ಜಿಟಿಟಿಸಿ ತರಬೇತಿ ಕೇಂದ್ರ ಮಂಜೂರು

ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಸಚಿವ ಪರಮೇಶ್ವರನಾಯ್ಕ ಹೇಳಿಕೆ

Team Udayavani, Jul 14, 2019, 11:09 AM IST

14-JULY-14

ಹೂವಿನಹಡಗಲಿ: ಪಟ್ಟಣದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ತರಬೇತಿಗಳ ಉದ್ಘಾಟನಾ ಕಾರ್ಯಕ್ರಮವನ್ನು ರಾಜ್ಯ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಸಚಿವ ಪಿಟಿ.ಪರಮೇಶ್ವರನಾಯ್ಕ ಉದ್ಘಾಟಿಸಿದರು.

ಹೂವಿನಹಡಗಲಿ: ಈ ಭಾಗದ ಬಡವರಿಗೆ, ರೈತರ ಮಕ್ಕಳಿಗೆ ಅನುಕೂಲವಾಗಲು ಜಿಟಿಟಿಸಿ ತರಬೇತಿ ಕೇಂದ್ರವನ್ನು ಮಂಜೂರು ಮಾಡಲಾಗಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ರಾಜ್ಯ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಪಿ.ಟಿ. ಪರಮೇಶ್ವರನಾಯ್ಕ ಹೇಳಿದರು.

ಪಟ್ಟಣದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಂದಾಜು 27.50 ಕೋಟಿ ರೂ. ವೆಚ್ಚದಲ್ಲಿ ತರಬೇತಿ ಕೇಂದ್ರ ಮಂಜೂರು ಮಾಡಲಾಗಿದ್ದು ಎಸ್‌ಎಸ್‌ಎಲ್ಸಿ, ಪಿಯುಸಿ, ಡಿಪ್ಲೋಮಾ ಇತರೆ ವಿದ್ಯಾವಂತ ಯುವಕರಿಗೆ ಇದರ ಅವಶ್ಯಕತೆ ಇದೆ. ಅಲ್ಲದೆ ಈ ಭಾಗದಲ್ಲಿನ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಅನುಕೂಲವಾಗುತ್ತದೆ ಎಂದರು.

ಪ್ರಸ್ತುತ ಕೇಂದ್ರ ಪ್ರಾರಂಭ ಮಾಡಲು ಸರ್ಕಾರಿ ಐಟಿಐ ಕಾಲೇಜಿನ ಸುಮಾರು 14 ಎಕರೆ ಜಮೀನು ಇದ್ದು ಅಲ್ಲಿ ಎಲ್ಲ ಅನುಕೂಲ ಕಲ್ಪಿಸುವಂಥ ಕಟ್ಟಡ ನಿರ್ಮಿಸಲಾಗುವುದು. ಈ ಕಾಮಗಾರಿ ಪೂರ್ಣಗೊಳ್ಳುವವರೆಗೆ ಮಿನಿ ವಿಧಾನಸೌಧದ ಹಳೇ ಕಟ್ಟಡದಲ್ಲಿ ತರಬೇತಿ ಕೇಂದ್ರ ನಡೆಸಲಾಗುವುದು ಎಂದರು.

ಇನ್ನು ಈ ಭಾಗದಲ್ಲಿ ಲಂಬಾಣಿ ಸಮುದಾಯ ಒಳಗೊಂಡಂತೆ ಬಹುತೇಕ ಗ್ರಾಮೀಣ ಭಾಗದ ಜನ ಉದ್ಯೋಗ ಅರಸಿ ಕಾಫಿ ಸೀಮೆಗೆ ಹೋಗುತ್ತಿರುತ್ತಾರೆ. ಇದನ್ನು ತಡೆಯಲು ಸುಮಾರು 70-80 ಲಕ್ಷ ರೂ. ವೆಚ್ಚದಲ್ಲಿ ಕಸೂತಿ ಕೇಂದ್ರ ಪ್ರಾರಂಭಿಸಲಾಗುವುದು. ತರಬೇತಿ ಸಮಯದಲ್ಲಿ 5000ರೂ. ತರಬೇತಿ ಭತ್ತೆ ನೀಡಲಾಗುವುದು. ಇದಕ್ಕಾಗಿ ಈಗಾಗಲೇ ತಾಲೂಕಿನ ಸುಮಾರು 8 ತಾಂಡಾಗಳಿಂದ 387 ಆಸಕ್ತರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕ್ಷೇತ್ರದ ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ಮುಖಂಡರುಗಳಾದ ಐಗೊಳ್‌ ಚಿದಾನಂದ್‌, ವಾರದ ಗೌಸು ಮೊಹದ್ದಿನ್‌, ಅಟವಾಳಗಿ ಕೊಟ್ರೇಶ್‌ ಅರವಳ್ಳಿ ವೀರಣ್ಣ, ಬಿ.ಹನುಮಂತಪ್ಪ, ಜ್ಯೋತಿ ಮಲ್ಲಣ್ಣ, ತಾಪಂ ಅಧ್ಯಕ್ಷೆ ಕೆ. ಶಾರದಮ್ಮ, ಜಿಪಂ ಸದಸ್ಯೆ ವೀಣಾ ಪರಮೇಶ್ವರಪ್ಪ, ಎಸ್‌.ಎಂ. ಲಲಿತಾಬಾಯಿ ಸೋಮ್ಯಾನಾಯ್ಕ, ತಾಪಂ ಉಪಾಧ್ಯಕ್ಷೆ ಪುಷ್ಪಾವತಿ, ಜಿಟಿಟಿಸಿ ವ್ಯವಸ್ಥಾಪಕ ನಿರ್ದೇಶಕ ಎಚ್. ರಾಘವೇಂದ್ರ, ಜಿಲ್ಲಾ ಬಿಸಿಎಂ ಅಧಿಕಾರಿ ರಾಜಣ್ಣ, ತಹಶೀಲ್ದಾರ್‌ ಕೆ. ರಾಘವೇಂದ್ರರಾವ್‌, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಯು.ಎಚ್. ಸೋಮಶೇಖರ್‌ ಮುಂತಾದವರು ಇದ್ದರು.

ಜಿಟಿಟಿಸಿ ಕಾಲೇಜು ಪ್ರಾಚಾರ್ಯ ಪುಂಡಲೀಕಾಕ್ಷ ಸ್ವಾಗತಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.