿಟರಿ ನ್ಯಾಪ್ಕಿನ್ಸ್‌ ಇನ್ಸಿನರೇಟರ್?
ಸ್ಯಾನಿಟರಿ ಇನ್ಸಿನರೇಟರ್ ಸ್ಯಾನಿಟರಿ ತ್ಯಾಜ್ಯಗಳನ್ನು ಸಂಸ್ಕರಣೆ ಮಾಡುವ ಯಂತ್ರವಾಗಿದ್ದು, ಇದರಲ್ಲಿ 50ರಿಂದ 100 ಕೆಜಿ ಸಾಮರ್ಥ್ಯ ಇರುತ್ತದೆ. ಈ ಯಂತ್ರದ ಮೂಲಕ ಸ್ಯಾನಿಟರಿ ತ್ಯಾಜ್ಯಗಳನ್ನು ಅಲ್ಲೇ ಸಂಸ್ಕರಣೆ ಮಾಡಲಾಗುತ್ತದೆ. ನಗರದ 8 ಜಾಗಗಳಲ್ಲಿ ಮಾತ್ರ ಅಳವಡಿಸಲಾಗುತ್ತಿದ್ದು, ಅದಕ್ಕಾಗಿ ನಿತ್ಯ ನಗರ ಪ್ರದೇಶಗಳಲ್ಲಿ ಸಂಗ್ರಹವಾಗುವ ಸ್ಯಾನಿಟರಿ ತ್ಯಾಜ್ಯಗಳ ಪ್ರಮಾಣವನ್ನು ತಿಳಿಯಲು ನಿತ್ಯ ಕಸ ಸಂಗ್ರಹದಲ್ಲಿ ಸ್ಯಾನಿಟರಿ ತ್ಯಾಜ್ಯಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸಲಾಗುತ್ತಿದೆ.

ಸ್ಯಾನಿಟರಿ ತ್ಯಾಜ್ಯ ಪ್ರತ್ಯೇಕಿಸಿ ಕೊಡಿ
ಸ್ವತ್ಛತೆ, ಸಂಸ್ಕರಣೆ ಹಿನ್ನೆಲೆಯಲ್ಲಿ ಪಾಲಿಕೆ ಸ್ಯಾನಿಟರಿ ನ್ಯಾಪ್ಕಿನ್‌ ಇನ್ಸಿನರೇಟರ್ ಅಳವಡಿಸಲು ಸಿದ್ಧತೆ ನಡೆಸಿದ್ದು, ಈ ಹಿನ್ನಲೆಯಲ್ಲಿ ಜನರು ಮನೆಯ ಸ್ಯಾನಿಟರಿ ತ್ಯಾಜ್ಯಗಳನ್ನು ಕಸ ಸಂಗ್ರಹಣೆಗೆ ಬರುವ ವಾಹನಗಳಿಗೆ ಪ್ರತ್ಯೇಕವಾಗಿ ನೀಡಬೇಕು. ಪ್ರಸ್ತುತ ಸ್ಯಾನಿಟರಿ ನ್ಯಾಪ್ಕಿನ್‌ ಇನ್ಸಿನರೇಟರ್ ಅಳವಡಿಕೆಯಾಗದೆ ಇದ್ದರೂ ಯಂತ್ರ ಖರೀದಿಯ ಸಾಮಾರ್ಥ್ಯ ನಿಗದಿಪಡಿಸಲು ಈಗಾಲೇ ಪ್ರತ್ಯೇಕವಾಗಿ ನೀಡಬೇಕಾಗುತ್ತದೆ.

 ಸ್ಯಾನಿಟರಿ ತ್ಯಾಜ್ಯಕ್ಕೆ ಮುಕ್ತಿ
ಹಸಿ, ಒಣ ಕಸ ಮುಕ್ತಿಗೆ ಪರ್ಯಾಯ ದಾರಿಯನ್ನು ಈಗಾಗಲೇ ಕಂಡುಹಿಡಿಯಲಾಗಿತ್ತು. ಆದರೆ ಸ್ಯಾನಿಟರಿ ತ್ಯಾಜ್ಯಗಳನ್ನು ಡಂಪಿಂಗ್‌ ಯಾರ್ಡ್‌ಗೆ ಕೊಂಡೊಯ್ದು ಪ್ರತ್ಯೇಕಿಸಿ ಸಂಸ್ಕರಿಸುವುದು ಕಷ್ಟದ ಕೆಲಸವಾಗಿತ್ತು. ಅದಕ್ಕಾಗಿ ಪಾಲಿಕೆ ಈ ನಿರ್ಧಾರ ಕೈಗೊಂಡಿದೆ.
– ಮಧು ಮನೋಹರ್‌, ಪರಿಸರ ಅಭಿಯಂತರರು

– ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.