ಅಲ್ಪಸಂಖ್ಯಾಕರ ಅಭಿವೃದ್ಧಿ ನಿಗಮ: ಯೋಜನೆಗಳಲ್ಲಿ ಶೇ.100ರಷ್ಟು ಪ್ರಗತಿ


Team Udayavani, Jul 15, 2019, 5:04 AM IST

alpa-sankyata

ಉಡುಪಿ: ಜಿಲ್ಲೆಯ ಅಲ್ಪಸಂಖ್ಯಾಕರ ಅಭಿವೃದ್ಧಿ ನಿಗಮ 2018-19ನೇ ಸಾಲಿನ ಸ್ವಯಂ ಉದ್ಯೋಗ, ಶ್ರಮಶಕ್ತಿ ಯೋಜನೆ, ಗಂಗಾ ಕಲ್ಯಾಣ ಯೋಜನೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದೆ. ನಿಗಮ ನೀಡುವ ಗುರಿಗಿಂತ ಸಲ್ಲಿಕೆಯಾಗುವ ಅರ್ಜಿಗಳ ಸಂಖ್ಯೆ ದುಪ್ಪಟ್ಟಾಗಿದೆ.

ಸ್ವಯಂ ಉದ್ಯೋಗ ಯೋಜನೆ
ಜಿಲ್ಲೆಯಲ್ಲಿ “ಸ್ವಯಂ ಉದ್ಯೋಗ’ ಯೋಜನೆಯಡಿ ನಿಗಮಕ್ಕೆ ನೀಡುವ ಗುರಿಗಿಂತ ಮೂರುಪಟ್ಟು ಅಧಿಕ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುತ್ತಿವೆ. 2018-19ರಲ್ಲಿ 59 ಭೌತಿಕ ಗುರಿ, 52.90 ಲ.ರೂ. ಆರ್ಥಿಕ ಗುರಿ ನೀಡಲಾಗಿತ್ತು. 2.37 ಕೊ.ರೂ. ಮೊತ್ತದ 172 ಅರ್ಜಿಗಳು ಸ್ವೀಕೃತಗೊಂಡಿವೆ. ಈ ಯೋಜನೆಯಡಿಯಲ್ಲಿ ಬ್ಯಾಂಕ್‌, ಹಣಕಾಸು ಸಂಸ್ಥೆಗಳ ಸಹಯೋಗದೊಂದಿಗೆ ಗರಿಷ್ಠ 5 ಲ.ರೂ. ಮಿತಿ ವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ. 5 ಲ.ರೂ.ಗೆ ಶೇ. 33ರಷ್ಟು ಹಾಗೂ 1 ಲ.ರೂ. ಮಿತಿಯೊಳಗಿರುವ ಯೋಜನೆಗೆ ಶೇ. 50ರಷ್ಟು ಸಹಾಯಧನ ನಿಗಮ ನೀಡಲಿದೆ.

ಶ್ರಮಶಕ್ತಿ; ಸ್ವೀಕೃತ ಅರ್ಜಿ 5,908
ನಿಗಮದಿಂದ ಶ್ರಮಶಕ್ತಿ ಯೋಜನೆಯಡಿ 2018-19ನೇ ಸಾಲಿನಲ್ಲಿ ಜಿಲ್ಲೆಗೆ ಕೇವಲ 77 ಭೌತಿಕ ಹಾಗೂ 38.35 ಲ.ರೂ. ಆರ್ಥಿಕ ಗುರಿ ನೀಡಲಾಗಿದೆ. ಆದರೆ 29.54 ಕೊ.ರೂ. ಮೊತ್ತದ 5,908 ಅರ್ಜಿಗಳು ಸ್ವೀಕೃತಗೊಂಡಿವೆ. 2016-17ರಲ್ಲಿ 262 ಭೌತಿಕ ಹಾಗೂ ಆರ್ಥಿಕ 1.31ಕೋ. ಗುರಿ ನಿಗದಿ ಪಡಿಸಿದ್ದು, ಆದರೆ ಸಲ್ಲಿಕೆಯಾದ ಅರ್ಜಿಗಳ ಸಂಖ್ಯೆ 673. ಈ ಯೋಜನೆಯಡಿ 50,000 ರೂ. ಮೊತ್ತವನ್ನು ಶೇ. 4ರ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ. ನಿಗದಿತ ಸಮಯದೊಳಗೆ ಸಾಲ ಮರುಪಾವತಿ ಮಾಡಿದರೆ ಅರ್ಜಿದಾರರಿಗೆ ಶೇ.50ರಷ್ಟು ಬ್ಯಾಕ್‌ ಎಂಡ್‌ ಸಹಾಯಧನ ಸಿಗಲಿದೆ.

ಗಂಗಾ ಕಲ್ಯಾಣ ಯೋಜನೆ
ಈ ಯೋಜನೆಯಡಿ 2018-19ನೇ ಸಾಲಿನಲ್ಲಿ ನಿಗಮಕ್ಕೆ ಭೌತಿಕ 41, ಆರ್ಥಿಕ 82 ಲ.ರೂ., ಗುರಿ ನೀಡಿದ್ದು, 43 ಅರ್ಜಿ ಸ್ವೀಕೃತವಾಗಿದೆ. 2016-17ರಲ್ಲಿ 58 ಭೌತಿಕ ಹಾಗೂ ಆರ್ಥಿಕ 87 ಕೋ. ರೂ. ಗುರಿ ನಿಗದಿಪಡಿಸಿದ್ದು, 58 ಅರ್ಜಿಗಳು ಸಲ್ಲಿಕೆಯಾಗಿವೆೆ. ಈ ಯೋಜನೆಯಡಿ ಕೃಷಿ ಭೂಮಿ ಹೊಂದಿರುವ ರೈತರಿಗೆ ಕೊಳವೆ ಬಾವಿ, ಪಂಪ್‌, ವಿದ್ಯುದೀಕರಣಕ್ಕೆ, ಬಾವಿ ನಿರ್ಮಿಸಲು ಆರ್ಥಿಕ ನೆರವು ನೀಡಲಾಗುತ್ತದೆ.

ಸ್ಪಂದನೆ ಉತ್ತಮವಾಗಿದೆ ಯಾಕೆ?
ಜಿಲ್ಲೆಯಲ್ಲಿ ಸ್ವಯಂ ಉದ್ಯೋಗ ಹಾಗೂ ಶ್ರಮಶಕ್ತಿ ಯೋಜನೆಯಡಿಯಲ್ಲಿ ಫ‌ಲಾನುಭವಿಗಳಿಗೆ ಕಡಿಮೆ ಬಡ್ಡಿ ಹಾಗೂ ಗರಿಷ್ಠ ಮಿತಿಯಲ್ಲಿ ಸಹಾಯಧನ ನೀಡಲಾಗುತ್ತಿದೆ. ಇದರಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಹಾಗೂ ಯುವ ಜನರು ಸ್ವ ಉದ್ಯೋಗ ಪ್ರಾರಂಭಿಸಲು ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ.

ಫ‌ಲಾನುಭವಿಗಳ ಆಯ್ಕೆ
ಯೋಜನೆಗಳಿಗೆ ಉತ್ತಮ ಸ್ಪಂದನೆ ಇದೆ. ನಿಗದಿತ ಗುರಿಗಿಂತ ಹೆಚ್ಚಿನ ಅರ್ಜಿಗಳು ಬರುತ್ತಿವೆ. ಈ ನಿಟ್ಟಿನಲ್ಲಿ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಸಮಿತಿ ರಚಿಸಿ ಫ‌ಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.
-ಮುಹಮ್ಮದ್‌ ಶಾಫಾÌನ್‌, ಅಲ್ಪಸಂಖ್ಯಾಕ ನಿಗಮದ ವ್ಯವಸ್ಥಾಪಕ, ಉಡುಪಿ ಜಿಲ್ಲೆ

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.